Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದ್ವಿಪಕ್ಷೀಯ ಸಂಬಂಧ ಸುಧಾರಣೆಯ ಉದ್ದೇಶ:...

ದ್ವಿಪಕ್ಷೀಯ ಸಂಬಂಧ ಸುಧಾರಣೆಯ ಉದ್ದೇಶ: ಟರ್ಕಿ ಅಧ್ಯಕ್ಷ ಎರ್ಡೋಗನ್ ಅಮೆರಿಕಾ ಭೇಟಿ

ವಾರ್ತಾಭಾರತಿವಾರ್ತಾಭಾರತಿ19 Sept 2021 11:45 PM IST
share

ಇಸ್ತಾನ್ಬುಲ್, ಸೆ.19: ಅಫ್ಗಾನಿಸ್ತಾನದ ಬೆಳವಣಿಗೆಯ ಬಳಿಕ ಅಮೆರಿಕಾದೊಂದಿಗಿನ ಸಂಬಂಧ ಸುಧಾರಿಸುತ್ತಿರುವ ನಡುವೆಯೇ, ಟರ್ಕಿಯ ಅಧ್ಯಕ್ಷ ರೆಸೆಪ್ ತಯೀಪ್ ಎರ್ಡೋಗನ್ ನ್ಯೂಯಾರ್ಕ್ಗೆ ಭೇಟಿ ನೀಡುತ್ತಿದ್ದು ಅಮೆರಿಕದ ಅಧ್ಯಕ್ಷ ಜೋ ಬೈಡೆನ್ರೊಂದಿಗೆ ವಿಸ್ತತ ಮಾತುಕತೆ ನಡೆಸಲಿದ್ದಾರೆ ಎಂದು ಟರ್ಕಿ ಸರಕಾರದ ಮೂಲಗಳು ಹೇಳಿವೆ.

ರವಿವಾರ ಅಮೆರಿಕದಲ್ಲಿ ನಡೆಯುವ ವಿಶ್ವಸಂಸ್ಥೆಯ ಮಹಾಧಿವೇಶನದಲ್ಲಿ ಪಾಲ್ಗೊಳ್ಳಲು ಎರ್ಡೋಗನ್ ತೆರಳಿದ್ದಾರೆ. ಬಳಿಕ ಅಮೆರಿಕ ಅಧ್ಯಕ್ಷ ಬೈಡೆನ್ರನ್ನು ಭೇಟಿಯಾಗುವ ಕಾರ್ಯಕ್ರಮವಿದೆ. ಅಫ್ಗಾನಿಸ್ತಾನದ ಇತ್ತೀಚಿನ ಬೆಳವಣಿಗೆಯ ಬಳಿಕ ಅಲ್ಲಿ ಟರ್ಕಿ ಪ್ರಮುಖ ಪಾತ್ರ ನಿರ್ವಹಿಸುವ ಬಗ್ಗೆ ಅವರು ಬೈಡೆನ್ರಿಗೆ ಮನವರಿಕೆ ಮಾಡಿಕೊಡುವ ಸಾಧ್ಯತೆಯಿದೆ ಎಂದು ಲಂಡನ್ ಮೂಲದ ವಿದೇಶಿ ಕಾರ್ಯನೀತಿ ಸಂಸ್ಥೆಯ ಸಂಶೋಧನಾ ವಿದ್ಯಾರ್ಥಿ ಎಮ್ರೆ ಕ್ಯಾಲಿಸ್ಕನ್ ಹೇಳಿದ್ದಾರೆ.

   ಕಾಬೂಲ್ ವಿಮಾನ ನಿಲ್ದಾಣದ ಭದ್ರತಾ ಕಾರ್ಯದಲ್ಲಿ ಟರ್ಕಿ ವಹಿಸಲಿರುವ ಪಾತ್ರದ ಬಗ್ಗೆ ಜೂನ್ನಲ್ಲಿ ನಡೆದಿದ್ದ ನ್ಯಾಟೊ ಶೃಂಗಸಭೆಯಲ್ಲಿ ಎರ್ಡೋಗನ್ ಪ್ರಸ್ತಾವಿಸಿದ್ದರು. ಇದೀಗ ಅಫ್ಗಾನಿಸ್ತಾನವನ್ನು ಮುಂದಿಟ್ಟುಕೊಂಡು ಅಮೆರಿಕದೊಂದಿಗಿನ ದ್ವಿಪಕ್ಷೀಯ ಸಂಬಂಧ ಸುಧಾರಣೆಗೆ ಎರ್ಡೋಗನ್ ಪ್ರಯತ್ನಿಸಬಹುದು. ಟರ್ಕಿಯೊಂದಿಗಿನ ಸಹಕಾರ ಸಂಬಂಧದಿಂದ ಅಮೆರಿಕಕ್ಕೂ ಪ್ರಯೋಜನವಿದೆ. ಉಭಯ ದೇಶಗಳೂ ಸಮಾನ ಹಿತಾಸಕ್ತಿ ಹೊಂದಿವೆ ಎಂದು ಮನವರಿಕೆ ಮಾಡಬಹುದು. ಟರ್ಕಿಯೊಂದಿಗಿನ ಸಹಕಾರ ಸಂಬಂಧದಿಂದ ಈಗಲೂ ಪ್ರಯೋಜನಗಳಿವೆ ಎಂದು ಪಾಶ್ಚಿಮಾತ್ಯ ದೇಶಗಳಿಗೆ ವಿವರಿಸಲು ಅಫ್ಗಾನ್ನ ಬೆಳವಣಿಗೆಯನ್ನು ನಿದರ್ಶನವಾಗಿ ಬಳಸುವ ಸಾಧ್ಯತೆಯಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

 ಟರ್ಕಿಯು ರಶ್ಯಾದ ಕ್ಷಿಪಣಿಗಳನ್ನು ಖರೀದಿಸುವ ಒಪ್ಪಂದ ಮಾಡಿಕೊಂಡ ಬಳಿಕ ಟರ್ಕಿ-ಅಮೆರಿಕ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿತ್ತು. ಕೆಲ ತಿಂಗಳ ಹಿಂದೆ ಸುದ್ದಿಗೋಷ್ಟಿಯಲ್ಲಿ ಟರ್ಕಿಯ ಬಗ್ಗೆ ಪ್ರಸ್ತಾವಿಸಿದ್ದ ಅಮೆರಿಕದ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕೆನ್ ‘ಅಮೆರಿಕದ ಸಹಭಾಗಿ ಎಂದು ಹೇಳಲಾದ ಟರ್ಕಿ’ ಎಂದಿದ್ದರು. ನೇಟೋದ ಕ್ಷಿಪಣಿಗಳ ಬದಲು ರಶ್ಯಾದ ಎಸ್-400 ಕ್ಷಿಪಣಿಗಳನ್ನು ಟರ್ಕಿ ಖರೀದಿಸಿದ ಹಿನ್ನೆಲೆಯಲ್ಲಿ ಟರ್ಕಿ ರಕ್ಷಣಾ ಪಡೆಯ ಹಿರಿಯ ಅಧಿಕಾರಿಗಳಿಗೆ ಅಮೆರಿಕ ನಿರ್ಬಂಧ ವಿಧಿಸಿತ್ತು. ಬೈಡೆನ್ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಸುಮಾರು 3 ತಿಂಗಳ ಬಳಿಕ ಟರ್ಕಿ ಅಧ್ಯಕ್ಷರೊಂದಿಗೆ ಮೊದಲ ಬಾರಿ ಮಾತುಕತೆ ನಡೆಸಿದ್ದರು.

ಈಶಾನ್ಯ ಸಿರಿಯಾದ ಕುರ್ಡಿಶ್ ಹೋರಾಟಗಾರರಿಗೆ ಅಮೆರಿಕ ನೆರವು ನೀಡುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಟರ್ಕಿ, 2016ರಲ್ಲಿ ಸರಕಾರದ ವಿರುದ್ಧ ಷಡ್ಯಂತ್ರ ರೂಪಿಸಿದ್ದ ಆರೋಪಕ್ಕೆ ಒಳಗಾಗಿ ಅಮೆರಿಕಕ್ಕೆ ಪಲಾಯನ ಮಾಡಿದ್ದ ಫೆಥುಲಾ ಗುಲೆನ್ರನ್ನು ಟರ್ಕಿಗೆ ಗಡೀಪಾರು ಮಾಡುವಂತೆ ಅಮೆರಿಕಾವನ್ನು ಆಗ್ರಹಿಸಿತ್ತು. ಇದನ್ನು ಅಮೆರಿಕ ತಿರಸ್ಕರಿಸಿದ ಬಳಿಕ ಉಭಯ ದೇಶಗಳ ಸಂಬಂಧ ಹದಗೆಡುತ್ತಾ ಹೋಗಿತ್ತು. ಇದೀಗ ದ್ವಿಪಕ್ಷೀಯ ಸಂಬಂಧ ಸುಧಾರಣೆಗೆ ಅಫ್ಗಾನ್ನ ಬೆಳವಣಿಗೆ ಪೂರಕವಾಗಿ ಒದಗಿಬಂದಿದ್ದು ಇದರ ಪ್ರಯೋಜನ ಪಡೆಯುವುದು ಟರ್ಕಿಯ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X