Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್ ಸೇನೆಯಿಂದ ಪೆಲೆಸ್ತೀನಿಯರ...

ಇಸ್ರೇಲ್ ಸೇನೆಯಿಂದ ಪೆಲೆಸ್ತೀನಿಯರ ಸಾಮೂಹಿಕ ಬಂಧನ ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ19 Sept 2021 11:46 PM IST
share
ಇಸ್ರೇಲ್ ಸೇನೆಯಿಂದ ಪೆಲೆಸ್ತೀನಿಯರ ಸಾಮೂಹಿಕ ಬಂಧನ ಕಾರ್ಯಾಚರಣೆ

ರಮಲ್ಲಾ, ಸೆ.19: ಸೆಪ್ಟಂಬರ್ 6ರಂದು ಇಸ್ರೇಲ್ನ ಉತ್ತರದಲ್ಲಿರುವ ಬಿಗಿಭದ್ರತೆಯ ಜೈಲಿನಿಂದ 6 ಪೆಲೆಸ್ತೀನ್ ಪ್ರಜೆಗಳು ತಪ್ಪಿಸಿಕೊಂಡು ಪರಾರಿಯಾದಂದಿನಿಂದ ಇಸ್ರೇಲ್ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಪೆಲೆಸ್ತೀನೀಯರ ಸಾಮೂಹಿಕ ಬಂಧನ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ವರದಿಯಾಗಿದೆ.

ಕಳೆದ 12 ದಿನಗಳಲ್ಲಿ 100ಕ್ಕೂ ಹೆಚ್ಚು ಪೆಲೆಸ್ತೀನ್ ಪ್ರಜೆಗಳನ್ನು ಸೆರೆಮನೆಗೆ ತಳ್ಳಲಾಗಿದೆ ಎಂದು ಪಿಎಲ್ಒದ ಸಂಧಾನ ವ್ಯವಹಾರಗಳ ಇಲಾಖೆ ಮತ್ತು ಪೆಲೆಸ್ತೀನಿಯನ್ ಕೈದಿಗಳ ಸಂಘಟನೆ ‘ಅದ್ದಾಮೀರ್’ ವರದಿ ಮಾಡಿದೆ. ಸೆರೆಮನೆಯಿಂದ ತಪ್ಪಿಸಿಕೊಂಡ ಘಟನೆಯ ಬಳಿಕ ಪ್ರತೀ ದಿನ ಸರಾಸರಿ 14 ಪೆಲೆಸ್ತೀನಿಯರ ಬಂಧನವಾಗಿದೆ. ಇಸ್ರೇಲ್ ಪ್ರದೇಶದಲ್ಲಿ ಬಂಧನಕ್ಕೆ ಒಳಗಾಗಿರುವ ಪೆಲೆಸ್ತೀನ್ ಪ್ರಜೆಗಳು ಇದರಲ್ಲಿ ಸೇರಿಲ್ಲ ಎಂದು ಅದ್ದಾಮೀರ್ನ ಮಿಲೆನ ಅನ್ಸಾರಿ ಹೇಳಿರುವುದಾಗಿ ಅಲ್ ಜಝೀರಾ ವರದಿ ಮಾಡಿದೆ.

ರವಿವಾರ ಇಬ್ಬರು ಪೆಲೆಸ್ತೀನಿಯರು ಇಸ್ರೇಲ್ ಸೇನೆಗೆ ಶರಣಾಗುವುದರೊಂದಿಗೆ ಜೈಲಿನಿಂದ ತಪ್ಪಿಸಿಕೊಂಡಿದ್ದ 6 ಕೈದಿಗಳೂ ಮರಳಿ ಇಸ್ರೇಲ್ ನ ಜೈಲಿಗೆ ಸೇರ್ಪಡೆಗೊಂಡಿದ್ದಾರೆ. ಜೈಲಿನಿಂದ ತಪ್ಪಿಸಿಕೊಂಡಿದ್ದವರ ಬೆನ್ನು ಬಿದ್ದಿದ್ದ ಇಸ್ರೇಲ್ ಪಡೆಗಳು ತಪ್ಪಿಸಿಕೊಂಡವರ ಕುಟುಂಬದವರ ಮನೆಯಿರುವ ಜೆನಿನ್ ಪ್ರದೇಶಕ್ಕೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಹಲವರನ್ನು ಬಂಧಿಸಿ ವಿಚಾರಣೆಯ ನೆಪದಲ್ಲಿ ದೌರ್ಜನ್ಯ ನಡೆಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದರು. ರಮಲ್ಲಾ, ಹೆಬ್ರೋನ್, ನಬ್ಲೂಸ್ ಮತ್ತು ಸುತ್ತಮುತ್ತಲ ಪ್ರದೇಶದಲ್ಲೂ ದಾಳಿ, ಶೋಧ ಕಾರ್ಯಾಚರಣೆ ನಡೆದಿದೆ.

ಮಕ್ಕಳನ್ನೂ ಇಸ್ರೇಲ್ ಪಡೆಗಳು ಬಂಧಿಸಿವೆ. ರಮಲ್ಲಾದ ಬಳಿಯ ನಿಲಿನ್ ನಗರದ ನಿವಾಸಿಯಾಗಿದ್ದ 13 ವರ್ಷದ ಮುಸ್ತಾಫ ಅಮೀರ ಮತ್ತವನ ಸೋದರ ಸಂಬಂಧಿ 15 ವರ್ಷದ ಮುಹಮ್ಮದ್ ಎಂಬವರನ್ನು ಸುಮಾರು 10 ಇಸ್ರೇಲ್ ಪೊಲೀಸರು ಬಂಧಿಸಿ, ವಿಚಾರಣೆಯ ನೆಪದಲ್ಲಿ ನೀರು ಕೂಡಾ ನೀಡದೆ ಹಿಂಸಿಸಿದ್ದಾರೆ ಎಂದು ಮುಸ್ತಾಫನ ತಂದೆ ಖಲೀಲ್ ಅಮೀರ ಹೇಳಿರುವುದಾಗಿ ಅಲ್ ಜಝೀರಾ ವರದಿ ಮಾಡಿದೆ. ಬಾಲಕರ ಮೇಲೆ ಸಶಸ್ತ್ರ ಸೈನಿಕರು ಹಲ್ಲೆ ನಡೆಸುವ ಅಗತ್ಯವೇನಿದೆ. ಮಕ್ಕಳ ಮೇಲೆ ದೂರುಗಳಿದ್ದರೆ ಪ್ರಕರಣ ದಾಖಲಿಸಲಿ, ಆದರೆ ನಿರ್ದಯವಾಗಿ ಥಳಿಸುವುದು ಸರಿಯೇ ಎಂದು ಖಲೀಲ್ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X