Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾ: ಬಾಹ್ಯಾಕಾಶಕ್ಕೆ ಸರಕು ಸಾಗಿಸುವ...

ಚೀನಾ: ಬಾಹ್ಯಾಕಾಶಕ್ಕೆ ಸರಕು ಸಾಗಿಸುವ ನೌಕೆಯ ಉಡ್ಡಯನ ಯಶಸ್ವಿ

ವಾರ್ತಾಭಾರತಿವಾರ್ತಾಭಾರತಿ20 Sept 2021 11:08 PM IST
share

ಬೀಜಿಂಗ್, ಸೆ.20: ತಾನು ನಿರ್ಮಿಸುತ್ತಿರುವ ಬಾಹ್ಯಾಕಾಶ ನಿಲ್ದಾಣ ತಿಯಾಂಗ್ಯಾಂಗ್ನ ನಿರ್ಮಾಣ ಕಾರ್ಯಕ್ಕೆ ಅಗತ್ಯ ವಸ್ತುಗಳನ್ನು ಭೂಮಿಯಿಂದ ಸಾಗಿಸುವ, ಮಾನವ ರಹಿತ ಸರಕು ಬಾಹ್ಯಾಕಾಶ ನೌಕೆಯ ಉಡ್ಡಯನ ಪ್ರಕ್ರಿಯೆ ಸೋಮವಾರ ಯಶಸ್ವಿಯಾಗಿದೆ ಎಂದು ಚೀನಾ ಹೇಳಿದೆ.

ದಕ್ಷಿಣದ ದ್ವೀಪಪ್ರಾಂತ್ಯ ಹೈನಾನ್ನ ವೆನ್ಚಾಂಗ್ ಬಾಹ್ಯಾಕಾಶ ನೌಕೆ ಉಡಾವಣಾ ನೆಲೆಯಿಂದ ತಿಯಾನ್ರೊ-3 ಸರಕು ನೌಕೆಯನ್ನು ಹೊತ್ತ ಎಲ್ಎಂ-7 ವೈ4 ರಾಕೆಟ್ ಬಾಹ್ಯಾಕಾಶದತ್ತ ನೆಗೆದಿದೆ ಎಂದು ಚೀನಾದ ಬಾಹ್ಯಾಕಾಶ ಯೋಜನೆ ಸಂಸ್ಥೆ ಸಿಎಂಎಸ್ಎ ಹೇಳಿದೆ. ಮುಂದಿನ ವರ್ಷ ಸಿದ್ಧವಾಗಲಿರುವ ಚೀನಾದ ಬಾಹ್ಯಾಕಾಶ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಸರಕನ್ನು ಸಾಗಿಸಲು ತಿಯಾನ್ರೊ ಸರಣಿ ಬಾಹ್ಯಾಕಾಶ ನೌಕೆಗಳನ್ನು ಉಡ್ಡಯ ನಡೆಸಲಾಗುತ್ತಿದೆ. ಬಾಹ್ಯಾಕಾಶ ಯಾನಿಗಳಿಗೆ ಹಾಗೂ ನಿವಾಸಿಗಳಿಗೆ ಜೀವನಾವಲಂಬನೆ ಹಾಗೂ ವಾಸಿಸಲು ನೆಲೆ, ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ಚೀನಾವು ಎಪ್ರಿಲ್ 29ರಂದು ಉಡಾಯಿಸಿರುವ ತಿಯಾನೆ ಗಗನನೌಕೆ ಮತ್ತು ಸೆ.18ರಂದು ಉಡಾಯಿಸಿರುವ ತಿಯಾನ್ರೊ-2 ಸರಕು ನೌಕೆಯೊಂದಿಗೆ ನಿಕಟ ಸಂಪರ್ಕದಲ್ಲಿ ತಿಯಾನ್ರೊ-3 ಸರಕು ನೌಕೆ ಕಾರ್ಯ ನಿರ್ವಹಿಸಲಿದೆ ಎಂದು ಸರಕಾರಿ ಸ್ವಾಮ್ಯದ ಕ್ಸಿನ್ಹುವ ಸುದ್ಧಿಮಾಧ್ಯಮ ವರದಿ ಮಾಡಿದೆ.

ಬಾಹ್ಯಾಕಾಶ ನಿಲ್ದಾಣ ಪೂರ್ಣಗೊಂಡರೆ, ಸ್ವತಂತ್ರ ಬಾಹ್ಯಾಕಾಶ ನಿಲ್ದಾಣ ಹೊಂದಿರುವ ವಿಶ್ವದ ಏಕೈಕ ದೇಶವಾಗಲಿದೆ ಚೀನಾ. ಈಗಾಗಲೇ ಬಾಹ್ಯಾಕಾಶದಲ್ಲಿರುವ ಇಂಟರ್ನ್ಯಾಷನಲ್ ಸ್ಪೇಸ್ ಸ್ಟೇಷನ್(ಐಎಸ್ಎಸ್) ನಿಲ್ದಾಣವು ಹಲವು ದೇಶಗಳ ಸಹಯೋಗದ ಯೋಜನೆಯಾಗಿದೆ. ದೀರ್ಘಕಾಲದಿಂದ ಕಾರ್ಯನಿರ್ವಹಿಸುತ್ತಿರುವ ಐಎಸ್ಎಸ್ನ ಕಾರ್ಯ ಸ್ಥಗಿತಗೊಂಡರೆ ಆಗ ಬಾಹ್ಯಾಕಾಶದಲ್ಲಿರುವ ಏಕೈಕ ನಿಲ್ದಾಣವಾಗಲಿದೆ ಚೀನಾದ ತಿಯಾಂಗ್ಯಾಂಗ್. ಇದರ ನಿರ್ಮಾಣಕ್ಕೆ ಅಗತ್ಯವಿರುವ ಹಲವು ಸರಕುಗಳು, ಗಗನಯಾತ್ರಿಗಳನ್ನು ಸಾಗಿಸುವ ಇನ್ನೂ ಹಲವು ಬಾಹ್ಯಾಕಾಶ ಯೋಜನೆ ಮುಂದಿನ ದಿನದಲ್ಲಿ ನಡೆಯಲಿದೆ. ಭೂಮಿಯ ಮೇಲ್ಮೈಯಿಂದ ಸುಮಾರು 340-450 ಕಿ.ಮೀ ಎತ್ತರದಲ್ಲಿ ಕೆಳ ಭೂಮಿಯ ಕಕ್ಷೆಯಲ್ಲಿ ಈ ನಿಲ್ದಾಣ 10 ವರ್ಷಕ್ಕೂ ಹೆಚ್ಚು ಕಾಲ ಕಾರ್ಯನಿರ್ವಹಿಸಲಿದೆ. ಇಂಗ್ಲಿಷ್ನ ‘ಟಿ’ ಆಕಾರದ ಈ ನಿಲ್ದಾಣದ ನಡುಭಾಗದಲ್ಲಿ ಕೇಂದ್ರ ವ್ಯವಸ್ಥೆ, ಎರಡೂ ಬದಿಗಳಲ್ಲಿ ಪ್ರಯೋಗಾಲಯಗಳಿರುತ್ತವೆ. ಬಾಹ್ಯಾಾಶ ಒಟ್ಟು 66 ಟನ್ ತೂಕವಿರುತ್ತದೆ.

ಬಾಹ್ಯಾಕಾಶ ನಿಲ್ದಾಣ ನಿರ್ಮಾಣವು ಚೀನಾದ ಬಾಹ್ಯಾಕಾಶ ಯೋಜನೆಯಲ್ಲಿನ ಒಂದು ಮಹತ್ವದ ಮೈಲುಗಲ್ಲು ಆಗಿದ್ದು ಇದು ಮಾನವರು ಬಾಹ್ಯಾಕಾಶದ ಶಾಂತಿಯುತ ಬಳಕೆಗೆ ಪ್ರಮುಖ ಕೊಡುಗೆ ನೀಡಲಿದೆ ಎಂದು ಚೀನಾದ ಅ್ಯಕ್ಷ ಕ್ಸಿ ಜಿಂಪಿಂಗ್ ಪ್ರತಿಕ್ರಿಯಿಸಿದ್ದಾರೆ.

ಯಂತ್ರಮಾನವನ ಭುಜ

ಚೀನಾ ನಿರ್ಮಿಸುತ್ತಿರುವ ಬಾಹ್ಯಾಕಾಶ ನಿಲ್ದಾಣದಲ್ಲಿ ಯಂತ್ರಮಾನವ(ರೊಬಟ್)ನ ತೋಳು ಇರಲಿದ್ದು ಈ ಬಗ್ಗೆ ಅಮೆರಿಕ ಆತಂಕ ವ್ಯಕ್ತಪಡಿಸಿದೆ. 15 ಮೀಟರ್ ಉದ್ದದ ಈ ಯಾಂತ್ರಿಕ ಭುಜದ ನೆರವಿನಿಂದ ಚೀನಾ ಅಂತರಿಕ್ಷದಿಂದಲೇ ಹಲವು ದೇಶಗಳ ರಕ್ಷಣಾ ನೆಲೆಗಳ ಮೇಲೆ ಗೂಢಚರ್ಯೆ ಮಾಡಬಹುದು ಎಂಬುದು ಅಮೆರಿಕದ ಆತಂಕವಾಗಿದೆ.

ಬಾಹ್ಯಾಕಾಶ ನಿಲ್ದಾಣದ ನಿರ್ಮಾಣದಲ್ಲಿ ಈ ರೊಬಟ್ ತೋಳು ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಚೀನಾದ ಬಾಹ್ಯಾಕಾಶ ಯೋಜನೆಯ ಮುಖ್ಯ ವಿನ್ಯಾಸಾರ ಝುವೊ ಜಿನ್ಪಿಂಗ್ ಹೇಳಿದ್ದಾರೆ.

ಚೀನಾ ಈ ಹಿಂದೆ ಉಡಾಯಿಸಿದ ಹಲವು ಉಪಗ್ರಹಗಳಲ್ಲೂ ರೊಬಟ್ ತೋಳು ಇತ್ತು. ಬಾಹ್ಯಾಕಾಶದಲ್ಲಿ ಸಂಗ್ರಹವಾಗಿರುವ ತ್ಯಾಜ್ಯಗಳನ್ನು ಗುಡಿಸಿ ತೆಗೆದು ಭೂಮಿಯ ವಾತಾವರಣದಲ್ಲಿ ಸುಟ್ಟು ಹಾಕಲು ಇದನ್ನು ಬಳಸಲಾಗಿತ್ತು ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X