ಮುಖ್ಯಮಂತ್ರಿ ಅಮೃತ ಜೀವನ ಯೋಜನೆಗೆ ಅರ್ಜಿ ಆಹ್ವಾನ
ಉಡುಪಿ : ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಮುಖ್ಯಮಂತ್ರಿಗಳ ‘ಅಮೃತ ಜೀವನ ಯೊಜನೆ’ಯಡಿ ಪ.ಜಾತಿ ಮತ್ತು ಪ.ಪಂಗಡ ಫಲಾನುಭವಿಗಳಿಗೆ ಶೇ.33.33 ಹಾಗೂ ಇತರೆ ಫಲಾನುಭವಿಗಳಿಗೆ ಶೇ.25ರಷ್ಟು ಸಹಾಯಧನದಡಿ, ಒಂದು ಮಿಶ್ರತಳಿ ಹಾಲು ಕರೆಯುವ ಹಸು ಘಟಕ ಆರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಸಂಬಂದಪಟ್ಟ ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳಿಂದ ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಸೆ.30ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ಉಡುಪಿ-0820-2520659, ಕಾಪು-0820-2551175, ಬ್ರಹ್ಮಾವರ-0820-2561101, ಕುಂದಾಪುರ- 08254-230776, ಬೈಂದೂರು-08254-251076, ಕಾರ್ಕಳ- 08258- 230448 ಮತ್ತು ಹೆಬ್ರಿ-08253-251203 ಇವರನ್ನು ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
Next Story