Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ನನ್ನ ಪಂಚೆ ಕಳಚಿಕೊಂಡಿದೆ, ಹೊಟ್ಟೆ ದಪ್ಪ...

'ನನ್ನ ಪಂಚೆ ಕಳಚಿಕೊಂಡಿದೆ, ಹೊಟ್ಟೆ ದಪ್ಪ ಆಗಿ ಪಂಚೆ ನಿಲ್ಲುತ್ತಿಲ್ಲ': ಸಿದ್ದರಾಮಯ್ಯ

ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ನಾಂದಿಯಾದ ಪ್ರತಿಪಕ್ಷ ನಾಯಕರ `ಪಂಚೆ'

ವಾರ್ತಾಭಾರತಿವಾರ್ತಾಭಾರತಿ22 Sept 2021 5:19 PM IST
share
ನನ್ನ ಪಂಚೆ ಕಳಚಿಕೊಂಡಿದೆ, ಹೊಟ್ಟೆ ದಪ್ಪ ಆಗಿ ಪಂಚೆ ನಿಲ್ಲುತ್ತಿಲ್ಲ: ಸಿದ್ದರಾಮಯ್ಯ

ಬೆಂಗಳೂರು, ಸೆ. 22: `ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ'ದ ಕುರಿತು ಚರ್ಚೆಯ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರ `ಪಂಚೆ' ಕಳಚಿಕೊಂಡಿತು. ಈ ಪ್ರಸಂಗ ವಿಧಾನಸಭೆಯಲ್ಲಿ ಕೆಲಕಾಲ ಸ್ವಾರಸ್ಯಕರ ಚರ್ಚೆಗೆ ನಾಂದಿಯಾಯಿತು.

ಬುಧವಾರ ವಿಧಾನಸಭೆಯಲ್ಲಿ ನಿಯಮ 69ರಡಿಯಲ್ಲಿ ಸಾಮೂಹಿಕ ಅತ್ಯಾಚಾರ ಘಟನೆ ಕುರಿತು ಸಿದ್ದರಾಮಯ್ಯ ಅತ್ಯಂತ ಗಂಭೀರವಾಗಿ ಪೊಲೀಸರು ಮತ್ತು ಸರಕಾರದ ವೈಫಲ್ಯಗಳನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಅವರ ಪಂಚೆ ಕಳಚಿದ್ದು, ಅದು ಅವರಿಗೆ ತಕ್ಷಣವೇ ಗಮನಕ್ಕೆ ಬಂದಿರಲಿಲ್ಲ.

ಕೂಡಲೇ ಇದನ್ನು ಗಮನಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ತಕ್ಷಣವೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ ಆಸನದ ಬಳಿ ಬಂದು, `ಸರ್ ನಿಮ್ಮ ಪಂಚೆ ಕಳಚಿಕೊಂಡಿದೆ' ಎಂದು ಕಿವಿಯಲ್ಲಿ ಮೆಲ್ಲಗೆ ಹೇಳಿ ತಮ್ಮ ಆಸನಕ್ಕೆ ತೆರಳಿದರು. ಇದರಿಂದ ಎಚ್ಚೆತ್ತುಕೊಂಡ ಸಿದ್ದರಾಮಯ್ಯ, `ನನ್ನ ಪಂಚೆ ಕಳಚಿಕೊಂಡುಬಿಟ್ಟಿದೆ. ಕಟ್ಟಿಕೊಂಡು ಆಮೇಲೆ ಮಾತನಾಡುತ್ತೇನೆ' ಎಂದು ಪಂಚೆ ಸರಿಪಡಿಸಿಕೊಳ್ಳುತ್ತಲೇ `ನನ್ನ ಪಂಚೆ ಕಳಚಿಕೊಂಡು ಬಿಟ್ಟಿದೆ ಈಶ್ವರಪ್ಪ' ಎಂದರು.

'ಕೋವಿಡ್ ಸೋಂಕು ಬಂದ ನಂತರ ಏಕೋ ಏನೋ ನನ್ನ ಹೊಟ್ಟೆ ಸ್ವಲ್ಪ ದಪ್ಪ ಆಯ್ತು, ಜೊತೆಗೆ ಭಾರವೂ ನಾಲ್ಕೈದು ಕೆಜಿ ಹೆಚ್ಚಾಗಿದೆ. ಹೀಗಾಗಿ ನನ್ನ ಪಂಚೆ ಪದೇ ಪದೆ ಕಳಚಿಹೋಗುತ್ತಿದೆ' ಎಂದು ಸಿದ್ದರಾಮಯ್ಯ ಹೇಳಿದ್ದರಿಂದ ಸದನದಲ್ಲಿ ನಲೆ ಅಲೆ ಉಕ್ಕಿತು.

ಈ ಸಂದರ್ಭದಲ್ಲಿ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಎದ್ದು ನಿಂತು, `ನಮ್ಮ ಪಕ್ಷದ ಅಧ್ಯಕ್ಷರು ಪಕ್ಷದ ಮಾನ ಹೋಗಬಾರದು ಎಂದು ಗುಟ್ಟಾಗಿ ಕಿವಿಯಲ್ಲಿ ಹೇಳಿ ಹೋದರೆ, ಇವರು ಅದನ್ನು ಊರಿಗೆಲ್ಲಾ ಹೇಳ್ತಾರೆ. ನಿಮ್ಮ ಶ್ರಮವೆಲ್ಲ ವ್ಯರ್ಥವಾಯಿತು' ಎಂದರು.

`ನೀವು ಮಾತನಾಡುತ್ತಿರುವ ವಿಚಾರ ಅಂತಹದ್ದು ಎಂದು ರಮೇಶ್ ಕುಮಾರ್ ಹೇಳಿದರು. ಈ ವೇಳೆ ಸ್ಪೀಕರ್ ಪೀಠದಲ್ಲಿ ಆಸೀನರಾಗಿದ್ದ ಕುಮಾರ್ ಬಂಗಾರಪ್ಪ, ನಗುತ್ತಾ, ನೀವು ಹಾಗೆ ಹೇಳುವುದು ಸರಿಯಲ್ಲ ಎಂದರು. `ಅವರ ಉದ್ಯೋಗವೇ ನಮ್ಮ ಪಂಚೆ ಕಳಚೋದು, ನೋಡಿ ಕಾಯ್ತಾ ಕೂತಿದ್ದಾರೆ' ಎಂದು ರಮೇಶ್ ಕುಮಾರ್, ಈಶ್ವರಪ್ಪನವರನ್ನು ಕಿಚಾಯಿಸಿದರು.

ಆಗ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, `ಅವರು ಪಾಪ ಪ್ರಯತ್ನ ಮಾಡುತ್ತಿರುತ್ತಾರೆ. ಅವೆಲ್ಲಾ ಸಾಧ್ಯ ಆಗುವುದಿಲ್ಲ. ಈ ಪಂಚೆ ಮೊದಲು ಬಿಚ್ಚಿಕೊಳ್ಳುತ್ತಿರಲಿಲ್ಲ. ಇತ್ತೀಚೆಗೆ ಪದೇ ಪದೇ ಬಿಚ್ಚಿ ಹೋಗುತ್ತಿದೆ ಎಂದರು. ಹೀಗಾಗಿಯೇ ಬಹಳ ಜನ ನಿಲುವಂಗಿ ಹಾಕಿಕೊಳ್ಳುತ್ತಾರೆ. ಅದನ್ನು ಹಾಕಿದರೆ ಪಂಚೆ, ಪ್ಯಾಂಟು ಬೇಕಿರುವುದಿಲ್ಲ. ಅದಕ್ಕೆ ನಾನು ಉದ್ದ ಇರುವ ಜುಬ್ಬವನ್ನೇ ಹಾಕ್ತೀನಿ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X