Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಂಐಟಿ 35 ವಿದ್ಯಾರ್ಥಿಗಳಿಗೆ ತಲಾ...

ಎಂಐಟಿ 35 ವಿದ್ಯಾರ್ಥಿಗಳಿಗೆ ತಲಾ ವಾರ್ಷಿಕ 44 ಲಕ್ಷ ರೂ.ಪ್ಯಾಕೇಜ್‌ನ ಉದ್ಯೋಗ ನೀಡಿದ ಮೈಕ್ರೋಸಾಫ್ಟ್

ವಾರ್ತಾಭಾರತಿವಾರ್ತಾಭಾರತಿ22 Sept 2021 7:24 PM IST
share
ಎಂಐಟಿ 35 ವಿದ್ಯಾರ್ಥಿಗಳಿಗೆ ತಲಾ ವಾರ್ಷಿಕ 44 ಲಕ್ಷ ರೂ.ಪ್ಯಾಕೇಜ್‌ನ ಉದ್ಯೋಗ ನೀಡಿದ ಮೈಕ್ರೋಸಾಫ್ಟ್

ಉಡುಪಿ, ಸೆ.22: ಕಳೆದ ಒಂದೂವರೆ ವರ್ಷಗಳ ಕೊರೋನ ಸಾಂಕ್ರಾಮಿಕದ ವ್ಯಾಪಕತೆ ನಡುವೆ ನಿರುದ್ಯೋಗ ಸಮಸ್ಯೆ ತೀವ್ರಗೊಂಡಿರುವ ಹಾಗೂ ಉದ್ಯೋಗದ ಅವಕಾಶ ಕ್ಷೀಣಿಸುತ್ತಿರುವ ಆರೋಪಗಳ ನಡುವೆಯೇ ಬೆಳ್ಳಿ ಕಿರಣದಂತೆ ಅಂತಾರಾಷ್ಟ್ರೀಯ ಮಟ್ಟದ ದೈತ್ಯ ಐಟಿ ಕಂಪೆನಿಯಾಗಿರುವ ಮೈಕ್ರೋಸಾಫ್ಟ್, ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಎಂಐಟಿ) 35 ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ತಲಾ 44 ಲಕ್ಷ ರೂ.ವಾರ್ಷಿಕ ಸಂಬಳದ ಪ್ಯಾಕೇಜ್‌ನೊಂದಿಗೆ ಉದ್ಯೋಗ ಒದಗಿಸಿದೆ.

ಇತ್ತೀಚಿನ ವರ್ಷಗಳಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ನೀಡಲಾದ ಅತ್ಯಧಿಕ ಮೊತ್ತದ ಸಂಬಂಳದ ಪ್ಯಾಕೇಜ್ ಇದಾಗಿದೆ ಎಂದು ಎಂಐಟಿ ವಿದ್ಯಾಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ವರ್ಷ ಮೈಕ್ರೋಸಾಫ್ಟ್‌ನೊಂದಿಗೆ ವಿಶ್ವದ ಪ್ರಸಿದ್ಧ ಐಟಿ ಹಾಗೂ ಇತರ ಕಂಪೆನಿಗಳು ಕ್ಯಾಂಪಸ್ ಸಂದರ್ಶನಕ್ಕೆ ಬಂದಿದ್ದು, ಸುಮಾರು 300ರಷ್ಟು ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ನೀಡಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೈಕ್ರೋಸಾಫ್ಟ್‌ನೊಂದಿಗೆ ಅಡೋಬ್, ಅಮೆಝಾನ್, ಬಜಾಜ್ ಫಿನ್‌ಸರ್ವ್, ಬ್ಲಾಕ್‌ರಾಕ್, ಚಾರ್ಜ್‌ಬೀ, ಕಿಸ್ಕೋ ಸಿಸ್ಟಮ್, ಸಿಟ್ರಿಕ್ಸ್ ಆರ್‌ಎಂಡ್‌ಡಿ, ಕ್ಲೌಡೆರಾ, ಕಾಮ್‌ವಾಲ್ಟ್, ಫಿಡಿಲಿಟಿ ಇನ್‌ವೆಸ್ಟ್‌ಮೆಂಟ್, ಫ್ಲಿಪ್‌ಕಾರ್ಟ್, ಗೋಲ್ಡ್‌ಮ್ಯಾನ್ ಸಾಚ್ಸ್, ಸ್ಯಾಪ್ ಲ್ಯಾಬ್, ತೇಜಸ್ ನೆಟ್‌ವರ್ಕ್, ಯುಬಿಎಸ್ ಬ್ಯುಸಿನೆಸ್, ಜೆಪಿ ಮೋರ್ಗನ್, ಕಾಂಪ್ರೈಸ್, ಓರಾಕಲ್, ವಿಎಂ ವೇರ್, ವೆಲ್ಸ್ ಫೋರ್ಗೊ, ವೆಸ್ಟರ್ನ್ ಡಿಜಿಟಲ್ ಮುಂತಾದ ಕಂಪೆನಿಗಳು ವರ್ಚುವಲ್ ಮಾದರಿಯಲ್ಲಿ 2020-21ನೇ ಶೈಕ್ಷಣಿಕ ಸಾಲಿನ ಮೊದಲ ಹಂತದ ಕ್ಯಾಂಪಸ್ ಸಂದರ್ಶನ ನಡೆಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿವೆ.

ಎಂಐಟಿ ಕ್ಯಾಂಪಸ್ ಸಂದರ್ಶನದಲ್ಲಿ ಇದುವರೆಗೆ 292 ವಿದ್ಯಾರ್ಥಿಗಳು ವರ್ಷಕ್ಕೆ ಸರಾಸರಿ 18.2 ಲಕ್ಷ ರೂ.ಗಳ ಪ್ಯಾಕೇಜ್‌ನೊಂದಿಗೆ ಉದ್ಯೋಗ ಹಾಗೂ ಇಂಟರ್‌ಶಿಪ್‌ಗೆ ಪ್ರಸ್ತಾಪವನ್ನು ಪಡೆದಿದ್ದಾರೆ ಎಂದು ಎಂಐಟಿಯ ನಿರ್ದೇಶಕ ಕ್ವಾ. ಡಾ.ಅನಿಲ್ ರಾಣಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಂಐಟಿಯಲ್ಲಿ ಕ್ಯಾಂಪಸ್ ಸಂದರ್ಶನ ಇನ್ನೂ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X