Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಾಣಿಜ್ಯ ಸಂಸ್ಥೆಗಳ ನೋಂದಣಿ ನವೀಕರಿಸದೆ...

ವಾಣಿಜ್ಯ ಸಂಸ್ಥೆಗಳ ನೋಂದಣಿ ನವೀಕರಿಸದೆ 39.59 ಕೋಟಿ ರೂ.ನಷ್ಟ; ಸಿಎಜಿ ವರದಿಯಿಂದ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ22 Sept 2021 8:26 PM IST
share
ವಾಣಿಜ್ಯ ಸಂಸ್ಥೆಗಳ ನೋಂದಣಿ ನವೀಕರಿಸದೆ 39.59 ಕೋಟಿ ರೂ.ನಷ್ಟ; ಸಿಎಜಿ ವರದಿಯಿಂದ ಬಹಿರಂಗ

ಬೆಂಗಳೂರು, ಸೆ. 22: `ಕಾರ್ಮಿಕ ಇಲಾಖೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ನೋಂದಣಿ ನವೀಕರಿಸದಿರುವುದರಿಂದ 39.59 ಕೋಟಿ ರೂ.ವಸೂಲಿ ಕಡಿಮೆಯಾಗಿದೆ ಮತ್ತು ಬೆಂಗಳೂರು ವಿ.ವಿ.ಅಸಮರ್ಪಕ ಆರ್ಥಿಕ ನಿರ್ವಹಣೆಯಿಂದ 12.97 ಲಕ್ಷ ರೂ. ದುರುಪಯೋಗವಾಗಿದೆ' ಎಂಬ ಅಂಶವನ್ನು ಲೆಕ್ಕನಿಯಂತ್ರಣಕರು ಮತ್ತು ಮಹಾಲೆಕ್ಕಪರಿಶೋಧಕರ(ಸಿಎಜಿ) ವರದಿ ಬಹಿರಂಗಪಡಿಸಿದೆ.

ಬುಧವಾರ ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಭಾರತದ ಲೆಕ್ಕನಿಯಂತ್ರಕರು ಮತ್ತು ಲೆಕ್ಕಪರಿಶೋಧಕರ ವರದಿಯನ್ನು ಮಂಡಿಸಿದರು. `ಪಿಂಚಣಿ ನಿಧಿಯ ನಿಯಮ ಮತ್ತು ಅಭಿವೃದ್ಧಿ ಪ್ರಾಧಿಕಾರದ ನಿಯಮಗಳನ್ನು ರಾಷ್ಟ್ರೀಯ ಪಿಂಚಣಿ ಪದ್ಧತಿಗೆ ಅನುಗುಣವಾಗಿ ಜಾರಿಗೊಳಿಸಿಲ್ಲ' ಎಂದು ಉಲ್ಲೇಖಿಸಿದೆ.

`ರಾಣಿಚೆನ್ನಮ್ಮ ವಿ.ವಿ. ನೀಡಿರುವ ಮಾಹಿತಿಯಂತೆ 2015ರ ಫೆಬ್ರವರಿಯಿಂದ 2016ರ ಸೆಪ್ಟೆಂಬರ್ ವರೆಗಿನ ಅವಧಿಯಲ್ಲಿ ನೌಕರರ ಮತ್ತು ಉದ್ಯೋಗದಾತರ ವಂತಿಗೆಯ ಹಣ 2.40 ಕೋಟಿ ರೂ.ಗಳನ್ನು ಹೂಡಿಕೆ ಮಾಡಿರಲಿಲ್ಲ. ಹಿಂದಿನ ವಂತಿಗೆಯೊಂದಿಗೆ ಹೂಡಿಕೆ ಮಾಡುವಲ್ಲಿ ವಿಳಂಬದಿಂದ ವಿ.ವಿಸಿಬ್ಬಂದಿಗೆ 29.62 ಲಕ್ಷ ರೂ.ನಷ್ಟ ಪರಿಣಿಮಿಸಿದೆ.

ಬೆಂಗಳೂರು ವಿ.ವಿ. 2006ರ ಎ.1ರ ನಂತರ ನೇಮಕಗೊಂಡ ನೌಕರರಿಗೆ ಎನ್‍ಪಿಎಸ್ ಅನ್ನು ಅಳವಡಿಸಲು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದೆ. ಅಲ್ಲದೆ, ಮಂಗಳೂರು ವಿ.ವಿ. ಯಾವುದೇ ಉತ್ತರ ನೀಡಿರುವುದಿಲ್ಲ. 2020ರಲ್ಲಿ ಮಾತ್ರ ನೌಕರರಿಗೆ ಹೂಡಿಕೆಯಿಂದ ನಷ್ಟ ಉಂಟಾಯಿತು. ಎಲ್‍ಐಸಿಯಿಂದ ಪಡೆದ ಲಾಭಾಂಶಗಳು ಎನ್‍ಎವಿ ಪ್ರಕಾರವಿರಲಿಲ್ಲವಾದುದರಿಂದ ಉತ್ತರವು ಸರಿಯಿರುವುದಿಲ್ಲ. ಅಲ್ಲದೆ, ಹೂಡಿಕೆಗಳು ಸರಕಾರದ ನಿರ್ದೇಶನಗಳಿಗೆ ವಿರುದ್ಧವಾಗಿದ್ದವು ಎಂದು ಸಿಎಜಿ ತಿಳಿಸಿದೆ.

ಪಶುಪಾಲನಾ ಮತ್ತು ಚನ್ನಪಟ್ಟಣದಲ್ಲಿ ಪಶುವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸರಕಾರದ ರಾಜಸ್ವವನ್ನು ಜಮೆ ಮಾಡದಿರುವುದರಿಂದ ಮತ್ತು ದಾಖಲೆಗಳಲ್ಲಿ ಕೈಚಳಕ ಮಾಡಿರುವುದರಿಂದ 1.38 ಲಕ್ಷ ರೂ.ದುರುಪಯೋಗವಾಗಿದೆ. ಆರೋಗ್ಯ ಎಂಜಿನಿಯರಿಂಗ್ ವಿಭಾಗದ ಮುಖ್ಯ ಎಂಜಿನಿಯರ್ ಅವರಿಂದ ವಿಳಂಬವಾಗಿ ಪೂರ್ಣಗೊಳಿಸಿದ ಕಾಮಗಾರಿಗಳ ಮೇಲೆ ಅತ್ಯಲ್ಪ ದಂಡವನ್ನು ವಿಧಿಸಲಾಗಿದೆ. ಇದು 14.63 ಕೋಟಿ ರೂ.ನಷ್ಟು ಲಿಕ್ವಿಡೇಟೆಡ್ ಡ್ಯಾಮೇಜಸ್ ಕಡಿಮೆ ವಿಧಿಸಿರುವುದಲ್ಲದೆ, ಗುತ್ತಿಗೆದಾರರಿಗೆ ಲಾಭವನ್ನುಂಟು ಮಾಡಲಾಗಿದೆ ಎಂದು ಸಿಎಜಿ ಹೇಳಿದೆ.

ನಗರದ ಪ್ರದೇಶದಲ್ಲಿದ್ದ 30 ಬಾರುಗಳು ಮತ್ತು ರೆಸ್ಟೋರೆಂಟುಗಳು 2014ರ ಮಾರ್ಚ್‍ನಿಂದ 2017ರ ಮಾರ್ಚ್ ಅವಧಿಯಲ್ಲಿ ಮಾಡಿದ್ದಂತಹ ಮದ್ಯ ಮಾರಾಟಗಳ ಮೇಲೆ ಕಡಿಮೆ ಪ್ರಮಾಣದಲ್ಲಿ ವಿಧಿಸಿದ ತೆರಿಗೆಯು ಬಡ್ಡಿ ಮತ್ತು ದಂಡವೂ ಸೇರಿ 6.15 ಕೋಟಿ ರೂ.ಆಗಿದೆ ಎಂದು ಸಿಎಜಿ ವರದಿಯಲ್ಲಿ ಹೇಳಿದೆ.

7.54 ಲಕ್ಷ ಕೋಟಿ ರೂ. ಮೊತ್ತದ ಒಟ್ಟು ಆಯವ್ಯಯ ವೆಚ್ಚಕ್ಕೆ ಪ್ರತಿಯಾಗಿ 2019-20ನೆ ಸಾಲಿನಲ್ಲಿ ಸಂಪನ್ಮೂಲಗಳ ಅನ್ವಯವು 5.03 ಲಕ್ಷ ಕೊಟಿ ರೂ.ಗಳಷ್ಟಿತ್ತು. ರಾಜ್ಯದ ಒಟ್ಟು ವೆಚ್ಚವು(ರಾಜಸ್ವ ವೆಚ್ಚ, ಬಂಡವಾಳ ವೆಚ್ಚ ಹಾಗೂ ಸಾಲ ಮತ್ತು ಮುಂಗಡಗಳು) 2015-16ರಿಂದ 2019-20ನೆ ಸಾಲಿನಲ್ಲಿ ಶೇ.55ರಷ್ಟು ಏರಿಕೆ ಆಗಿತ್ತು ಮತ್ತು ರಾಜಸ್ವ ವೆಚ್ಚವು ಇದೇ ಅವಧಿಯಲ್ಲಿ ಶೇ.49ರಷ್ಟು ಏರಿಕೆಯಾಗಿತ್ತು ಎಂಬ ಅಂಶವನ್ನು ಸಿಎಜಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X