Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಮಗೆ ಪೂಜೆ ಬೇಡ, ಗೌರವ ಬೇಕು: ಶಾಸಕಿ...

ನಮಗೆ ಪೂಜೆ ಬೇಡ, ಗೌರವ ಬೇಕು: ಶಾಸಕಿ ಸೌಮ್ಯಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ22 Sept 2021 11:21 PM IST
share
ನಮಗೆ ಪೂಜೆ ಬೇಡ, ಗೌರವ ಬೇಕು: ಶಾಸಕಿ ಸೌಮ್ಯಾರೆಡ್ಡಿ

ಬೆಂಗಳೂರು, ಸೆ.22: ನಮ್ಮ ದೇಶದ ಸಮಾಜದಲ್ಲಿ ಹೆಣ್ಣಿಗೆ ಸರಸ್ವತಿ, ಲಕ್ಷ್ಮಿ, ದುರ್ಗೆ ಎಂದು ಪೂಜಿಸುತ್ತಾರೆ. ಆದರೆ, ಇವತ್ತಿನ ಪರಿಸ್ಥಿತಿಯಲ್ಲಿ ನಮಗೆ ಯಾವ ಪೂಜೆಯೂ ಬೇಡ, ಗೌರವ ಸಿಕ್ಕಿದರೆ ಸಾಕು ಎಂದು ಕಾಂಗ್ರೆಸ್ ಶಾಸಕಿ ಸೌಮ್ಯಾರೆಡ್ಡಿ ಹೇಳಿದರು.

ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಬುಧವಾರ ವಿಧಾನಸಭೆಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಅವರು, ಮಹಿಳೆಯರು ಧೈರ್ಯದಿಂದ ಹೊರಗೆ ಹೋಗಿ ಕೆಲಸ ಮಾಡಲು ಸಾಧ್ಯವಾಗುವಂತಹ ವಾತಾವರಣ ನಿರ್ಮಾಣವಾದರೆ ಸಾಕು ಎಂದರು.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ರಾಜಕೀಯ ಮಾಡಬೇಡಿ. ಇಂತಹ ಪ್ರಕರಣಗಳು ನಡೆದಾಗ ಹೆಣ್ಣು ಯಾವ ಬಟ್ಟೆ ಹಾಕಿದ್ದಳು, ಅಲ್ಲಿ ಯಾಕೆ ಹೋದಳು, ಯಾರ ಜೊತೆ ಹೋದಳು ಎಂದು ಪ್ರಶ್ನಿಸುತ್ತಾರೆ. ವಿಶ್ವವಿದ್ಯಾಲಯದ ಕ್ಯಾಂಪಸ್‍ನಲ್ಲಿ ಹೆಣ್ಣು ಮಕ್ಕಳು ಸಂಜೆ 6.30ರ ನಂತರ ಓಡಾಡಬಾರದು ಎಂದು ಮೈಸೂರು ವಿವಿ ಕುಲಪತಿ ಆದೇಶ ಮಾಡುತ್ತಾರೆ. ಇವರನ್ನು ಯಾಕೆ ಅಮಾನತ್ತು ಮಾಡಿಲ್ಲ ಎಂದು ಅವರು ಪ್ರಶ್ನಿಸಿದರು.

2020ನೆ ಸಾಲಿನಲ್ಲಿ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರು ಎರಡನೆ ಸ್ಥಾನದಲ್ಲಿದೆ. ಲಾಕ್‍ಡೌನ್ ಆದ ನಂತರ ಗೃಹ ಹಿಂಸೆ ಪ್ರಕರಣಗಳು ಹೆಚ್ಚಾಗಿವೆ. ಉತ್ತರಪ್ರದೇಶದ ನಂತರ ಅತೀ ಹೆಚ್ಚು ದೌರ್ಜನ್ಯ ಪ್ರಕರಣಗಳು ನಮ್ಮ ರಾಜ್ಯದಲ್ಲಿ ವರದಿಯಾಗಿವೆ. ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚಾಗಿವೆ ಎಂದು ಅವರು ಹೇಳಿದರು.

ಮಹಿಳಾ ಸಾಂತ್ವಾನ ಕೇಂದ್ರಗಳನ್ನು ಸರಕಾರ ಯಾಕೆ ಮುಚ್ಚುತ್ತಿದೆ. ನಿರ್ಭಯಾ ನಿಧಿಯನ್ನು ಎಷ್ಟು ಬಳಕೆ ಮಾಡಲಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಯಲು ಸರಕಾರ ಏನು ಕ್ರಮಗಳನ್ನು ಕೈಗೊಂಡಿದೆ ಎಂದು ಸೌಮ್ಯಾ ರೆಡ್ಡಿ ಪ್ರಶ್ನಿಸಿದರು.

ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, 2018 ರಿಂದ 2021ರ ಜುಲೈವರೆಗೆ 1300 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 6 ಜನರಿಗೆ ಮಾತ್ರ ಶಿಕ್ಷೆಯಾಗಿದ್ದು, 50 ಜನರು ಖುಲಾಸೆಯಾಗಿದ್ದಾರೆ. ಇನ್ನುಳಿದ ಪ್ರಕರಣಗಳು ಬಾಕಿ ಉಳಿದಿವೆ. ಅತ್ಯಾಚಾರ ಪ್ರಕರಣದ ಸಂತ್ರಸ್ತರಲ್ಲಿ ಶೇ.70ರಷ್ಟು ಮಂದಿ ದಲಿತ, ಹಿಂದುಳಿದ ಹಾಗೂ ದಮನಿತ ವರ್ಗದವರೇ ಆಗಿರುವುದು ಆತಂಕಕಾರಿ ಎಂದರು.

ಸರಕಾರ ಪ್ರತಿಯೊಂದು ತಾಲೂಕಿನಲ್ಲಿ ಒಂದು ಮಹಿಳಾ ಪೊಲೀಸ್ ಠಾಣೆ ಸ್ಥಾಪನೆ ಮಾಡಿ, ಸಹಾಯವಾಣಿಯನ್ನು ಬಲಪಡಿಸಬೇಕು. ಸಮಾಜಕ್ಕೆ ಹೆದರಿ ಬಹಳ ಜನ ಇಂತಹ ಪ್ರಕರಣಗಳನ್ನು ಹೊರಗೆ ಬರಲು ಬಿಡುವುದಿಲ್ಲ. ಆದುದರಿಂದ, ಸಂತ್ರಸ್ತೆಯಾಗುವ ಮಹಿಳೆಯರಿಗೆ ಧೈರ್ಯ ತುಂಬುವಂತಹ ಕೆಲಸವನ್ನು ನಾವು ಮಾಡಬೇಕಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X