Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು ಬಂದ್‌ಗೆ ವ್ಯಾಪಕ ಬೆಂಬಲ: ಜನಜೀವನ...

ಜಮ್ಮು ಬಂದ್‌ಗೆ ವ್ಯಾಪಕ ಬೆಂಬಲ: ಜನಜೀವನ ಅಸ್ತವ್ಯಸ್ತ

ವಾರ್ತಾಭಾರತಿವಾರ್ತಾಭಾರತಿ22 Sept 2021 11:40 PM IST
share
ಜಮ್ಮು ಬಂದ್‌ಗೆ ವ್ಯಾಪಕ ಬೆಂಬಲ: ಜನಜೀವನ ಅಸ್ತವ್ಯಸ್ತ

ಜಮ್ಮು,ಸೆ.22: ನೂತನ ಅಬಕಾರಿ ನೀತಿ ಸೇರಿದಂತೆ ಕೇಂದ್ರ ಸರಕಾರದ ವಿವಿಧ ನಿರ್ಧಾರಗಳನ್ನು ವಿರೋಧಿಸಿ ಜಮ್ಮು ವಾಣಿಜ್ಯ ಹಾಗೂ ಕೈಗಾರಿಕಾ ಮಂಡಳಿ (ಜೆಸಿಸಿಐ) ಗುರುವಾರ ಕರೆ ನೀಡಿದ್ದ ಜಮ್ಮುಬಂದ್‌ಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ಇಡೀ ಪ್ರದೇಶದ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿತು. ಜಮ್ಮುಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದುಗೊಂಡ ಬಳಿಕ ಜಮ್ಮು ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಪ್ರತಿಭಟನೆಗಳು ಹಾಗೂ ರ್ಯಾಲಿಗಳು ನಡೆದವು.

ಸಂವಿಧಾನದ 370ನೇ ವಿಧಿ ರದ್ದತಿಯನ್ನು ಜಮ್ಮುವಿನ ಕೆಲವು ವರ್ಗದವರು ಬೆಂಬಲಿಸಿದ್ದರಾದರೂ, ಕೇಂದ್ರ ಸರಕಾರದ ನೂತನ ಅಬಕಾರಿ ನೀತಿ, ಬಾರ್ ಹಾಗೂ ರೆಸ್ಟೊರೆಂಟ್‌ಗಳ ಮೇಲೆ ಹೊಸ ನಿಯಮಾವಳಿಗಳ ಜಾರಿ ಮತ್ತು ಬೇಸಿಗೆಯಲ್ಲಿ ಸಚಿವಾಲಯ ಹಾಗೂ ಸರಕಾರಿ ಕಚೇರಿಗಳು ಜಮ್ಮುವಿಗೆ ವರ್ಗಾವಣೆಗೊಳ್ಳುವಂತಹ 149 ವರ್ಷಗಳ ಪದ್ಧತಿಯಾದ ದರ್ಬಾರ್ ಮೂವ್ ರದ್ದತಿ, ನೂತನ ಗಣಿಗಾರಿಕಾ ನೀತಿ, ಸಭಾಭವನಗಳ ಮೇಲೆ ನಿರ್ಬಂಧ, ರಿಲಾಯನ್ಸ್ ನ ಸರಣಿ ರಿಟೇಲ್ ಮಳಿಗೆಗಳನ್ನು ತೆರೆಯುವ ಪ್ರಸ್ತಾವವನ್ನು ವಿರೋಧಿಸಿ ಜಮ್ಮುವಿನ ವಾಣಿಜ್ಯ ಹಾಗೂ ಕೈಗಾರಿಕಾ ಮಂಡಳಿ ಬಂದ್‌ಗೆ ಕರೆ ನೀಡಿತ್ತು. ಕೇಂದ್ರ ಸರಕಾರದ ಈ ಕ್ರಮಗಳು ಜಮ್ಮುವಿನ ವಾಣಿಜ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀವೆ ಎಂದು ಜೆಸಿಸಿಐ ತಿಳಿಸಿದೆ.

ಬಂದ್ ಹಿನ್ನೆಲೆಯಲ್ಲಿ ಜಮ್ಮು ಪ್ರದೇಶಾದ್ಯಂತ ಔಷಧಿ ಮಳಿಗೆಗಳು ಸೇರಿದಂತೆ ಅಂಗಡಿ, ಮುಂಗಟ್ಚೆಗಳು ಮುಚ್ಚಿದ್ದವು. ಸಾರ್ವಜನಿಕ ಹಾಗೂ ಖಾಸಗಿ ವಾಹನಗಳು ಬೀದಿಗಿಳಿಯಲಿಲ್ಲ. ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ರಾಜಕೀಯ ಪಕ್ಷಗಳು ಬಂದ್‌ಗೆ ಬೆಂಬಲ ನೀಡಿದ್ದವು. ಬಂದ್ ಸಂಪೂರ್ಣವಾಗಿ ಶಾಂತಿಯುತವಾಗಿತ್ತು ಹಾಗೂ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲವೆಂದು ಮೂಲಗಳು ತಿಳಿಸಿವೆ. ಜಮ್ಮುವಿನ ಹೈಕೋರ್ಟ್ ನ್ಯಾಯವಾದಿಗಳ ಸಂಘ ಕೂಡಾ ಬಂದ್‌ಗೆ ಬೆಂಬಲ ನೀಡಿದ್ದರಿಂದ ಕೋರ್ಟ್ ವ್ಯವಹಾರಗಳು ಕೂಡಾ ಬಾಧಿತವಾದವು.

ಜಮ್ಮುಕಾಶ್ಮೀರ ಮೋಟಾರು ಸಾರಿಗೆ ಕಂಪೆನಿಗಳ ಸಂಘ (ಜೆಕೆಎಂಟಿಸಿಎ) ಬಂದ್ ಬೆಂಬಲಿಸಿದ್ದು, ಯಾವುದೇ ಸಾರಿಗೆವಾಹನಗಳು ಕಾರ್ಯಾಚರಿಸಲಿಲ್ಲ. ಸರಕಾರಿ ವಾಹನಗಳು ಹಾಗೂ ತುರ್ತು ಸೇವೆಗೆ ಸಂಬಂಧಿಸಿದ ವಾಹನಗಳು ಮಾತ್ರ ರಸ್ತೆಯಲ್ಲಿ ವಿರಳವಾಗಿ ಸಂಚರಿಸಿತ್ತಿದ್ದುದು ಕಂಡುಬಂತು.

ಶ್ರೀನಗರ ಹಾಗೂ ಜಮ್ಮು ನಡುವೆ ಸರಕಾರಿ ಕಾರ್ಯಾಲಯಗಳನ್ನು ಹಾಗೂ ಸಚಿವಾಲಯಗಳನ್ನು ಆರು ತಿಂಗಳಿಗೊಮ್ಮೆ ವರ್ಗಾಯಿಸುವ ದರ್ಬಾರ್ ಮೂವ್ ಪದ್ದತಿಯನ್ನು ಜಮ್ಮುಕಾಶ್ಮೀರ ಆಡಳಿತವು ಈ ವರ್ಷದ ರದ್ದುಪಡಿಸಿರುವುದು ಜಮ್ಮುವಿನಲ್ಲಿ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ. ದರ್ಬಾರ್ ಮೂವ್ ರದ್ದತಿಯಿಂದಾಗಿ ಜಮ್ಮುಪ್ರದೇಶದ ಆರ್ಥಿಕ ವ್ಯವಹಾರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆಯೆಂದು ಅಲ್ಲಿನ ವ್ಯಾಪಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X