Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆದರಿಕೆಯಿಂದ ಪಂಚಮಸಾಲಿಗಳಿಗೆ ಸಿಎಂ...

ಬೆದರಿಕೆಯಿಂದ ಪಂಚಮಸಾಲಿಗಳಿಗೆ ಸಿಎಂ ಸ್ಥಾನ ತಪ್ಪಿದೆ: ಜಯಮೃತ್ಯುಂಜಯ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ23 Sept 2021 8:48 PM IST
share
ಬೆದರಿಕೆಯಿಂದ ಪಂಚಮಸಾಲಿಗಳಿಗೆ ಸಿಎಂ ಸ್ಥಾನ ತಪ್ಪಿದೆ: ಜಯಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ, ಸೆ.23: ಲಿಂಗಾಯತ ಪಂಚಮಸಾಲಿ ಸಮುದಾಯದವರನ್ನು ಸಿಎಂ ಮಾಡಿದರೆ ಧರ್ಮಸ್ಥಳಕ್ಕೆ ಹೋಗುವುದಾಗಿ ಒತ್ತಡ ಹಾಕಿದ್ದರು. ಅದಕ್ಕೆ ಬಿಜೆಪಿಯ ಕೇಂದ್ರ ನಾಯಕರು ಮಣಿದಿದ್ದರಿಂದಾಗಿ ಪಂಚಮಸಾಲಿಗಳಿಗೆ ಸ್ಥಾನ ತಪ್ಪಿರಬಹುದು ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಗುರುವಾರ ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವೇಳೆ ನಮ್ಮ ಸಮಾಜದ ಬಸನಗೌಡ ಪಾಟೀಲ ಯತ್ನಾಳ್ ಅಥವಾ ಅರವಿಂದ ಬೆಲ್ಲದ ಅವರನ್ನು ಪರಿಗಣಿಸಲು ಬಿಜೆಪಿ ನಾಯಕರು ಮುಂದಾಗಿದ್ದರು. ಆದರೆ, ಕೊನೆ ಕ್ಷಣದಲ್ಲಿ ಬದಲಾಯಿತು ಎಂದು ತಿಳಿಸಿದರು.

ಧಮೇರ್ಂದ್ರ ಪ್ರಧಾನ್ ಅವರು ಬೆಂಗಳೂರಿಗೆ ಬಂದಿದ್ದ ವೇಳೆವರೆಗೂ, ಪಂಚಮಸಾಲಿ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಸಿಗುವ ನಿರೀಕ್ಷೆ ಇತ್ತು. ಬಳಿಕ ಬದಲಾಯಿತು ಎಂದರು.

'ನಾಯಕತ್ವ ಬದಲಾವಣೆಯಾದರೆ ಉ-ಕ ಲಿಂಗಾಯತ ಶಾಸಕರನ್ನು ಮುಖ್ಯಮಂತ್ರಿ ಮಾಡುವಂತೆ ಆಗ್ರಹಿಸಿದ್ದೆವು. ನಮ್ಮ ಬಯಕೆಯಂತೆ ಬಸವರಾಜ ಬೊಮ್ಮಾಯಿ ಅವರಿಗೆ ಅವಕಾಶ ಸಿಕ್ಕಿದೆ. ಸಮಾಜಕ್ಕೆ ಪ್ರವರ್ಗ 2ಎ ಮೀಸಲಾತಿಗೆ ಆಗ್ರಹಿಸಿ ನಡೆಸಿದ ಪಾದಯಾತ್ರೆ ಬೆಂಬಲಿಸಿದ ವ್ಯಕ್ತಿ ಮುಖ್ಯಮಂತ್ರಿ ಆದದ್ದು ಸಮಾಧಾನ ಹಾಗೂ ಸಂತಸ ತಂದಿದೆ. ಖಂಡಿತವಾಗಿಯೂ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದರು.

ನಾನು ಮೀಸಲಾತಿಗಾಗಿ ಒತ್ತಾಯಿಸಿ ಪ್ರಾಮಾಣಿಕವಾಗಿ ಪಾದಯಾತ್ರೆ ಮಾಡಿದ್ದೆ. ಹೋರಾಟದ ವೇಳೆ ಹತ್ತು ಲಕ್ಷ ಜನ ಸೇರಿದ್ದರು. ಹೋರಾಟದಲ್ಲಿ ಯಾವ ಸಮುದಾಯದವರೂ ಇಷ್ಟೊಂದು ಪ್ರಮಾಣದಲ್ಲಿ ಸೇರಿದ್ದ ಇತಿಹಾಸ ಇರಲಿಲ್ಲ. ಲಿಂಗಾಯತರಲ್ಲಿ ಬಹುಸಂಖ್ಯಾತರೆಂದರೆ ಪಂಚಮಸಾಲಿಗಳು ಎನ್ನುವ ಸತ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಮ್ಮ ಹೋರಾಟದಿಂದ ಗೊತ್ತಾಗಿದೆ ಎಂದರು.

ಸರಕಾರ ನೀಡಿದ್ದ ಭರವಸೆ ಈಡೇರಿಲ್ಲ. ಗಡುವು (ಸೆ.15) ಮೀರಿದ್ದರಿಂದಾಗಿ ರಾಜ್ಯದಾದ್ಯಂತ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ನಡೆಸುತ್ತಿದ್ದೇವೆ. ಅದು ಅ.1ರಂದು ಬೆಂಗಳೂರು ತಲುಪಲಿದೆ. ಅಷ್ಟರೊಳಗೆ ಬೇಡಿಕೆ ಈಡೇರಿಸಿದರೆ ಮುಖ್ಯಮಂತ್ರಿಗೆ ಕಲ್ಲುಸಕ್ಕರೆಯಿಂದ ತುಲಾಭಾರ ಮಾಡುತ್ತೇವೆ. ಈಗ ನಡೆದಿರುವ ವಿಧಾನಮಂಡಲ ಅಧಿವೇಶನದಲ್ಲೇ ಮುಖ್ಯಮಂತ್ರಿ ಘೋಷಿಸಬೇಕು. ಇಲ್ಲದಿದ್ದರೆ ಬೆಂಗಳೂರು ಸ್ವಾತಂತ್ರ್ಯ ಉದ್ಯಾನದಲ್ಲಿ 5ನೆ (ಪಂಚಮ) ಹಂತದ ಚಳವಳಿ ಆರಂಭಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X