Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘10,265 ಕೋಟಿ ರೂ.ಗಳ ಪೂರಕ ಅಂದಾಜಿಗೆ...

‘10,265 ಕೋಟಿ ರೂ.ಗಳ ಪೂರಕ ಅಂದಾಜಿಗೆ ವಿಧಾನಸಭೆ ಅನುಮೋದನೆ’

ವಾರ್ತಾಭಾರತಿವಾರ್ತಾಭಾರತಿ23 Sept 2021 10:26 PM IST
share
‘10,265 ಕೋಟಿ ರೂ.ಗಳ ಪೂರಕ ಅಂದಾಜಿಗೆ ವಿಧಾನಸಭೆ ಅನುಮೋದನೆ’

ಬೆಂಗಳೂರು, ಸೆ.23: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ 2021-22ನೆ ಸಾಲಿನ 10.265 ಕೋಟಿ ರೂ.ಗಳ ಪೂರಕ ಅಂದಾಜುಗಳ ಮೊದಲನೆ ಕಂತಿನ ಬೇಡಿಕೆಗಳಿಗೆ ಗುರುವಾರ ವಿಧಾನಸಭೆಯಲ್ಲಿ ಅನುಮೋದನೆ ದೊರೆಯಿತು.

10,265 ಕೋಟಿ ರೂ.ಗಳ ಪೂರಕ ಅಂದಾಜಿನಲ್ಲಿ ರಾಜಸ್ವ ಖಾತೆಯಲ್ಲಿ 8728.51 ಕೋಟಿ ರೂ., ಬಂಡವಾಳ ಖಾತೆಯಲ್ಲಿ 1536.82 ಕೋಟಿ ರೂ.ಇದೆ. ಇದರಲ್ಲಿ ನಿವ್ವಳ ನಗದು ಹೊರ ಹರಿವು 6367 ಕೋಟಿ ರೂ.ಆಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಜಲಜೀವನ್ ಮಿಷನ್ ಯೋಜನೆಗೆ 1000 ಕೋಟಿ ರೂ., ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ 1700 ಕೋಟಿ ರೂ., ಆರೋಗ್ಯ ಇಲಾಖೆಗೆ 3300 ಕೋಟಿ ರೂ.ಒದಗಿಸಿದ್ದೇವೆ. ಇದಲ್ಲದೆ, ಶಾಸಕರ ಪ್ರದೇಶಾಭಿವೃದ್ಧಿ ನಿಧಿಗೆ 127 ಕೋಟಿ ರೂ., ಚಿಕ್ಕಮಗಳೂರು, ಹಾವೇರಿ ಮತ್ತು ಯಾದಗಿರಿ ವೈದ್ಯಕೀಯ ಕಾಲೇಜುಗಳಿಗೆ 124 ಕೋಟಿ ರೂ., ಬಿಎಂಟಿಸಿ ನೌಕರರಿಗೆ 171 ಕೋಟಿ ರೂ., ಆಸ್ಪತ್ರೆ ಉನ್ನತೀಕರಣಕ್ಕೆ 150 ಕೋಟಿ ರೂ., ನಮ್ಮ ಗ್ರಾಮ, ನಮ್ಮ ರಸ್ತೆ ಯೋಜನೆಗೆ 150 ಕೋಟಿ ರೂ., ನಗರ ಸ್ಥಳೀಯ ಸಂಸ್ಥೆಗಳಿಗೆ 130 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಅವರು ತಿಳಿಸಿದರು.

ಬಜೆಟ್‍ನಲ್ಲಿ ಜಿಎಸ್‍ಟಿ ಹರಿಹಾರದ ಮೊತ್ತವನ್ನು 12708 ಕೋಟಿ ರೂ.ನಿರೀಕ್ಷೆ ಮಾಡಲಾಗಿತ್ತು. ಕೇಂದ್ರ ಸರಕಾರ 18,109 ಕೋಟಿ ರೂ. ಹಂಚಿಕೆ ಮಾಡಲು ನಿಗದಿ ಮಾಡಿದೆ. ಈಗಾಗಲೆ 8542 ಕೋಟಿ ರೂ.ಬಂದಿದೆ. ಈ 6 ಸಾವಿರ ಕೋಟಿ ರೂ.ಗಳಿಗೆ ಜಿಎಸ್‍ಟಿ ಪರಿಹಾರ ಮೊತ್ತದಿಂದ ಅನುಕೂಲ ಆಗಬಹುದು ಎಂದು ಅವರು ಹೇಳಿದರು. 

ಈ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, 6000 ಕೋಟಿ ರೂ.ನಗದು ಹೊರ ಹರಿವು ಹೋಗುತ್ತೆ ಎಂದು ಹೇಳಿದ್ದೀರಿ. ಅದನ್ನು ಹೇಗೆ ನಿರ್ವಹಿಸುತ್ತೀರಾ. ಜಿಎಸ್‍ಟಿ ಪರಿಹಾರ ಸರಿಯಾಗಿ ಬಂದಿಲ್ಲ, ಜಿಎಸ್‍ಟಿ ಕಡಿಮೆಯಾಗಿದೆ, ಅಬಕಾರಿ ಆದಾಯ ಮಾತ್ರ ನಿಗದಿತ ಗುರಿ ತಲುಪಿದೆ. 

ಈ ವರ್ಷಕ್ಕೆ 4.57 ಲಕ್ಷ ಕೋಟಿ ರೂ.ಸಾಲ ಇದೆ. ನಾನು ಅಧಿಕಾರದಿಂದ ಇಳಿಯುವಾಗ ಸಾಲದ ಮೊತ್ತ 2.42 ಲಕ್ಷ ಕೋಟಿ ರೂ.ಇತ್ತು ಎಂದರು.

ಅನಗತ್ಯ ವೆಚ್ಚ ಕಡಿತ ಎಂದು ಹೇಳಿದ್ದೀರಾ. ನೀವು ಸಿಎಂ ಆದ ನಂತರ ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದೀರಾ. ಅದಕ್ಕೆ ಹಣ ಬೇಕು, ಎಚ್ಚರಿಕೆಯಿಂದ ಕಾಲಿಡಿ. ತೆರಿಗೆ ಏಕಾಏಕಿ ಹೆಚ್ಚಾಗಲ್ಲ. 2022ನೆ ಸಾಲಿಗೆ ಜಿಎಸ್‍ಟಿ ಪರಿಹಾರ ನಿಲ್ಲಿಸುವುದಾಗಿ ಕೇಂದ್ರ ಸರಕಾರ ಹೇಳಿದೆ. ರಾಜ್ಯದ ಅಭಿವೃದ್ಧಿಗೆ ಹಣ ಇಲ್ಲದಂತಾಗುತ್ತದೆ. ಎಷ್ಟು ಅಂತ ಸಾಲ ಮಾಡಲು ಸಾಧ್ಯವಾಗುತ್ತೆ. ಈ ವರ್ಷ 20 ಸಾವಿರ ಕೋಟಿ ರೂ.ವಿತ್ತೀಯ ಕೊರತೆ ಇದೆ. ಪೂರಕ ಅಂದಾಜು ಮಾಡುವಾಗ ವಿತ್ತೀಯ ಶಿಸ್ತು ಕಾಪಾಡಿಕೊಳ್ಳುವುದು ಒಳ್ಳೆಯದು ಎಂದು ಅವರು ಹೇಳಿದರು.

ನಂತರ ಮಾತು ಮುಂದುವರೆಸಿದ ಮುಖ್ಯಮಂತ್ರಿ, ವಿಜಯಭಾಸ್ಕರ್ ಸಮಿತಿ ವರದಿಯ ಶಿಫಾರಸ್ಸುಗಳನ್ನು ನವೆಂಬರ್ 1ರಿಂದ ಅನುಷ್ಠಾನಗೊಳಿಸುತ್ತೇವೆ. ಅನುಪಯುಕ್ತ ವೆಚ್ಚಕ್ಕೆ ಕಡಿವಾಣ ಹಾಕಲಾಗುವುದು. ಹೊಸ ವಿಧಾನದಲ್ಲಿ ಜಿಎಸ್‍ಟಿಯಲ್ಲೂ ತೆರಿಗೆ ಪಡೆಯಲು ಆರಂಭ ಮಾಡಲಾಗಿದೆ. ಜಿಎಸ್‍ಟಿ ಪರಿಹಾರ ಮುಂದುವರೆಸುವಂತೆ ಎರಡು ಬಾರಿ ಭೇಟಿ ಕೇಂದ್ರ ವಿತ್ತ ಸಚಿವರನ್ನು ಭೇಟಿ ಮಾಡಿ ಒತ್ತಾಯ ಮಾಡಿದ್ದೇವೆ. ಜಿಎಸ್‍ಟಿ ಕೌನ್ಸಿಲ್ ಸಭೆಯಲ್ಲೂ ಎಲ್ಲ ರಾಜ್ಯ ಸರಕಾರಗಳು ಒತ್ತಾಯಿಸಿವೆ, ಕೊನೆಗೆ ಅದು ಒಪ್ಪಿಗೆ ಆಗಬಹುದು. ಅದರ ಅಗತ್ಯವೂ ಇದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X