Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ ನಪಂ ಪೂರೈಸುವ ನೀರಿಗೆ ಸೀಮೆಎಣ್ಣೆ...

ಸುಳ್ಯ ನಪಂ ಪೂರೈಸುವ ನೀರಿಗೆ ಸೀಮೆಎಣ್ಣೆ ವಾಸನೆ: ಬೆಟ್ಟಂಪಾಡಿ ಗ್ರಾಮಸ್ಥರ ಅಳಲು

ಬಿಸಿ ಮಾಡಿದರೂ ಹೋಗುತ್ತಿಲ್ಲ ನೀರಿನ ವಾಸನೆ

ವಾರ್ತಾಭಾರತಿವಾರ್ತಾಭಾರತಿ24 Sept 2021 5:44 PM IST
share
ಸುಳ್ಯ ನಪಂ ಪೂರೈಸುವ ನೀರಿಗೆ ಸೀಮೆಎಣ್ಣೆ ವಾಸನೆ: ಬೆಟ್ಟಂಪಾಡಿ ಗ್ರಾಮಸ್ಥರ ಅಳಲು

►ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣ: ಸಮಸ್ಯೆ ಪರಿಹರಿಸಲು ಗ್ರಾಮಸ್ಥರ ಒತ್ತಾಯ

ಸುಳ್ಯ, ಸೆ.24: ಸುಳ್ಯ ನಗರ ಪಂಚಾಯತ್ ಗೆ ಸೇರಿದ ಕೊಳವೆಬಾವಿಯಿಂದ ಸರಬರಾಜಾಗುತ್ತಿರುವ ನೀರು ಸೀಮೆಎಣ್ಣೆಯ ವಾಸನೆಯಿಂದ ಕೂಡಿದ್ದು, ಬಳಕೆಗೆ ಅಯೋಗ್ಯವಾಗಿರುವ ವಿಲಕ್ಷಣ ಸನ್ನಿವೇಶವೊಂದು ನಪಂ ವ್ಯಾಪ್ತಿಯ ನಾಲ್ಕನೇ ವಾರ್ಡ್‌ ಬೆಟ್ಟಂಪಾಡಿಯಲ್ಲಿ ಉಂಟಾಗಿದೆ.

ಕೊಳವೆಬಾವಿಯಿಂದ ಸರಬರಾಜಾಗುವ ನೀರು ಸೀಮೆಎಣ್ಣೆ ವಾಸನೆ ಬರುತ್ತಿದೆ ಮಾತ್ರವಲ್ಲ, ಕುಡಿಯಲು ಯತ್ನಿಸಿದರೆ ಸೀಮೆಎಣ್ಣೆಯ ರುಚಿಯ ಅನುಭವ ಉಂಟಾಗುತ್ತಿದೆ ಎಂದು ಇಲ್ಲಿನ ಜನರು ದೂರಿಕೊಂಡಿದ್ದಾರೆ.

 ಕಳೆದ ಒಂದೂವರೆ ತಿಂಗಳಿನಿಂದ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಜನರು ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಈ ನೀರನ್ನು ಬಿಸಿ ಮಾಡಿದರೂ ವಾಸನೆ ಹೋಗುತ್ತಿಲ್ಲ. ಆ ನೀರಿನಲ್ಲಿ ಆಹಾರ ತಯಾರು ಮಾಡಿದರೆ ಆಹಾರವೂ ವಾಸನೆ ಬರುತ್ತದೆ ಮತ್ತು ಬೇಗನೆ ಆಹಾರ ಪದಾರ್ಥಗಳು ಬೇಗ ಕೆಟ್ಟು ಹೋಗುತ್ತವೆ ಎನ್ನುತ್ತಾರೆ ಸ್ಥಳೀಯರು.

ಬೆಟ್ಟಂಪಾಡಿಯ ನಗರ ಪಂಚಾಯತ್ ಕೊಳವೆಬಾವಿಯಿಂದ ನೀರೆತ್ತಿ ಟ್ಯಾಂಕ್ ಗೆ ಸರಬರಾಜು ಮಾಡಿ ಅಲ್ಲಿಂದ ಕೆಲವು ಮನೆಗಳಿಗೆ ಸರಬರಾಜು ಆಗುತ್ತದೆ. ಅಲ್ಲದೆ ಕೊಳವೆಬಾವಿಯಿಂದ ನೇರವಾಗಿಯೂ ಮನೆಗಳ ಟ್ಯಾಂಕ್ ಗಳಿಗೆ ನೀರು ಪೂರೈಕೆಯಾಗುತ್ತದೆ. ಬೆಟ್ಟಂಪಾಡಿಯ 130 ಮನೆ ಮತ್ತು ಸಮೀಪದ ಶಾಂತಿನಗರದ ಕೆಲವು ಮನೆಗಳು ಸೇರಿ ಸುಮಾರು 150ಕ್ಕೂ ಹೆಚ್ಚು ಮನೆಯರಿಗೆ ಈ ನೀರು ಸರಬರಾಜಾಗುತ್ತಿದ್ದು, ಇಲ್ಲಿನ ನಿವಾಸಿಗಳು ಸಮಸ್ಯೆಗೆ ಸಿಲುಕಿದ್ದಾರೆ. ಕೆಲವರು ಹತ್ತಿರದ ಬಾವಿಯಿಂದ ನೀರು ತಂದು ಕುಡಿಯಲು, ಆಹಾರ ತಯಾರಿಕೆಗೆ ಬಳಸುತ್ತಿದ್ದಾರೆ.

ನೀರಿನ ಈ ಸಮಸ್ಯೆ ಬಗ್ಗೆ ನಗರ ಪಂಚಾಯತ್ ಗೆ ಸ್ಥಳೀಯರು ದೂರಿದ್ದು, ನಗರ ಪಂಚಾಯತ್ ಸದಸ್ಯರು ಮತ್ತು ಅಧಿಕಾರಿಗಳು ಬಂದು ನೀರಿನ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದ್ದಾರೆ. ಸೀಮೆ ಎಣ್ಣೆ ವಾಸನೆಯಿಂದ ಅಡುಗೆ ಮಾಡಲು ಮಾತ್ರವಲ್ಲದೆ ಮುಖ ತೊಳೆಯಲು, ಸ್ನಾನ ಮಾಡಲೂ ಆಗದ ಪರಿಸ್ಥಿತಿ ನಿರ್ಮಾಣ ಆಗಿದೆ ಎಂಬುದು ಈ ಪ್ರದೇಶದ ಜನರು ಅಳಲು ತೋಡಿಕೊಂಡಿದ್ದಾರೆ.

 ಪಾತ್ರೆಗಳಲ್ಲಿ ನೀರು ಶೇಖರಿಸಿಟ್ಟರೆ ನೀರಿನ ಮೇಲ್ಪದರದಲ್ಲಿ ಎಣ್ಣೆಯ ಅಂಶ ಸೇರಿ ತೇಲುತ್ತಿರುತ್ತದೆ. ಶೇಖರಿಸಿಟ್ಟ ನೀರು ವಾಕರಿಕೆ ಬರುವಷ್ಟು ತೀವ್ರ ಸ್ವರೂಪದ ವಾಸನೆ ಹೊಂದಿದೆ. ಆದುದರಿಂದ ಕುಡಿಯುವ ನೀರಿಗೆ ನಪಂ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸ್ಥಳೀಯರಾದ ಶಂಕರ ಶಾಂತಿನಗರ, ಸುಧಾಕರ ಬೆಟ್ಟಂಪಾಡಿ ಮತ್ತು ಜನಾರ್ದನ ಬೆಟ್ಟಂಪಾಡಿ ಎಂಬವರು ಒತ್ತಾಯಿಸಿದ್ದಾರೆ.


''ಕಳೆದ ಒಂದೂವರೆ ತಿಂಗಳಿನಿಂದ ಈ ರೀತಿ ನೀರು ಸೀಮೆಎಣ್ಣೆ ವಾಸನೆಯಿಂದ ಉಪಯೋಗಿಸಲು ಆಗುತ್ತಾ ಇಲ್ಲ. ಈ ನೀರನ್ನು ಉಪಯೋಗಿಸಿದರೆ ಆರೋಗ್ಯ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಈ ಸಮಸ್ಯೆ ಬಗ್ಗೆ ಸೂಕ್ತ ಪರೀಕ್ಷೆ ಆಗಬೇಕು ಮತ್ತು ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು.''

-ಆನಂದ ಬೆಟ್ಟಂಪಾಡಿ, ಸ್ಥಳೀಯರು'


'ಬೆಟ್ಟಂಪಾಡಿ ಭಾಗದಲ್ಲಿ ಕೊಳವೆಬಾವಿ ನೀರು ಸೀಮೆಎಣ್ಣೆ ವಾಸನೆ ಬರುತ್ತಿರುವುದು ಗಮನಕ್ಕೆ ಬಂದಿದೆ. ನೀರನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು''

-ವಿನಯಕುಮಾರ್ ಕಂದಡ್ಕ,

ಅಧ್ಯಕ್ಷರು, ನಗರ ಪಂಚಾಯತ್ ಸುಳ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X