Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ: ಬಾಲಕಿಯ ಮೇಲೆ ಸತತ...

ಕೇರಳ: ಬಾಲಕಿಯ ಮೇಲೆ ಸತತ ಅತ್ಯಾಚಾರವೆಸಗಿದ ಆರೋಪಿ ಅರ್ಚಕನಿಗೆ ಜೀವಾವಧಿ

ವಾರ್ತಾಭಾರತಿವಾರ್ತಾಭಾರತಿ24 Sept 2021 10:07 PM IST
share
ಕೇರಳ: ಬಾಲಕಿಯ ಮೇಲೆ ಸತತ ಅತ್ಯಾಚಾರವೆಸಗಿದ ಆರೋಪಿ ಅರ್ಚಕನಿಗೆ ಜೀವಾವಧಿ

ತಿರುವನಂತಪುರ, ಸೆ.24: ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಸತತವಾಗಿ ಅತ್ಯಾಚಾರವೆಸಗಿದ ಅರ್ಚಕನೊಬ್ಬನಿಗೆ ಕೇರಳ ಹೈಕೋರ್ಟ್ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ‘‘ಬಾಲಕಿಯನ್ನು ಆಕೆಯ ಒಡಹುಟ್ಟಿದವರ ಎದುರಲ್ಲಿ ಪದೇಪದೇ ಅತ್ಯಾಚಾರವೆಸಗಿದಂತಹ ಈ ಆರ್ಚಕನ ಪೂಜೆ, ಪ್ರಾರ್ಥನೆಗಳನ್ನು ಯಾವ ದೇವರು ತಾನೆ ಸ್ವೀಕರಿಸಿಯಾನು ಎಂದು ನ್ಯಾಯಾಲಯ ತೀರ್ಪು ನೀಡಿಕೆ ವೇಳೆ ಉದ್ಗರಿಸಿದೆ.

ಮಂಜೇರಿ ನಿವಾಸಿಯಾದ ಮಧು ಜೀವಾವಧಿ ಶಿಕ್ಷೆಗೊಳಗಾದ ಆರೋಪಿ. ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ತೀವ್ರವಾದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ಅಲೆದಾಡುತ್ತಿದ್ದನ್ನು ಕಂಡ ಪೊಲೀಸರು ಆಕೆಯನ್ನು 2013ರ ಮಾರ್ಚ್ 1ರಂದು ರಕ್ಷಿಸಿದ್ದರು. 

ಮಹಿಳೆಯೊಂದಿಗೆ ವಾಸವಾಗಿದ್ದ ಆರ್ಚಕನೊಬ್ಬ ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ತನ್ನ ಮೇಲೆ ಅತ್ಯಾಚಾರವೆಸಗಿದ್ದನೆಂದು ವಿಚಾರಣೆಯ ವೇಳೆ ಆಕೆಯ ಹಿರಿಯ ಮಗಳು ತಿಳಿಸಿದ್ದಳು. ಸ್ಥಳೀಯ ದೇವಾಲಯವೊಂದರಲ್ಲಿ ಅರ್ಚಕನಾಗಿದ್ದ ಆರೋಪಿಯು ಸಾಮಾನ್ಯವಾಗಿ ಕುಡಿದು ಮನೆಗೆ ಬರುತ್ತಿದ್ದ ಮತ್ತು ಮಹಿಳೆ ಹಾಗೂ ಆಕೆಯ ಮಕ್ಕಳಿಗೆ ಥಳಿಸುತ್ತಿದ್ದ ಹಾಗೂ ಒಡಹುಟ್ಟಿದವರ ಎದುರಲ್ಲೇ ಹಿರಿಯ ಹೆಣ್ಣು ಮಗಳ ಮೇಲೆ ಅತ್ಯಾಚಾರವೆಸಗುತ್ತಿದ್ದನೆಂಬುದನ್ನು ನ್ಯಾಯಾಲಯವು ವಿಚಾರಣೆಯಲ್ಲಿ ಮನಗಂಡಿತು. 

‘‘ಈ ತಾಯಿಯ ಮಾನಸಿಕ ಸ್ಥಿತಿಯು ಸಮಾಜಕ್ಕೆ ನಾಚಿಕೆಗೇಡಿನ ವಿಷಯವಾಗಿದೆ. ಆಹಾರ ಮತ್ತು ವಸತಿ ಇಲ್ಲದೆ ಮೂವರು ಮಕ್ಕಳೊಂದಿಗೆ, ಪರಿತ್ಯಕ್ತಗೊಂಡಿದ್ದರಿಂದ ಆಕೆಗೆ ಮಾನಸಿಕ ಒತ್ತಡವುಂಟಾಗಿದೆಯೆಂಬುದು ಸ್ಪಷ್ಟ. ಈ ಕಾರಣದಿಂದಾಗಿಯೇ ಆಕೆಯ ಮಕ್ಕಳು ದೈಹಿಕ, ಮಾನಸಿಕ ಹಾಗೂ ಲೈಂಗಿಕ ಕಿರುಕುಳಕ್ಕೊಳಗಾಗಿದ್ದಾರೆ. ಇಂತಹ ಸನ್ನಿವೇಶದಲ್ಲಿ ಯಾವುದೇ ತಾಯಿ ಕೂಡಾ ಮಾನಸಿಕವಾಗಿ ಸ್ವಸ್ಥಳಾಗಿರಲು ಸಾಧ್ಯವಿಲ ಎಂದು ನ್ಯಾಯಾಲಯ ತಿಳಿಸಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮಕ್ಕಳನ್ನು ತೊರೆದಲ್ಲಿ, ಅಲೆದಾಡುತ್ತಿರುವ ಹದ್ದುಗಳು ಪರಿತ್ಯಕ್ತ ಮಹಿಳೆಯನ್ನು ಮಾತ್ರವಲ್ಲ ಆಕೆಯ ಅಸಹಾಯಕ ಮಕ್ಕಳನ್ನು ಕೂಡಾ ಬೇಟೆಯಾಡಲು ಕಾಯುತ್ತಿರುತ್ತವೆ ಎಂದು ನ್ಯಾಯಾಲಯ ಆತಂಕ ವ್ಯಕ್ತಪಡಿಸಿತು.

ಬಾಲಕಿಯು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದನ್ನು ವೈದ್ಯಕೀಯ ಪುರಾವೆಗಳು ಸಾಬೀತುಪಡಿಸುತ್ತವೆ ಎಂದು ನ್ಯಾಯಾಲಯ ಪ್ರತಿಪಾದಿಸಿತು. ಈ ಪ್ರಕರಣದ ಸಾಕ್ಷಿಯಾಗಿರುವ ಸಂತ್ರಸ್ತೆಯ ಸೋದರನು ಹೇಳಿಕೆಗಳು ಕೂಡಾ ಬಾಲಕಿಯ ಹೇಳಿಕೆಗಳಿಗೆ ಪೂರಕವಾಗಿವೆ ಎಂದು ನ್ಯಾಯಾಲಯ ಅಭಿಪ್ರಾಯಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X