Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾರಾಬಂಕಿ ಮಸೀದಿ ಧ್ವಂಸ ಪ್ರಕರಣದ ವರದಿ:...

ಬಾರಾಬಂಕಿ ಮಸೀದಿ ಧ್ವಂಸ ಪ್ರಕರಣದ ವರದಿ: ಎಫ್ಐಆರ್ ರದ್ದತಿಗೆ ದಿ ವೈರ್ ಮನವಿ

ಉ.ಪ್ರ.ಸರಕಾರದಿಂದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ24 Sept 2021 10:15 PM IST
share
ಬಾರಾಬಂಕಿ ಮಸೀದಿ ಧ್ವಂಸ ಪ್ರಕರಣದ ವರದಿ: ಎಫ್ಐಆರ್ ರದ್ದತಿಗೆ ದಿ ವೈರ್ ಮನವಿ

ಹೊಸದಿಲ್ಲಿ, ಸೆ.25: ಬಾರಾಬಂಕಿಯ ಗರೀಬ್ ನವಾಝ್ ಅಲ್ ಮರೂಫ್ ಮಸೀದಿಯ ಧ್ವಂಸ ಕಾರ್ಯಾಚರಣೆ ಕುರಿತ ವಿಡಿಯೋ ವರದಿಗೆ ಸಂಬಂಧಿಸಿ ತಮ್ಮ ವಿರುದ್ಧ ದಾಖಲಿಸಲಾಗಿರುವ ಎಫ್ಐಆರ್ ರದ್ದುಪಡಿಸಬೇಕೆಂದು ಆಗ್ರಹಿಸಿ ದಿ ವೈರ್ ಸುದ್ದಿಜಾಲತಾಣ ಹಾಗೂ ಅದರ ಇಬ್ಬರು ಪತ್ರಕರ್ತರ ಸಲ್ಲಿಸಿದ ಅರ್ಜಿಯ ಬಗ್ಗೆ ಉತ್ತರಿಸುವಂತೆ ಅಲಹಾಬಾದ್ ಹೈಕೋರ್ಟ್ ಉತ್ತರಪ್ರದೇಶ ಸರಕಾರಕ್ಕೆ ಸೂಚಿಸಿದೆ.

ದಿ ವೈರ್ ಹಾಗೂ ಅದರ ಪತ್ರಕರ್ತರ ವಿರುದ್ಧ ಭಾರತೀಯ ದಂಡಸಂಹಿತೆಯ 153 (ಗಲಭೆಯನ್ನು ಸೃಷ್ಟಿಸುವ ಉದ್ದೇಶದಿಂದ ಪ್ರಚೋದನೆಯನ್ನು ನೀಡುವುದು), 153ಎ ( ವಿವಿಧ ಗುಂಪುಗಳ ನಡುವೆ ಶತ್ರುತ್ವಕ್ಕೆ ಉತ್ತೇಜನ), 505(1)(ಬಿ) ( ಸಾರ್ವಜನಿಕರಲ್ಲಿ ಭೀತಿ ಮೂಡಿಸುವ ಉದ್ದೇಶ), 120 ಬಿ (ಕ್ರಿಮಿನಲ್ ಸಂಚು) ಹಾಗೂ34 (ಸಮಾನ ದುರುದ್ದೇಶದಿಂದ ಹಲವಾರು ವ್ಯಕ್ತಿಗಳು ಕೃತ್ಯಗಳನ್ನು ಎಸಗುವುದು) ಸೆಕ್ಷನ್ಗಳಡಿ ದಿ ವೈರ್ ಹಾಗೂ ಇತರ ಪತ್ರಕರ್ತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
 
ಈ ಬಗ್ಗೆ ಅಕ್ಟೋಬರ್ 21ರೊಳಗೆ ಉತ್ತರಿಸುವಂತೆಯೂ ನ್ಯಾಯಮೂರ್ತಿಗಳಾದ ರಮೇಶ್ ಸಿಂಗ್ ಹಾಗೂ ಸರೋಜ್ ಯಾದವ್ ಅವರನ್ನೊಳಗೊಂಡ ನ್ಯಾಯಪೀಠವು ಆದೇಶಿಸಿದೆ.
  
ಅಲಿ ಹಾಗೂ ಚೌಹಾಣ್ ಮತ್ತು ದಿ ವೈರ್ ಪತ್ರಿಕೆ ಅಲ್ಲದೆ ಮಸೀದಿ ಸಮಿತಿಯ ಕಾರ್ಯದರ್ಶಿ ಮುಹಮ್ಮದ್ ಅನೀಸ್, ವಿಡಿಯೋದಲ್ಲಿ ದಿ ವೈರ್ ಪತ್ರಿಕೆಯ ವರದಿಗಾರನ ಜೊತೆ ಮಾತನಾಡಿದ ಸ್ಥಳೀಯ ನಿವಾಸಿಗಳಲ್ಲಿ ಒಬ್ಬನಾದ ಮುಹಮ್ಮದ್ ನಯೀಮ್ ಅವರನ್ನು ಕೂಡಾ ಎಫ್ಐಆರ್ನಲ್ಲಿ ಹೆಸರಿಸಲಾಗಿದೆ. ಪೊಲೀಸ್ ಅಧಿಕಾರಿ ಮಹೇಂದ್ರಸಿಂಗ್ ನೀಡಿದ ದೂರನ್ನು ಆಧರಿಸಿ ಎಫ್ಐಆರ್ ದಾಖಲಾಗಿತ್ತು.

ಮಸೀದಿಯನ್ನು ನೆಲಸಮಗೊಳಿಸುವ ಕಾರ್ಯಾಚರಣೆ ನಡೆಸುವ ಎರಡು ತಿಂಗಳು ಮೊದಲು ಪೊಲೀಸರು ತಮ್ಮ ಕುಟುಂಬ ಸದಸ್ಯರ ಎದುರೇ ತಮ್ಮ ಮೇಲೆ ಯಾವ ರೀತಿ ದೌರ್ಜನ್ಯವೆಸಗಿದ್ದರು ಎಂಬುದನ್ನು ಸ್ಥಳೀಯ ನಿವಾಸಿಗಳು ಹಾಗೂ ಮಸೀದಿ ಸಮಿತಿಯ ಸದಸ್ಯರು ದಿ ವೈರ್ ನ ವಿಡಿಯೋದಲ್ಲಿ ತಿಳಿಸಿದ್ದರು. ಮಸೀದಿಯನ್ನು ಧ್ವಂಸಗೊಳಿಸುವ ಆಡಳಿತದ ನಿರ್ಧಾರವನ್ನು ಪ್ರತಿಭಟಿಸಿ ಮಾರ್ಚ್ 20ರಂದು ಪ್ರತಿಭಟನೆ ನಡೆದ ಸಂದರ್ಭ ಈ ಘಟನೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ 180ಕ್ಕೂ ಅಧಿಕ ಮಂದಿಯ ವಿರುದ್ಧ ಕೊಲೆಯತ್ನ ಸೇರಿದಂತೆ ಗಂಭೀರ ಆರೋಪಗಳನ್ನು ಹೊರಿಸಿ ಎಫ್ಐಆರ್ ದಾಖಲಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X