Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಾಗತಿಕ ಆಹಾರ ವ್ಯವಸ್ಥೆಯ ವೈಫಲ್ಯ...

ಜಾಗತಿಕ ಆಹಾರ ವ್ಯವಸ್ಥೆಯ ವೈಫಲ್ಯ ಆತಂಕಕಾರಿ: ವಿಶ್ವಸಂಸ್ಥೆ ಶೃಂಗಸಭೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ24 Sept 2021 10:47 PM IST
share
ಜಾಗತಿಕ ಆಹಾರ ವ್ಯವಸ್ಥೆಯ ವೈಫಲ್ಯ ಆತಂಕಕಾರಿ: ವಿಶ್ವಸಂಸ್ಥೆ ಶೃಂಗಸಭೆ ಎಚ್ಚರಿಕೆ

ನ್ಯೂಯಾರ್ಕ್, ಸೆ.24: ಭವಿಷ್ಯದಲ್ಲಿ ಜಾಗತಿಕ ಆಹಾರ ವ್ಯವಸ್ಥೆಯ ಕುರಿತು ತುರ್ತು ಎಚ್ಚರಿಕೆ ಜಾರಿಗೊಳಿಸಿರುವ ವಿಶ್ವಸಂಸ್ಥೆ ಅಧಿಕಾರಿಗಳು ಹಾಗೂ ಜಾಗತಿಕ ಮುಖಂಡರು, ಆಹಾರ ವ್ಯವಸ್ಥೆ ಮುಂದಿನ ತಲೆಮಾರಿಗೆ ಸಂವಹನೀಯ ಮತ್ತು ನ್ಯಾಯಸಮ್ಮತ ರೀತಿಯಲ್ಲಿ ಉಳಿಯುವುದನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಸಂಘಟಿತರಾಗಿ ಕಾರ್ಯನಿರ್ವಹಿಸಲು ಪಣತೊಟ್ಟಿದ್ದಾರೆ ಎಂದು ವರದಿಯಾಗಿದೆ.

‌ಈಗಿನ ಆಹಾರ ವ್ಯವಸ್ಥೆ ವಿಫಲವಾಗುತ್ತಿದೆ. ಪ್ರತೀ ದಿನ ಸುಮಾರು 800 ಮಿಲಿಯನ್ಗೂ ಅಧಿಕ ಜನತೆ ಹಸಿವಿನಿಂದ ಬಳಲುತ್ತಿದ್ದಾರೆ. ಮಿಲಿಯಾಂತರ ಮಕ್ಕಳು ಉಪವಾಸ ಬೀಳುವ ಪರಿಸ್ಥಿತಿಯಿದೆ ಮತ್ತು ಉತ್ಪಾದನೆಯಾಗುವ ಆಹಾರದಲ್ಲಿ ಸುಮಾರು 3ನೇ ಒಂದು ಅಂಶದಷ್ಟು ವ್ಯರ್ಥವಾಗುತ್ತಿದೆ. ವ್ಯರ್ಥವಾಗುತ್ತಿರುವ ಆಹಾರದ ಮೌಲ್ಯ 1 ಲಕ್ಷ ಕೋಟಿ ಡಾಲರ್ಗೂ ಅಧಿಕವಾಗಿದೆ ಎಂದು ವಿಶ್ವಸಂಸ್ಥೆಯ ಉಪಪ್ರಧಾನ ಕಾರ್ಯದರ್ಶಿ ಅಮೀನಾ ಮುಹಮ್ಮದ್ ಹೇಳಿದ್ದಾರೆ. ವಿಶ್ವಸಂಸ್ಥೆ ಜಾಗತಿಕ ಆಹಾರ ಶೃಂಗಸಭೆ 2021ರಲ್ಲಿ ಅವರು ಮಾತನಾಡುತ್ತಿದ್ದರು.

3 ಮಿಲಿಯನ್ ಜನತೆಗೆ ಆರೋಗ್ಯಕರ ಆಹಾರ ದೊರಕುತ್ತಿಲ್ಲ. ಇದೇ ವೇಳೆ 2 ಬಿಲಿಯನ್ ಜನತೆ(ಪುರುಷರು, ಮಕ್ಕಳು, ಮಹಿಳೆಯರು) ಸ್ಥೂಲಕಾಯ(ಬೊಜ್ಜು) ಹೊಂದಿದ್ದಾರೆ. ಇದೇ ವ್ಯವಸ್ಥೆ ಮುಂದುವರಿದರೆ ಆಹಾರ ಸಂಬಂಧಿತ ಆರೋಗ್ಯ ಸಮಸ್ಯೆಗೆ ಮಾಡುತ್ತಿರುವ ವೆಚ್ಚಕ್ಕೆ ಇನ್ನೂ 1 ಲಕ್ಷ ಕೋಟಿ ಡಾಲರ್ ವೆಚ್ಚ ಸೇರ್ಪಡೆಗೊಳ್ಳಲಿದೆ. ಸರಳವಾಗಿ ಹೇಳುವುದಾದರೆ ನಮ್ಮ ಆಹಾರ ವ್ಯವಸ್ಥೆ ಉದ್ದೇಶಿತ ಗುರಿ ತಲುಪಲು ವಿಫಲವಾಗಿದೆ. ಸುಸ್ಥಿರ, ಸಂವಹನೀಯ ಆಹಾರ ಉತ್ಪಾದನಾ ವ್ಯವಸ್ಥೆಯ ಮೂಲಕ ನಮ್ಮ ಭೂಮಿಯನ್ನು ರಕ್ಷಿಸುವ ಜೊತೆಗೆ ಹೆಚ್ಚುತ್ತಿರುವ ಜಾಗತಿಕ ಸಮುದಾಯಕ್ಕೆ ಆಹಾರ ಒದಗಿಸಲು ಸಾಧ್ಯವಾಗಲಿದೆ. ಆದರೆ ಒಗ್ಗೂಡಿ ಕಾರ್ಯ ನಿರ್ವಹಿದರೆ ಮಾತ್ರ ಇದು ಸಾಧ್ಯ ಎಂದವರು ಹೇಳಿದ್ದಾರೆ.

ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಎಲ್ ಸಿಸಿ, ಟರ್ಕಿ ಅಧ್ಯಕ್ಷ ರೆಸೆಪ್ ತಯೀಪ್ ಎರ್ಡೋಗನ್, ಅಮೆರಿಕನ್ ಇಂಟರ್ನ್ಯಾಷನಲ್ ಡೆವಲಪ್ಮೆಂಟ್ ಮುಖ್ಯಸ್ಥೆ ಸಮಂತಾ ಪೊವಾರ್ ಮುಂತಾದ ವಿಶ್ವಮುಖಂಡರು ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿ, ನೂತನ ಆಹಾರ ಉತ್ಪಾದನಾ ವ್ಯವಸ್ಥೆಯ ಅಗತ್ಯವನ್ನು ಪ್ರತಿಪಾದಿಸಿದರು.

 ವಿಶ್ವದಲ್ಲಿ ಹಸಿರುಮನೆ ಅನಿಲ ಹೊರಸೂಸುವಿಕೆಯಲ್ಲಿ ಕೃಷಿ ಕ್ಷೇತ್ರದ ಪಾಲು 19-29% ಆಗಿರುವುದರಿಂದ, ಪರಿಸರಕ್ಕೆ ಹಾನಿಯಾಗುವ ರೀತಿಯಲ್ಲಿ ಆಹಾರ ಉತ್ಪಾದಿಸುವ ವ್ಯವಸ್ಥೆಗೆ ಪರ್ಯಾಯ ಹುಡುಕಬೇಕಿದೆ ಎಂದು ಈ ವರ್ಷ ವಿಶ್ವಬ್ಯಾಂಕ್ ಬಿಡುಗಡೆಗೊಳಿಸಿರುವ ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X