ಶ್ರೀರಂಗಪಟ್ಟಣ: ದೇಗುಲದಿಂದ ಆಭರಣ, ಕಾಣಿಕೆ ಹುಂಡಿ ಕಳವು
ಮಂಡ್ಯ, ಸೆ.25: ದೇಗುಲದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ದೇವರ ವಿಗ್ರಹದ ಮೇಲಿನ ಆಭರಣಗಳು ಹಾಗೂ ಕಾಣಿಕೆ ಹುಂಡಿಯನ್ನು ಕಳವುಗೈದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಚೊಟ್ಟನಹಳ್ಳಿ ಎಂಬಲ್ಲಿ ನಡೆದಿರುವುದು ವರದಿಯಾಗಿದೆ.
ಚೊಟ್ಟನಹಳ್ಳಿ ಗ್ರಾಮದ ಹಿರಿಯಮ್ಮನ ದೇಗುಲದಿಂದ ಕಳೆದ ರಾತ್ರಿ ಈ ಕಳ್ಳತನ ನಡೆದಿದ್ದು, ಇಂದು ಬೆಳಗ್ಗೆ ಕೃತ್ಯ ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಅರೆಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.
Next Story