Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಾಧ್ಯತೆಗಳಿಗೆ ಬದ್ಧರಾಗಿರಿ:...

ಬಾಧ್ಯತೆಗಳಿಗೆ ಬದ್ಧರಾಗಿರಿ: ತಾಲಿಬಾನ್‌ಗೆ ಭಾರತ, ಅಮೆರಿಕ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ25 Sept 2021 11:21 PM IST
share

ವಾಷಿಂಗ್ಟನ್, ಸೆ.25: ಬಾಧ್ಯತೆಗಳನ್ನು ಮರೆಯಬಾರದು ಮತ್ತು ಮಕ್ಕಳು, ಮಹಿಳೆಯರು, ಅಲ್ಪಸಂಖ್ಯಾತರ ಸಹಿತ ಎಲ್ಲಾ ಅಫ್ಗಾನೀಯರ ಮಾನವ ಹಕ್ಕುಗಳನ್ನು ಗೌರವಿಸಬೇಕು ಎಂದು ಭಾರತ ಮತ್ತು ಅಮೆರಿಕಗಳು ತಾಲಿಬಾನ್ ಅನ್ನು ಆಗ್ರಹಿಸಿವೆ. ಯುದ್ಧದಿಂದ ಜರ್ಝರಿತವಾಗಿರುವ ಅಫ್ಗಾನ್ ದೇಶವನ್ನು ಇತರ ದೇಶಗಳ ಮೇಲೆ ಬೆದರಿಕೆ ಒಡ್ಡಲು, ಉಗ್ರರಿಗೆ ಆಶ್ರಯ ಅಥವಾ ತರಬೇತಿ ನೀಡಲು ಅಥವಾ ಭಯೋತ್ಪಾದಕ ಕೃತ್ಯಗಳಿಗೆ ಆರ್ಥಿಕ ನೆರವು ಸಂಗ್ರಹಿಸಲು ಮತ್ತೊಮ್ಮೆ ಬಳಸಲು ಆಸ್ಪದ ನೀಡುವುದಿಲ್ಲ ಎಂಬುದನ್ನು ತಾಲಿಬಾನ್ ಖಾತರಿಗೊಳಿಸಬೇಕು ಎಂದು ಭಾರತ-ಅಮೆರಿಕ ಮುಖಂಡರ ಜಂಟಿ ಹೇಳಿಕೆಯಲ್ಲಿ ಆಗ್ರಹಿಸಲಾಗಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ನಡುವೆ ನಡೆದ ಪ್ರಪ್ರಥಮ ಮುಖಾಮುಖಿ ಸಭೆಯ ಸಂದರ್ಭ ಅಫ್ಗಾನ್‌ನಲ್ಲಿ ಭಯೋತ್ಪಾದನೆಯನ್ನು ಮಟ್ಟಹಾಕಲು ಹೆಚ್ಚಿನ ಪ್ರಾಮುಖ್ಯ ನೀಡಲು ನಿರ್ಧರಿಸಲಾಗಿದೆ. ವಿಶ್ವಸಂಸ್ಥೆಯ 2593ನೇ ನಿರ್ಣಯಕ್ಕೆ ( ದೇಶವನ್ನು ಇತರ ದೇಶಗಳ ಮೇಲೆ ಬೆದರಿಕೆ ಒಡ್ಡಲು, ಉಗ್ರರಿಗೆ ಆಶ್ರಯ ಅಥವಾ ತರಬೇತಿ ನೀಡಲು ಅಥವಾ ಭಯೋತ್ಪಾದಕ ಕೃತ್ಯಗಳಿಗೆ ಆರ್ಥಿಕ ನೆರವು ಸಂಗ್ರಹಿಸಲು ಮತ್ತೊಮ್ಮೆ ಬಳಸಲು ಆಸ್ಪದ ನೀಡುವುದಿಲ್ಲ ಎಂಬುದನ್ನು ಖಾತರಿಗೊಳಿಸುವುದು) ತಾಲಿಬಾನ್ ಬದ್ಧರಾಗಿರಬೇಕು . ಅಫ್ಗಾನ್‌ನಿಂದ ಹೊರಹೋಗ ಬಯಸುವವರಿಗೆ ಸುರಕ್ಷಿತ ಪ್ರಯಾಣವನ್ನು ಖಾತರಿಗೊಳಿಸಬೇಕು ಎಂದು ಉಭಯ ಮುಖಂಡರು ಆಗ್ರಹಿಸಿದರು. ಭಾರತದ ಅಧ್ಯಕ್ಷತೆಯಲ್ಲಿ ಆಗಸ್ಟ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಭದ್ರತಾ ಸಮಿತಿ ಸಭೆಯಲ್ಲಿ ಈ ನಿರ್ಣಯವನ್ನು ಅನುಮೋದಿಸಲಾಗಿದೆ.

ಮರಣದಂಡನೆ ಶಿಕ್ಷೆ ಜಾರಿ ನಿರ್ಧಾರಕ್ಕೆ ಅಮೆರಿಕ ಖಂಡನೆ

ಮರಣದಂಡನೆ, ಅಂಗಛೇದನವನ್ನು ಶಿಕ್ಷೆಯ ವಿಧಾನವಾಗಿ ಮರು ಜಾರಿಗೊಳಿಸುವ ತಾಲಿಬಾನ್‌ಗಳ ಯೋಜನೆಯನ್ನು ಅಮೆರಿಕ ತೀವ್ರವಾಗಿ ಖಂಡಿಸಿದೆ.

ಅಮೆರಿಕವು ಅಫ್ಗಾನ್‌ನ ಜನತೆಯ, ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯದವರ ಬೆಂಬಲಕ್ಕೆ ನಿಲ್ಲಲಿದೆ ಎಂದಿರುವ ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್, ತಾಲಿಬಾನ್‌ಗಳು ತಕ್ಷಣವೇ ಇಂತಹ ಕ್ರೂರ ಶಿಕ್ಷಾ ಪದ್ಧತಿಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು. ಇಂತಹ ಕೃತ್ಯಗಳು ಮಾನವಹಕ್ಕುಗಳ ಸಾರಾಸಗಟು ಉಲ್ಲಂಘನೆಯಾಗಿದೆ ಮತ್ತು ಇಂತಹ ಯಾವುದೇ ಕೃತ್ಯದ ಅಪರಾಧಿಗಳನ್ನು ಹೊಣೆಗಾರರನ್ನಾಗಿ ಮಾಡಬೇಕೆಂಬ ಅಂತರಾಷ್ಟ್ರೀಯ ಸಮುದಾಯದ ಆಗ್ರಹಕ್ಕೆ ನಮ್ಮ ಬೆಂಬಲವಿದೆ ಎಂದವರು ಹೇಳಿದ್ದಾರೆ.

ಅಂತರಾಷ್ಟ್ರೀಯ ಸಮುದಾಯ ತಾಲಿಬಾನ್‌ಗಳನ್ನು ನಿಕಟವಾಗಿ ಗಮನಿಸುತ್ತಿದೆ. ಮಾನವಹಕ್ಕುಗಳನ್ನು ಮತ್ತು ಮೂಲಭೂತ ಸ್ವಾತಂತ್ರ್ಯವನ್ನು ಗೌರವಿಸುವ ಅಗತ್ಯವನ್ನು ಅಫ್ಗಾನ್‌ನ ಸರಕಾರಕ್ಕೆ ನಿರಂತರವಾಗಿ ಒತ್ತಿಹೇಳುತ್ತಿದ್ದೇವೆ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X