Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸುರಕ್ಷತಾ ಕ್ರಮಗಳಿಲ್ಲದೆ ಸ್ಫೋಟಕ ಹೊತ್ತ...

ಸುರಕ್ಷತಾ ಕ್ರಮಗಳಿಲ್ಲದೆ ಸ್ಫೋಟಕ ಹೊತ್ತ ವಾಹನಗಳ ಸಂಚಾರ

ಶಿವಮೊಗ್ಗ ನಗರದಲ್ಲಿ ಮನೆ ಮಾಡಿದ ಆತಂಕ

ವಾರ್ತಾಭಾರತಿವಾರ್ತಾಭಾರತಿ25 Sept 2021 11:52 PM IST
share
ಸುರಕ್ಷತಾ ಕ್ರಮಗಳಿಲ್ಲದೆ ಸ್ಫೋಟಕ ಹೊತ್ತ ವಾಹನಗಳ ಸಂಚಾರ

► ಇನ್ನೂ ತನಿಖೆ ಪೂರ್ಣಗೊಳ್ಳದ ಹುಣಸೋಡು ಸ್ಫೋಟ ಪ್ರಕರಣ

ಶಿವಮೊಗ್ಗ, : ಹುಣಸೋಡು ಸ್ಫೋಟದ ತನಿಖೆ ಇನ್ನೂ ಪೂರ್ಣಗೊಳ್ಳುವ ಮುನ್ನವೇ ಶಿವಮೊಗ್ಗ ನಗರದಲ್ಲಿ ಸ್ಫೋಟಕ ಹೊತ್ತ ವಾಹನಗಳು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಸಂಚರಿಸುತ್ತಿರುವುದು ನಗರದಲ್ಲಿ ಆತಂಕ ಮೂಡಿಸಿದೆ.

 ಶಿವಮೊಗ್ಗ ನಗರದ ಹೊರವಲಯದಲ್ಲಿ ಶೈನ್ ಹೊಟೇಲ್ ಬಳಿ ಶನಿವಾರ ಲಾರಿಯೊಂದು ನಿಂತಿದೆ. ಸುಮಾರು 10 ಟನ್ ಸ್ಫೋಟಕ ಸಾಮಗ್ರಿ ತುಂಬಿದ್ದ ಲಾರಿಯ ಟಯರ್ ಪಂಕ್ಟರ್ ಆಗಿದ್ದು, ದುರಸ್ತಿಗಾಗಿ ಹಗಲಿಡೀ ಲಾರಿ ನಿಂತಿತ್ತು. ಆದರೆ ಪಂಕ್ಟರ್ ಹಾಕುವ ಹುಡುಗರಿಗೆ ಆ ಲಾರಿಯಲ್ಲಿ ಸ್ಫೋಟಕ ತುಂಬಿರುವುದು ಗೊತ್ತಿರಲಿಲ್ಲ. ಉಡುಪಿ ಜಿಲ್ಲೆಯ ಹೆಬ್ರಿಯಿಂದ ಸ್ಫೋಟಕ ತುಂಬಿಕೊಂಡು ಬಂದಿದ್ದ ಲಾರಿಯು ಪಂಕ್ಟರ್ ಹಾಕಿಸಲು ನಿಂತಿತ್ತು. ಸ್ಫೋಟಕ ಸಾಗಿಸುವ ಲಾರಿ ಜನನಿಬಿಡ ಪ್ರದೇಶದಲ್ಲಿ ನಿಲ್ಲಬಾರದೆಂಬ ನಿಯಮ ಇದೆ. ಸಾಗಿಸುವಾಗಲೇ ಸುರಕ್ಷತಾ ಕ್ರಮ ಅನುಸರಿಸಬೇಕು ಮತ್ತು ತಕ್ಕ ಸುರಕ್ಷತಾ ಬೆಂಗಾವಲು ಇರಬೇಕು. ಆದರೆ, ಇದ್ಯಾವ ನಿಯಮಗಳನ್ನು ಪಾಲಿಸಲಾಗಿಲ್ಲ ಎಂದು ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಮುಂದುವರಿಯುತ್ತಿರುವ ಕಲ್ಲು ಗಣಿಕಾರಿಕೆ: ಹುಣಸೋಡು ಸ್ಫೋಟ ಪ್ರಕರಣದಲ್ಲಿ ಭಾರೀ ಅನಾಹುತ ಆಗಿದ್ದು, ಆರು ಮಂದಿ ಜೀವ ಕಳೆದುಕೊಂಡಿದ್ದರು. ಸ್ಥಳದಲ್ಲಿದ್ದರೆನ್ನಲಾದ ಇನ್ನಿಬ್ಬರು ವ್ಯಕ್ತಿಗಳ ಸುಳಿವೇ ಇಲ್ಲ ಎನ್ನಲಾಗಿದೆ. ಈ ಪ್ರಕರಣದ ತನಿಖೆಯೂ ಮುಂದುವರಿದಿದೆ. ದೇಶವ್ಯಾಪಿ ಸುದ್ದಿಯಾಗಿ ಪ್ರಧಾನಿ ಯವರ ಗಮನ ಸೆಳೆದ ಈ ಪ್ರಕರಣ ನಡೆದ ಮೇಲೂ ಮಲೆನಾಡಿನಲ್ಲಿ ಸ್ಫೋಟಕ ಸಾಮಗ್ರಿಗಳ ಸಾಗಾಟ ಅವ್ಯಾಹತವಾಗಿ ನಡೆಯುತ್ತಿದೆ. ಇದಕ್ಕೆ ಪೂರಕ ಎಂಬಂತೆ ಆಡಳಿತ ನಡೆಸುವ ಶಾಸಕರು ಮತ್ತು ಸಚಿವರು ಸ್ಥಗಿತಗೊಂಡ ಕಲ್ಲುಗಣಿ ಆರಂಭಿಸಬೇಕೆಂದು ಲಾಬಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಈ ಎಲ್ಲಾ ಹಿನ್ನೆಲೆಯಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಲೇ ಇವೆ ಎಂದು ತಿಳಿದು ಬಂದಿದೆ.

 ಪ್ರತಿದಿನ ಶಿವಮೊಗ್ಗದ ನಗರದೊಳಗೆ 2 ರಿಂದ 3 ಲಾರಿಗಳು ಸ್ಫೋಟಕ ಸಾಮಗ್ರಿಗಳನ್ನು ಸಾಗಿಸುತ್ತವೆ ಎಂಬ ಮಾಹಿತಿ ಇದೆ. ಇದರ ಭಾಗವಾಗಿಯೇ ಸ್ಫೋಟಕ ತುಂಬಿದ ಲಾರಿ ನಗರದಲ್ಲಿ ನಿಂತಿತ್ತು. ಸ್ಫೋಟಕ ವಿಚಾರ ತಿಳಿಯುತ್ತಲೇ ಪಂಕ್ಟರ್ ಹಾಕುತ್ತಿದ್ದ ಹುಡುಗರು ಕೂಡ ಹೆದರಿ ದೂರ ಸರಿದಿದ್ದಾರೆ. ಲಾರಿಯಲ್ಲಿ ಕಾನೂನುಬದ್ಧ ಬಿಲ್‌ ಗಳಿದ್ದರೂ, ಚಾಲಕನ ಬಳಿ ಸ್ಫೋಟಕ ವಾಹನ ಚಲಾಯಿಸುವ ಪರವಾನಿಗೆ ಇರಲಿಲ್ಲ ಎನ್ನಲಾಗಿದೆ. ಪೊಲೀಸರಿಗೂ ಸ್ಫೋಟಕ ಸಾಗಾಟದ ಬಗ್ಗೆ ಮಾಹಿತಿಯಿರಲಿಲ್ಲ ಎನ್ನುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ನೆರೆ ಜಿಲ್ಲೆಗಳಿಗೂ ಸಾಗಾಟ: ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಬೆಲ್‌ಟೆಕ್ ಕಂಪೆನಿಯಿಂದ ಸ್ಫೋಟಕಗಳನ್ನು ಹೊತ್ತ ಲಾರಿಗಳು ಪ್ರತಿದಿನ ತೀರ್ಥಹಳ್ಳಿ ಮೂಲಕ ಶಿವಮೊಗ್ಗ ಬೈಪಾಸ್ ರಸ್ತೆ ಮಾರ್ಗವಾಗಿ ಹೊಳೆಹೊನ್ನೂರು, ಚಿತ್ರದುರ್ಗ, ದಾವಣಗೆರೆಯ ಕ್ವಾರೆಗಳಿಗೆ ಪೂರೈಕೆಯಾಗುತ್ತಿದೆ ಎನ್ನುವ ಮಾಹಿತಿ ಪೊಲೀಸರಿಗೆ ಸಿಕ್ಕಿದೆ ಎಂದು ತಿಳಿದು ಬಂದಿದೆ.

ತನಿಖಾ ತಂಡ ರಚನೆ:

ಡಿವೈಎಸ್ಪಿ ಸ್ಥಳಕ್ಕೆ ಭೇಟಿ ನೀಡಿದ ಪ್ರಶಾಂತ್ ಮುನ್ನೊಳ್ಳಿ , ಲಾರಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.ಸ್ಫೋಟಕ ಸಾಗಣೆ ಬಗ್ಗೆ ತನಿಖೆ ನಡೆಸಲು ತನಿಖಾ ತಂಡವನ್ನು ಎಸ್ಪಿ ಲಕ್ಷ್ಮಿ ಪ್ರಸಾದ್ ತನಿಖಾ ತಂಡ ರಚಿಸಿ ಮಾಹಿತಿ ಕಲೆಹಾಕುವಂತೆ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X