Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತೈವಾನ್-ಚೀನಾ ಸಂಬಂಧ ಹಳಸುತ್ತಿದೆ: ಚೀನಾ...

ತೈವಾನ್-ಚೀನಾ ಸಂಬಂಧ ಹಳಸುತ್ತಿದೆ: ಚೀನಾ ಅಧ್ಯಕ್ಷ ಕ್ಸಿಜಿಂಪಿಂಗ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ26 Sept 2021 10:21 PM IST
share

ಬೀಜಿಂಗ್, ಸೆ.26: ತೈವಾನ್ ಮತ್ತು ಚೀನಾದ ನಡುವಿನ ಸಂಬಂಧ ಅಹಿತಕರವಾಗಿದ್ದು ಅಲ್ಲಿನ ಪ್ರಮುಖ ವಿಪಕ್ಷವು ದೇಶದ ಏಕೀಕರಣಕ್ಕೆ ನೆರವಾಗಬೇಕು ಎಂದು ಚೀನಾದ ಅಧ್ಯಕ್ಷ ಕ್ಸಿ ಜಿಂಪಿಂಗ್ ರವಿವಾರ ಎಚ್ಚರಿಕೆ ನೀಡಿದ್ದಾರೆ. ತೈವಾನ್‌ನಲ್ಲಿ ಈಗಿರುವ ಪರಿಸ್ಥಿತಿ ಅತ್ಯಂತ ಅಹಿತಕರ ಮತ್ತು ಸಂಕೀರ್ಣ ಪರಿಸ್ಥಿತಿಯಿದ್ದು ಇಲ್ಲಿನ ಎಲ್ಲಾ ಪಕ್ಷಗಳೂ ಶಾಂತಿಯನ್ನು ಬಯಸಿ ದೇಶದ ಏಕೀಕರಣದಲ್ಲಿ ಕೈಜೋಡಿಸಬೇಕು ಎಂದು ಕ್ಸಿ ಜಿಂಪಿಂಗ್ ತೈವಾನ್‌ನ ಕೆಎಂಟಿ ಪಕ್ಷದ ನಾಯಕನಾಗಿ ಆಯ್ಕೆಗೊಂಡಿರುವ ಎರಿಕ್ ಚು ರನ್ನು ಅಭಿನಂದಿಸಿ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ. ಚು ಅವರ ಕೆಎಂಟಿ ಪಕ್ಷ ಚೀನಾದ ಪರವಾಗಿದೆ.

‌ಸ್ವಯಂ ಆಡಳಿತದ ಪ್ರಜಾಪ್ರಭುತ್ವ ವ್ಯವಸ್ಥೆ ಇರುವ ತೈವಾನ್ ತನ್ನ ಅಧೀನಕ್ಕೆ ಸೇರಿದ ಪ್ರದೇಶ ಎಂದು ಪ್ರತಿಪಾದಿಸುತ್ತಿರುವ ಚೀನಾ ಅಗತ್ಯಬಿದ್ದರೆ ಬಲಪ್ರಯೋಗಿಸಿಯಾದರೂ ತೈವಾನ್ ಅನ್ನು ಚೀನಾದೊಳಗೆ ಸೇರಿಸುವುದಾಗಿ ಘೋಷಿಸಿದೆ. ಮಾವೊ ಝೆಡಾಂಗ್ ಬಳಿಕದ ಅತ್ಯಂತ ಯುದ್ಧಪ್ರಿಯ ಮುಖಂಡ ಎಂದು ಪರಿಗಣಿಸಲ್ಪಟ್ಟಿರುವ ಕ್ಸಿಜಿಂಪಿಂಗ್, ತೈವಾನ್ ಅನ್ನು ವಶಕ್ಕೆ ಪಡೆಯುವುದು ಅನಿವಾರ್ಯವಾಗಿದೆ ಎಂದು ಘೋಷಿಸಿದ್ದಾರೆ.
ಚೀನಾದ ಕಮ್ಯುನಿಸ್ಟ್ ಪಕ್ಷ ಮತ್ತು ಕೆಎಂಟಿ ಪಕ್ಷಗಳು ಸಮಾನ ರಾಜಕೀಯ ನಿಲುವು ಹೊಂದಿವೆ. ಈ ಹಿಂದೆಯೂ ಎರಡೂ ಪಕ್ಷಗಳು, ತೈವಾನ್‌ನ ಸ್ವಾತಂತ್ರ್ಯವನ್ನು ವಿರೋಧಿಸುವ 1992ರ ಜನಾಭಿಪ್ರಾಯದ ಬಗ್ಗೆ ಸಹಮತ ಹೊಂದಿದ್ದವು ಎಂದು ತ್ರದಲ್ಲಿ ಕ್ಸಿಜಿಂಪಿಂಗ್ ಉಲ್ಲೇಖಿಸಿದ್ದಾರೆ.

ಆದರೆ ಈಗ ತೈವಾನ್‌ನ ಪರಿಸ್ಥಿತಿ ಅಹಿತಕರ ಮತ್ತು ಅತ್ಯಂತ ಸಂಕೀರ್ಣವಾಗಿದೆ. ತೈವಾನ್‌ನ ಎಲ್ಲಾ ಪಕ್ಷಗಳೂ ದೇಶದ ಏಕೀಕರಣ ಪ್ರಕ್ರಿಯೆಯಲ್ಲಿ ಸಹಮತ ಸೂಚಿಸಬೇಕು ಎಂದವರು ಆಗ್ರಹಿಸಿದ್ದಾರೆ. ಇದಕ್ಕೆ ಉತ್ತರಿಸಿರುವ ಚು, ತೈವಾನ್ ಜಲಸಂಧಿಯಲ್ಲಿ ಶಾಂತಿ ಮತ್ತು ಸ್ಥಿರತೆಗೆ ಪ್ರೋನೀಡುವ ನಿಟ್ಟಿನಲ್ಲಿ ಎರಡೂ ಪಕ್ಷಗಳು ಪರಸ್ಪರರ ಅಭಿಪ್ರಾಯ ಭೇದಗಳನ್ನು ಗೌರವಿಸಬೇಕಾಗಿದೆ ಎಂದಿದ್ದಾರೆ.

ಕೆಎಂಟಿ ಪಕ್ಷದ ಮುಖಂಡ ಮಾ ಯಿಂಗ್ ಜಿಯು 2008-2016ರವರೆಗೆ ತೈವಾನ್ ಅಧ್ಯಕ್ಷರಾಗಿದ್ದ ಸಂದರ್ಭ ಅವರು ಮತ್ತು ಚೀನಾ ಅಧ್ಯಕ್ಷ ಜಿಂಪಿಂಗ್ ಮಧ್ಯೆ 2015ರಲ್ಲಿ ಸಿಂಗಾಪುರದಲ್ಲಿ ನಡೆದಿದ್ದ ಸಭೆಯಲ್ಲಿ 1992ರ ಜನಾಭಿಪ್ರಾಯ ಎಂದು ಹೇಳಲಾಗಿರುವ ‘ಒಂದೇ ಚೀನಾ’ ಎಂಬ ಒಪ್ಪಂದವನ್ನು ಬೆಂಬಲಿಸುವುದಾಗಿ ಜಿಯು ಭರವಸೆ ನೀಡಿದ್ದರು. ಆದರೆ 2016ರಲ್ಲಿ ತ್ಸಾಯ್ ಇಂಗ್‌ವೆನ್ ತೈವಾನ್ ಅಧ್ಯಕ್ಷರಾದ ಬಳಿಕ ಅವರ ಪಕ್ಷ ತೈವಾನ್ ಸಾರ್ವಭೌಮ ದೇಶವಾಗಿದ್ದು ಒಂದೇ ಚೀನಾದ ಭಾಗವಾಗಿಲ್ಲ ಎಂದು ಘೋಷಿಸಿದೆ. ಅಂದಿನಿಂದ ತೈವಾನ್ ಮೇಲೆ ಸೇನೆ, ರಾಜತಾಂತ್ರಿಕ ಮತ್ತು ಆರ್ಥಿಕ ಕ್ರಮಗಳ ಮೂಲಕ ಚೀನಾ ನಿರಂತರ ಒತ್ತಡ ಹೇರುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X