Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಪ್ಪಲಿಯಲ್ಲಿ ಬ್ಲೂಟೂತ್ ಸಾಧನ...

ಚಪ್ಪಲಿಯಲ್ಲಿ ಬ್ಲೂಟೂತ್ ಸಾಧನ ಅಳವಡಿಸಿಕೊಂಡು ಪರೀಕ್ಷೆ ಬರೆಯಲು ಮುಂದಾದ ಐವರು ಪೊಲೀಸ್ ಬಲೆಗೆ

ವಾರ್ತಾಭಾರತಿವಾರ್ತಾಭಾರತಿ26 Sept 2021 11:10 PM IST
share
ಚಪ್ಪಲಿಯಲ್ಲಿ ಬ್ಲೂಟೂತ್ ಸಾಧನ ಅಳವಡಿಸಿಕೊಂಡು ಪರೀಕ್ಷೆ ಬರೆಯಲು ಮುಂದಾದ ಐವರು ಪೊಲೀಸ್ ಬಲೆಗೆ

ಜೈಪುರ: ರಾಜಸ್ಥಾನದ ಸರಕಾರಿ ಶಾಲೆಗಳಿಗೆ ಶಿಕ್ಷಕರನ್ನು ಆಯ್ಕೆ ಮಾಡುವ ಪ್ರಮುಖ ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನಿಸಿದ ಐವರನ್ನು ಬಂಧಿಸಲಾಗಿದೆ. ಅಭ್ಯರ್ಥಿಗಳು ಬ್ಲೂಟೂತ್ ಸಾಧನಗಳನ್ನು ಒಳಭಾಗದಲ್ಲಿ ಅಳವಡಿಸಲಾಗಿದ್ದ 'ಚಪ್ಪಲ್' ಗಳನ್ನು ಧರಿಸಿರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆಂದು NDTV ವರದಿ ಮಾಡಿದೆ.

ಅಜ್ಮೇರ್‌ನಲ್ಲಿ ವ್ಯಕ್ತಿಯೊಬ್ಬ ವಂಚಿಸಿ  ಸಿಕ್ಕಿಬಿದ್ದ ನಂತರ ರಾಜ್ಯಾದ್ಯಂತ ವಂಚನೆಯ ಜಾಲ ಹರಡಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಿಕನೇರ್ ಹಾಗೂ  ಸಿಕಾರ್‌ ಜಿಲ್ಲೆಯಲ್ಲಿ  ಬ್ಲೂಟೂತ್ ಹಾಗೂ  ಮೊಬೈಲ್ ಸಾಧನಗಳೊಂದಿಗೆ ಇದೇ ರೀತಿಯ ಚಪ್ಪಲ್‌ಗಳು ಕಂಡುಬಂದಿವೆ ಎನ್ನಲಾಗಿದೆ.

ಶಿಕ್ಷಕರ ನೇಮಕಾತಿಗಾಗಿ ರವಿವಾರ   ಅತ್ಯಂತ ಸ್ಪರ್ಧಾತ್ಮಕ ರಾಜಸ್ಥಾನ ಅರ್ಹತಾ ಪರೀಕ್ಷೆಯನ್ನು (ರೀಟ್) ನಡೆಸಲಾಗುತ್ತಿದ್ದು, ಪರೀಕ್ಷೆಯಲ್ಲಿ  ಮೋಸವಾಗುವುದನ್ನು ತಡೆಯಲು ರಾಜಸ್ಥಾನದ ಹಲವು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಹಾಗೂ  ಎಸ್‌ಎಂಎಸ್ ಅನ್ನು ಇಂದು 12 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಸರಕಾರಿ ಶಾಲೆಗಳಲ್ಲಿ 31,000 ಹುದ್ದೆಗಳಿಗೆ ಸುಮಾರು 16 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಗೆ ಹಾಜರಾಗಿದ್ದರು.

ಒಬ್ಬ ವ್ಯಕ್ತಿಯು ಪರೀಕ್ಷೆಯಲ್ಲಿ ನಕಲು ಮಾಡಲು  ತನ್ನ ಚಪ್ಪಲಿಯಲ್ಲಿ ಸಾಧನಗಳನ್ನು ಹೊಂದಿದ್ದನ್ನು ನಾವು ಪತ್ತೆ ಹಚ್ಚಿದೆವು. ಪರೀಕ್ಷೆಯ ಆರಂಭದಲ್ಲಿ ನಾವು ಆತನನ್ನು ಸೆರೆ ಹಿಡಿದಿದ್ದೆವು. ಆತನಿಗೆ ಎಲ್ಲಿ  ನಂಟುಗಳಿವೆ ಹಾಗೂ ಯಾರೆಲ್ಲಾ  ಭಾಗಿಯಾಗಿದ್ದಾರೆ ಎಂಬುದನ್ನು ನಾವು ಪತ್ತೆ ಹಚ್ಚುತ್ತಿದ್ದೇವೆ. ನಾವು ತಕ್ಷಣ ಇತರ ಜಿಲ್ಲೆಗಳನ್ನೂ ಎಚ್ಚರಿಸಿದೆವು. ಪರೀಕ್ಷೆಯ ಮುಂದಿನ ಹಂತದಲ್ಲಿ, ಚಪ್ಪಲಿ, ಶೂ ಅಥವಾ ಸಾಕ್ಸ್‌ಗಳೊಂದಿಗೆ ಯಾರೂ ಪರೀಕ್ಷಾ ಕೇಂದ್ರಕ್ಕೆ ಹೋಗಲು ಸಾಧ್ಯವಿಲ್ಲ ಎಂದು ಅಜ್ಮೇರ್ ಪೊಲೀಸ್ ಅಧಿಕಾರಿ ಜಗದೀಶ್ ಚಂದ್ರ ಶರ್ಮಾ ಹೇಳಿದರು.

"ಚಪ್ಪಲ್ ಒಳಗೆ ಸಂಪೂರ್ಣ ಫೋನ್ ಹಾಗೂ  ಬ್ಲೂಟೂತ್ ಸಾಧನವಿದೆ. ಅಭ್ಯರ್ಥಿಯ ಕಿವಿಯೊಳಗೆ ಒಂದು ಸಾಧನವಿತ್ತು ಹಾಗೂ  ಪರೀಕ್ಷಾ ಸಭಾಂಗಣದ ಹೊರಗಿನಿಂದ ಯಾರೋ ಒಬ್ಬರು  ನಕಲು ಮಾಡಲು  ಸಹಾಯ ಮಾಡುತ್ತಿದ್ದರು" ಎಂದು ಪೊಲೀಸ್ ಅಧಿಕಾರಿ ರತನ್ ಲಾಲ್ ಭಾರ್ಗವ್ ಹೇಳಿದರು.

ಪೊಲೀಸರು ಇನ್ನೂ ವಿಸ್ತಾರವಾದ ವಂಚನೆಯ ಸಂಚನ್ನು ಬಿಚ್ಚಿಡುತ್ತಿದ್ದಾರೆ, ಇದು ಒಂದು ಸಣ್ಣ-ಪ್ರಮಾಣದ ಉದ್ಯಮವಾಗಿ ಕಾಣುತ್ತದೆ. 'ಚೀಟಿಂಗ್ ಚಪ್ಪಲ್‌ಗಳನ್ನು' 'ಜಾಣ್ಮೆಯಿಂದ ತಯಾರಿಸಲ್ಪಟ್ಟವು' ಹಾರ್ಡ್‌ವೇರ್ ಹೊಂದಿರುವ ಚಪ್ಪಲ್ ಗಳನ್ನು ವಂಚನೆಗಾಗಿ 2 ಲಕ್ಷ ರೂ.ಗೆ ಮಾರಾಟ ಮಾಡಿರಬಹುದು ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X