Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಂಧನ ಖರೀದಿಸಲು ಮುಗಿಬಿದ್ದ ಬ್ರಿಟಿಷರು;...

ಇಂಧನ ಖರೀದಿಸಲು ಮುಗಿಬಿದ್ದ ಬ್ರಿಟಿಷರು; ಪ್ರಮುಖ ನಗರಗಳ ಶೇ90ರಷ್ಟು ಪೆಟ್ರೋಲ್ ಬಂಕ್‍ಗಳು ಖಾಲಿ

ವಾರ್ತಾಭಾರತಿವಾರ್ತಾಭಾರತಿ27 Sept 2021 6:00 PM IST
share
ಇಂಧನ ಖರೀದಿಸಲು ಮುಗಿಬಿದ್ದ ಬ್ರಿಟಿಷರು; ಪ್ರಮುಖ ನಗರಗಳ ಶೇ90ರಷ್ಟು ಪೆಟ್ರೋಲ್ ಬಂಕ್‍ಗಳು ಖಾಲಿ

 ಲಂಡನ್: ದೇಶದಲ್ಲಿ ಟ್ರಕ್ ಚಾಲಕರು ಕೊರತೆ ಎದುರಾಗಿರುವ ನಡುವೆ ಪೂರೈಕೆ ಸರಪಳಿಯಲ್ಲಿ ಉಂಟಾಗಿರುವ ಸಮಸ್ಯೆ ಇನ್ನಷ್ಟು  ಹೆಚ್ಚುತ್ತಿರುವಂತೆಯೇ ಜನರು ಇಂಧನವನ್ನು  ದೊಡ್ಡ ಪ್ರಮಾಣದಲ್ಲಿ ಖರೀದಿಸಲು ಆರಂಭಿಸಿದ ಹಿನ್ನೆಲೆಯಲ್ಲಿ ದೇಶದ ಪ್ರಮುಖ ನಗರಗಳ ಶೇ 90ರಷ್ಟು ಪೆಟ್ರೋಲ್ ಬಂಕುಗಳಲ್ಲಿ ಇಂಧನ ಸ್ಟಾಕ್ ಮುಗಿದು ಹೋದ ಬೆಳವಣಿಗೆ ಇಂದು ನಡೆದಿದೆ.

ಬ್ರಿಟನ್ ದೇಶವು ಬ್ರೆಕ್ಸಿಟ್‍ನಿಂದ ಹೊರ ಬಂದ ನಂತರದ ಬೆಳವಣಿಗೆಯಲ್ಲಿ ಹಾಗೂ ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಲಾರಿ ಚಾಲಕರ ಕೊರತೆ ಎದುರಾಗಿರುವುದು ಬ್ರಿಟಿಷ್ ಪೂರೈಕೆ ಸರಪಳಿ ಮೇಲೆ ಭಾರೀ ವ್ಯತಿರಿಕ್ತ ಪರಿಣಾಮ ಬೀರಿದ್ದು ಆಹಾರದಿಂದ ಇಂಧನ ಪೂರೈಕ ತನಕ ಎಲ್ಲವೂ ವ್ಯತ್ಯಯಗೊಂಡು ಜಗತ್ತಿನ ಐದನೇ ದೊಡ್ಡ ಆರ್ಥಿಕತೆಯಾಗಿರುವ ಇಂಗ್ಲೆಂಡ್ ಬೃಹತ್ ಸಮಸ್ಯೆ ಎದುರಿಸುವಂತಾಗಿದೆ.

ನೈಸರ್ಗಿಕ ಅನಿಲದ ಬೆಲೆಗಳ ಏರಿಕೆಯಿಂದ ಮುಂದೆ ಆಹಾರ ಕೊರತೆಯೂ ಎದುರಾಗುವುದನ್ನು ತಪ್ಪಿಸುವ ಯತ್ನವಾಗಿ ಪ್ರಧಾನಿ ಬೋರಿಸ್ ಜಾನ್ಸನ್ ನೇತೃತ್ವದ ಸರಕಾರ ಮಿಲಿಯಗಟ್ಟಲೆ ಪೌಂಡ್ ಖರ್ಚು ಮಾಡಿದೆ. ಅವಸರದಿಂದ ಇಂಧನ ಖರೀದಿ ಮಾಡದಂತೆ ಸಚಿವರು ಮನವಿ ಮಾಡಿದ ಹೊರತಾಗಿಯೂ ರವಿವಾರದಿಂದಲೇ ದೇಶದ ವಿವಿಧೆಡೆ ಕಾರುಗಳು ಪೆಟ್ರೋಲ್ ಬಂಕುಗಳೆದುರು ಸರತಿ ನಿಂತಿದ್ದವು. ದೇಶದ ಪ್ರಮುಖ ನಗರಗಳ ಪೆಟ್ರೋಲ್ ಪಂಪುಗಳು ಒಂದೋ ಬಂದ್ ಆಗಿವೆ ಅಥವಾ ಇಂಧನ ಅಲಭ್ಯ ಎಂಬ ಬೋರ್ಡುಗಳು ಅಲ್ಲಿ ನೇತಾಡುತ್ತಿವೆ.

ಬ್ರೆಕ್ಸಿಟ್‍ಗೂ ಈ ಚಾಲಕರ ಕೊರತೆಗೂ ಸಂಬಂಧವಿಲ್ಲ ಎಂದು ಬ್ರಿಟಿಷ್ ಸಚಿವರು ಹೇಳುತ್ತಿದ್ದರೂ ಬ್ರೆಕ್ಸಿಟ್‍ನಿಂದ ಬ್ರಿಟನ್ ಹೊರಬಂದ ನಂತರ ಸುಮಾರು 25,000 ಟ್ರಕ್ ಚಾಲಕರು ಯುರೋಪ್‍ಗೆ ಮರಳಿದ್ದಾರೆ. ದೇಶದಲ್ಲಿ ಒಂದು ಲಕ್ಷ ಟ್ರಕ್ ಚಾಲಕರ ಕೊರತೆಯಿದೆಯೆನ್ನಲಾಗಿದೆ. 5,000 ವಿದೇಶಿ ಟ್ರಕ್ ಚಾಲಕರಿಗೆ ತಾತ್ಕಾಲಿಕ ವೀಸಾ ನೀಡುವುದಾಗಿ ಸರಕಾರ ರವಿವಾರ ಘೋಷಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X