Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯ ಮೂಲಕವೇ ಎಲ್ಲಾ ರಫ್ತು...

ಉಡುಪಿ ಜಿಲ್ಲೆಯ ಮೂಲಕವೇ ಎಲ್ಲಾ ರಫ್ತು ನಡೆಸಲು ಆದ್ಯತೆ: ಡಿಸಿ ಕೂರ್ಮಾ ರಾವ್

ವಾರ್ತಾಭಾರತಿವಾರ್ತಾಭಾರತಿ27 Sept 2021 8:22 PM IST
share
ಉಡುಪಿ ಜಿಲ್ಲೆಯ ಮೂಲಕವೇ ಎಲ್ಲಾ ರಫ್ತು ನಡೆಸಲು ಆದ್ಯತೆ: ಡಿಸಿ ಕೂರ್ಮಾ ರಾವ್

ಉಡುಪಿ, ಸೆ.27: ಜಿಲ್ಲೆಯಲ್ಲಿ ತಯಾರಾಗುವ ಎಲ್ಲಾ ವಸ್ತುಗಳನ್ನು ಹಾಗೂ ಉತ್ಪನ್ನಗಳನ್ನು ಜಿಲ್ಲೆಯಿಂದಲೇ ನೇರವಾಗಿ ರಫ್ತು ಮಾಡುವುದಕ್ಕೆ ಆದ್ಯತೆಯನ್ನು ನೀಡಬೇಕು ಹಾಗೂಇದಕ್ಕೆ ಬೇಕಾದ ಎಲ್ಲಾ ಅಗತ್ಯತೆಗಳನ್ನು ಪೂರೈಸಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದ್ದಾರೆ.

ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಮಣಿಪಾಲದ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಸೋಮವಾರ ವಾಣಿಜ್ಯ ಸಪ್ತಾಹದ ಅಂಗವಾಗಿ ನಡೆದ ರಫ್ತುದಾರರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ದೊರೆಯುವ ಮತ್ತು ಉತ್ಪಾದಿಸುವ ಕರಕುಶಲ ವಸ್ತುಗಳು, ಆಹಾರ ಪದಾರ್ಥಗಳು, ಸಮುದ್ರ ಉತ್ಪನ್ನಗಳು ಸೇರಿದಂತೆ ವಿವಿಧ ವೈಶಿಷ್ಠ ಪೂರ್ಣ ವಸ್ತುಗಳನ್ನು ಬ್ರಾಂಡಿಂಗ್ ಮಾಡಿ, ರಫ್ತು ಮಾಡಲು ನೀಲ ನಕಾಶೆ ಸಿದ್ದಪಡಿಸಲಾಗುವುದು ಎಂದು ಅವರು ನುಡಿದರು.

ಜಿಲ್ಲೆಯಲ್ಲಿ ಗೇರುಬೀಜವನ್ನು ಹೆಚ್ಚಿನ ಪ್ರಮಾಣದಲ್ಲಿ ರಫ್ತು ಮಾಡಲಾಗುತ್ತಿದೆ. ಆದರೆ ಇದನ್ನು ಹೊರತು ಪಡಿಸಿ ವಿವಿಧ ಕರಕುಶಲ ಉತ್ಪನ್ನಗಳನ್ನು ತಯಾರಿಸ ಲಾಗುತ್ತಿದ್ದು ಇದರೊಂದಿಗೆ ಸಮುದ್ರ ಉತ್ಪನ್ನಗಳನ್ನು ಕೇರಳಕ್ಕೆ ಬದಲು ಇಲ್ಲಿಂದಲೇ ರಫ್ತು ಮಾಡಲು ಉದ್ದಿಮೆದಾರರು ಪ್ರಯತ್ನಿಸಬೇಕು. ಜಿಲ್ಲೆಯದೇ ಆದ ವಿಶಿಷ್ಟ ಉತ್ಪನ್ನಗಳಿಗೆ ಬ್ರಾಂಡಿಂಗ್ ಮಾಡಿಸಲು ಸಹ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಇಂದಿನ ಕಾರ್ಯಗಾರದಲ್ಲಿ ಮೂಡಿಬರುವ ಅಭಿಪ್ರಾಯಗಳನ್ನು ತಿಳಿದು ಕೊಂಡು, ಇಲ್ಲಿಂದ ವಿವಿಧ ವಸ್ತುಗಳನ್ನು ರಫ್ತು ಮಾಡುವ ನಿಟ್ಟಿನಲ್ಲಿ ಅಗತ್ಯವಾಗಿ ಬೇಕಿರುವ ಅನುಮತಿ ಮತ್ತಿತರ ಅವಶ್ಯಕತೆಗಳ ಕುರಿತಂತೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ನೆರವು ದೊರಕಿಸಲು ಪ್ರಯತ್ನಿಸಲಾಗುವುದು ಎಂದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ‘ಸಿಂಗಲ್ ವಿಂಡೋ’ ವ್ಯವಸ್ಥೆ ಮೂಲಕ ಬಗೆಹರಿ ಸಲಾಗುತ್ತದೆ ಎಂದವರು ಭರವಸೆ ನೀಡಿದರು.

ಕೆನರಾ ಬ್ಯಾಂಕ್‌ನ ಮುಖ್ಯ ಪ್ರಬಂದಕ ರಾಮಾ ನಾಯಕ್ ಮಾತನಾಡಿ, ಜಿಲ್ಲೆಯಲ್ಲಿ ಗೇರುಬೀಜ ಮತ್ತು ಮೀನು ಮಾತ್ರ ಹೆಚ್ಚಿನ ಪ್ರಮಾಣದಲ್ಲಿ ರಫ್ತು ಆಗುತ್ತಿದೆ. ರಫ್ತು ಮಾಡಲು ಇತರ ಸಂಪನ್ಮೂಲಗಳೂ ಸಹ ಜಿಲ್ಲೆಯಲ್ಲಿದ್ದು ಉತ್ತಮ ರಸ್ತೆ, ಜಲ ಮತ್ತು ವಾಯು ಸಾರಿಗೆ ವ್ಯವಸ್ಥೆ ಕೂಡ ಇಲ್ಲಿರುವುದರಿಂದ ಉದ್ದಿಮೆದಾರರು ಇವುಗಳ ಸದುಪಯೋಗ ಪಡೆಯಬೇಕು. ಕೆನರಾ ಬ್ಯಾಂಕ್ ವತಿಯಿಂದ ರಫ್ತು ಉದ್ಯಮಕ್ಕೆ ಬೇಕಾದ ಎಲ್ಲಾ ರೀತಿಯ ನೆರವನ್ನೂ ನೀಡಲಾಗುವುದು ಎಂದರು.

ಕರ್ನಾಟಕ ತಾಂತ್ರಿಕ ಸಲಹಾ ಸೇವೆಗಳ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಉಡುಪಿ ನೋಡೆಲ್ ಅಧಿಕಾರಿ ರಮಾನಂದ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಗೇರುಬೀಜ ಉತ್ಪಾದಕ ಸಂಘದ ಅಧ್ಯಕ್ಷ ಸಂತೋಷ್ ಡಿಸಿಲ್ವಾ, ಉಡುಪಿ ಚೇಂಬರ್ ಆಫ್ ಕಾಮರ್ಸ್‌ನ ಅಧ್ಯಕ್ಷ ಕೃಷ್ಣರಾವ್ ಕೊಡಂಚ, ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಶಾಂತ್ ಬಾಳಿಗ ಉಪಸ್ಥಿತರಿದ್ದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್‌ದಾಸ್ ನಾಯಕ್ ಸ್ವಾಗತಿಸಿದರು. ಲೀಡ್ ಡಿಸ್ಟ್ರಿಕ್ ಮ್ಯಾನೇಜರ್ ಪೀರ್‌ಸಾಬ್ ಎಂ.ಪಿಂಜಾರ ವಂದಿಸಿದರೆ, ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X