Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಪ್ರವಾಸಿಗರ ಆಕರ್ಷಣೀಯ...

ಉಡುಪಿ ಪ್ರವಾಸಿಗರ ಆಕರ್ಷಣೀಯ ಜಿಲ್ಲೆಯಾಗಬೇಕು: ರಘುಪತಿ ಭಟ್

ವಾರ್ತಾಭಾರತಿವಾರ್ತಾಭಾರತಿ27 Sept 2021 8:26 PM IST
share
ಉಡುಪಿ ಪ್ರವಾಸಿಗರ ಆಕರ್ಷಣೀಯ ಜಿಲ್ಲೆಯಾಗಬೇಕು: ರಘುಪತಿ ಭಟ್

ಉಡುಪಿ, ಸೆ.27: ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ವಿಫುಲ ಅವಕಾಶಗಳಿವೆ. ಇವುಗಳನ್ನು ಬಳಿಸಿಕೊಂಡು, ಪ್ರವಾಸೋದ್ಯಮದ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ರೂಪಿಸಿ ಜಿಲ್ಲೆಯನ್ನು ಪ್ರವಾಸಿಗರ ಆಕರ್ಷಣೀಯ ತಾಣವನ್ನಾಗಿ ಮಾಡಬೇಕು ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.

ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಮಲ್ಪೆ ಅಭಿವೃದ್ದಿ ಸಮಿತಿ, ಕರಾವಳಿ ಪ್ರವಾಸೋದ್ಯಮ ಸಂಘಟನೆ ಇವುಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕೋವಿಡ್‌ನಿಂದಾಗಿ ಪ್ರವಾಸೋದ್ಯಮ ಕ್ಷೇತ್ರವೂ ಇಂದು ನಷ್ಠ ಅನುಭವಿಸಿದೆ. ಆದರೆ ಪ್ರಸ್ತುತ ಪ್ರವಾಸಿಗರು ಪ್ರವಾಸಿ ಕ್ಷೇತ್ರಗಳಿಗೆ ಆಗಮಿಸ ತೊಡಗಿದ್ದು, ಉಡುಪಿಯಲ್ಲಿ ಬೀಚ್ ಟೂರಿಸಂ, ಟೆಂಪಲ್ ಟೂರಿಸಂ ಮತ್ತು ಹೆಲ್ತ್ ಟೂರಿಸಂಗೆ ವಿಫುಲವಾದ ಅವಕಾಶಗಳಿವೆ. ಜಿಲ್ಲೆಯಲ್ಲಿನ ಹೊಸ ಪ್ರವಾಸಿ ತಾಣ ಗಳನ್ನು ಅಭಿವೃದ್ದಿಪಡಿಸಲು ಇದು ಸಕಾಲ. ಇಂತಹ ತಾಣಗಳನ್ನು ಮುನ್ನೆಲೆಗೆ ತರಬೇಕಿದೆ ಎಂದರು.

ಜಿಲ್ಲೆಯಲ್ಲಿ ಪ್ರವಾಸೋಧ್ಯಮವನ್ನು ಅಭಿವೃದ್ದಿಪಡಿಸಲು ಟೂರಿಸಂ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಈ ಕಾರ್ಯಪಡೆ ನಿಯಮಿತವಾಗಿ ಸಭೆಗಳನ್ನು ನಡೆಸಿ, ಸಭೆಯ ನಿರ್ಣಯಗಳ ಕುರಿತು ಸರಕಾರಕ್ಕೆ ವರದಿಯನ್ನು ಕಳುಹಿಸ ಬೇಕು ಎಂದು ಶಾಸಕರು ಹೇಳಿದರು.

ಇದೇ ಸಂದರ್ಭದಲ್ಲಿ ಕಾಪು ಬೀಚ್‌ನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಸಿ ಪ್ರವಾಸಿಗರ ಜೀವ ರಕ್ಷಿಸಿದ ರಾಜ್ಯ ಪ್ರಶಸ್ತಿ ವಿಜೇತ ಗೃಹರಕ್ಷಕ ದಳದ ಸಿಬ್ಬಂದಿ ಲಕ್ಷ್ಮೀನಾರಾಯಣ ರಾವ್ ಅರನ್ನು ಶಾಸಕರು ಅಭಿನಂದಿಸಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿದ್ದು, ವೈಧ್ಯತೆಯಿಂದ ಕೂಡಿರುವ ಹಲವು ತಾಣಗಳಿವೆ. ಇವುಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ದಿಗೊಳಿಸಲು ಪ್ರಯತ್ನಿಸಲಾಗುವುದು. ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಸ್ಥಳೀಯ ಉತ್ಪನ್ನಗಳ ಪ್ರದರ್ಶನ ಏರ್ಪಡಿ ಸಬೇಕು. ಹೋಮ್‌ಸ್ಟೇ ಮೂಲಕ ಹೆಚ್ಚಿನ ಆದಾಯ ಗಳಿಸಲು ಸಾಧ್ಯವಿದ್ದು, ಇದಕ್ಕೆ ಬೇಕಾದ ಎನ್‌ಓಸಿಯ ಷರತ್ತುಗಳನ್ನು ಸರಳೀಕರಣಗೊಳಿಸಲಾಗುವುದು. ಆತಿಥ್ಯ ವ್ಯವಸ್ಥೆಗೆ ಸಂಬಂದಿಸಿದಂತೆ ಉಡುಪಿ ಪ್ರಸಿದ್ದಿ ಹೊಂದಿದ್ದು, ಈ ಕ್ಷೇತ್ರದ ಪರಿಣಿತರ ಕಾರ್ಯಾಗಾರ ಏರ್ಪಡಿಸಲಾಗುವುದು ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಮಾತನಾಡಿ, ಕೇರಳ ಮತ್ತು ಗೋವಾ ಮಧ್ಯೆ ಇರುವ ಕರ್ನಾಟಕದ ಕರಾವಳಿ ಯಲ್ಲಿ 100ಕ್ಕೂ ಹೆಚ್ಚು ಪ್ರವಾಸಿ ತಾಣಗಳಿವೆ. ಇಲ್ಲಿನ ಪ್ರವಾಸಿ ತಾಣ ಗಳ ಜೊತೆ ಇಲ್ಲಿನ ಪಾರಂಪರಿಕತೆಯನ್ನೂ ಪರಿಚಯಿಸುವ ಅಗತ್ಯವಿದೆ. ಇಲ್ಲಿನ ಕರಕುಶಲ ವಸ್ತುಗಳು ಮತ್ತು ಸಂಸ್ಕೃತಿ ಕುರಿತು ಮಾಹಿತಿ ದೊರೆಯಬೇಕು. ಪ್ರಮುಖವಾಗಿ ಎಲ್ಲಡೆ ಸ್ವಚ್ಛತೆ ಕಾಪಾಡಿಕೊಳ್ಳಬೇಕಿದೆ. ಜಿಪಂ ವತಿಯಿಂದ ಈಗಾಗಲೇ ಕಸ ಹಾಕುವ ಜಾಗವನ್ನು ಗುರುತಿಸಿ ಅಲ್ಲಿ ಸ್ವಚ್ಛತೆ ಮೂಡಿಸ ಲಾಗುತ್ತಿದೆ. ಜಿಲ್ಲೆಯನ್ನು ಬ್ಲಾಕ್‌ಸ್ಪಾಟ್ ಮುಕ್ತ ಮಾಡಲಾಗುತ್ತಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಮತ್ತು ಕೊಡುಗೆ ಅತ್ಯಗತ್ಯ ಎಂದರು.

ಕಾರ್ಯಕ್ರಮದಲ್ಲಿ 100ಕ್ಕೂ ಅಧಿಕ ದೇಶಗಳನ್ನು ಸಂದರ್ಶಿಸಿ, ಅಲ್ಲಿನ ಪ್ರವಾಸಿ ತಾಣಗಳು ಮತ್ತು ಅವುಗಳ ಅಭಿವೃದ್ಧಿ ಕುರಿತು ಮಣಿಪಾಲ ಕೆಎಂಸಿಯ ಮೂಳೆತಜ್ಞ ಡಾ.ಕಿರಣ್ ಆಚಾರ್ಯ ಅವರು ಪ್ರವಾಸ ಕಥನ ಉಪನ್ಯಾಸ ನೀಡಿದರು. ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಪೌರಾಯುಕ್ತ ಉದಯ್ ಶೆಟ್ಟಿ, ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕ್ಲಿಫರ್ಡ್ ಲೋಬೋ ಸ್ವಾಗತಿಸಿದರೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X