ಬೆಂಗಳೂರು: ಐವರು ಯೋಧರ ಕುಟುಂಬಕ್ಕೆ ಬಿಡಿಎನಿಂದ ಉಚಿತ ನಿವೇಶನ ಹಂಚಿಕೆ
ಬೆಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಶಿಫಾರಸ್ಸಿನಂತೆ ಗಡಿ ಕಾಯುವ ಯೋಧ ವೀರಮರಣ ಹೊಂದಿದಲ್ಲಿ ಅಥವಾ ತೀವ್ರ ತೆರವಾಗಿ ಗಾಯಗೊಂಡಲ್ಲಿ ಆತನ ಕುಟುಂಬಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಉಚಿತ ನಿವೇಶನ ನೀಡಲಾಗುವುದು.
ಈ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ 5 ವೀರಯೋಧ ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡುವುದಾಗಿ ಸರಕಾರ ಘೋಷಿಸಿತ್ತು. ಇಂದು ಯೋಧ ಲಾನ್ಸ್ ನಾಯಕ್ ನಾಗೇಂದ್ರ ಕುಮಾರ್ ಕೆ.ಎಮ್. ಅವರ ತಾಯಿ ಸರೋಜಮ್ಮ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಹಕ್ಕು ಪತ್ರ ವಿತರಿಸಿದರು.
ಈ ಹಿಂದೆ ಇಬ್ಬರು ವೀರ ಯೋದರ ಕುಟುಂಬಗಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಿವೇಶನ ಹಂಚಿಕೆ ಮಾಡಿದ್ದರು. ಇನ್ನುಳಿದ ಎರಡು ಕುಟುಂಬಗಳಿಗೆ ನೋಂದಾಯಿತ ಅಂಚೆಯ ಮೂಲಕ ಹಕ್ಕುಪತ್ರಗಳನ್ನು ತಲುಪಿಸಲಾಗುವುದು ಎಂದು ಆಯುಕ್ತ ರಾಜೇಶ್ ಗೌಡ ಅವರು ತಿಳಿಸಿದರು.
Next Story





