Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಸ್ ಚಾಲಕನಿಗೆ ನಿಗಮದ ಡಿಸಿ ಅವಾಚ್ಯವಾಗಿ...

ಬಸ್ ಚಾಲಕನಿಗೆ ನಿಗಮದ ಡಿಸಿ ಅವಾಚ್ಯವಾಗಿ ನಿಂದಿಸಿದ್ದೆನ್ನಲಾದ ಆಡಿಯೋ ವೈರಲ್: ತಿರುಚಿದ ವೀಡಿಯೊ ಎಂದ ಡಿಸಿ

ಮಂಗಳೂರು: ಕೆಎಸ್ಸಾರ್ಟಿಸಿ ಚಾಲಕ ಆತ್ಮಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ29 Sept 2021 2:02 PM IST
share
ಬಸ್ ಚಾಲಕನಿಗೆ ನಿಗಮದ ಡಿಸಿ ಅವಾಚ್ಯವಾಗಿ ನಿಂದಿಸಿದ್ದೆನ್ನಲಾದ ಆಡಿಯೋ ವೈರಲ್: ತಿರುಚಿದ ವೀಡಿಯೊ ಎಂದ ಡಿಸಿ

ಮಂಗಳೂರು, ಸೆ.29: ದುರ್ನಡತೆ ತೋರಿದ ಆರೋಪದಲ್ಲಿ ಅಮಾನತುಗೊಂಡಿದ್ದ ಕೆಎಸ್ಸಾರ್ಟಿಸಿ ಚಾಲಕ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣ ಅಧಿಕಾರಿ (ಡಿಸಿ)ಯೊಂದಿಗೆ ನಡೆಸಿದ್ದು ಎನ್ನಲಾದ ಸಂಭಾಷಣೆಯ ಆಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕೆಎಸ್ಸಾರ್ಟಿಸಿ ಚಾಲಕ ಮತ್ತು ನಿರ್ವಾಹಕರಾಗಿದ್ದ ಬಾಗಲಕೋಟೆಯ ಹುನಗುಂದ ಮೂಲದ ಚಾಲಕ ಸಂಗಪ್ಪ (49) ನಗರದ ಕುಂಟಿಕಾನದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಅಮಾನತುಗೊಂಡಿದ್ದ ಅವರು ಕೆಲಸಕ್ಕೆ ಮರಳಲು ವಾರ ಬಾಕಿ ಇರುವಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದರು.

ಅಣ್ಣ ಸಂಗಪ್ಪರಿಗೆ ವಾರದ ಹಿಂದೆ ಕೆಲಸಕ್ಕೆ ಹಾಜರಾಗುವಂತೆ ಅಧಿಕಾರಿಗಳು ಸೂಚಿಸಿದ್ದರು. ಅದರಂತೆ ಊರಲ್ಲಿದ್ದ ಅಣ್ಣ ಮಂಗಳೂರಿಗೆ ಆಗಮಿಸಿದ್ದರು. ಆದರೆ ಕೆಲಸ ನೀಡದೆ ಸತಾಯಿಸುತ್ತಿದ್ದರು. ಇದರಿಂದ ಬೇಸತ್ತು ರೂಮಲ್ಲಿದ್ದ ಇತರರ ಕಣ್ತಪ್ಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಎಸ್ಸಾರ್ಟಿಸಿ ಮೇಲಧಿಕಾರಿಗಳ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಸಂಗಪ್ಪರ ಸಹೋದರ ಮಹೇಶ್ ಆರೋಪಿಸಿದ್ದರು. ಈ ನಡುವೆ ಸಂಗಪ್ಪ ಅವರು ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣ ಅಧಿಕಾರಿ ಜೊತೆ ಮಾತನಾಡಿದ್ದು ಎನ್ನಲಾದ ಆಡಿಯೋ ಕ್ಲಿಪ್ಪಿಂಗ್ ವೈರಲ್ ಆಗಿದೆ.

ಏನಿದೆ ಆಡಿಯೋದಲ್ಲಿ?:

ಸಂಗಪ್ಪ: ನಮಸ್ತೆ ಸರ್

ಡಿಸಿ: ಯಾರು?

ಸಂಗಪ್ಪ: ನಾನು ಸಂಗಪ್ಪ ಸರ್

ಡಿಸಿ: ಯಾವ ಸಂಗಪ್ಪ?

ಸಂಗಪ್ಪ: ಸರ್, ಕಾಲ್ ಬೀಳ್ತೀನಿ ಸರ್

ಡಿಸಿ: ಏಯ್! ಯಾವನೋ ಸಂಗಪ್ಪ ಅಂದರೆ

ಸಂಗಪ್ಪ: ಮೊನ್ನೆ ಕಿರಿಕಿರಿ ಆಗಿತ್ತಲ್ಲ

ಡಿಸಿ: ಬಂದು ಅಲ್ಲಿ ಚೇಂಬರ್ ಒಳಗೆ ಕಾಯಕೋತಾ ಬಿದ್ದೀರಬೇಕು. ಫೋನಲ್ಲಿ ಎಲ್ಲ ಮಾತಾಡೊಕೆ ಬರಬೇಡ

ಈ ವೇಳೆ ಡಿಸಿ ಎನ್ನಲಾದ ವ್ಯಕ್ತಿ ಚಾಲಕ ಎನ್ನಲಾದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇತ್ತ ಕರೆ ಮಾಡುತ್ತಿದ್ದ ವ್ಯಕ್ತಿ ಪರಿಪರಿಯಾಗಿ ಬೇಡಿಕೊಂಡರೂ ಡಿಸಿ ಎನ್ನಲಾದ ವ್ಯಕ್ತಿ ನಿಂದನೆ ಮುಂದುವರಿಸಿದ್ದ ಆಡಿಯೊ ಸದ್ಯ ಭಾರೀ ಸುದ್ದಿಯಾಗಿದೆ.


ವೈರಲ್ ಆಗಿರುವ ಆಡಿಯೊ ಸತ್ಯಕ್ಕೆ ದೂರವಾದುದು: ಮಂಗಳೂರು ವಿಭಾಗೀಯ ನಿಯಂತ್ರಣ ಅಧಿಕಾರಿ

ಈ ಬಗ್ಗೆ 'ವಾರ್ತಾಭಾರತಿ'ಗೆ ಪ್ರತಿಕ್ರಿಯಿಸಿರುವ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣ ಅಧಿಕಾರಿ ಅರುಣ್, "ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದಲ್ಲಿ 2,500ಕ್ಕಿಂತ ಹೆಚ್ಚು ಸಿಬ್ಬಂದಿ ಇದ್ದಾರೆ. ಸಮಸ್ಯೆ ಹೇಳಿಕೊಂಡು ಸಾಕಷ್ಟು ಕರೆ ಬರುತ್ತವೆ. ಕೆಲವರು ಕುಡಿದು ಪದೇಪದೇ ತೊಂದರೆ ನೀಡುತ್ತಿರುತ್ತಾರೆ. ಯಾವಾಗಲೋ ಮಾತನಾಡಿದ ಆಡಿಯೊವನ್ನು ಈಗ ವೈರಲ್ ಮಾಡಲಾಗಿದೆ. ಆಡಿಯೊ ತಿರುಚಲಾಗಿದೆ. ವೈರಲ್ ಆಗಿರುವ ಆಡಿಯೊ ಸತ್ಯಕ್ಕೆ ದೂರವಾದುದು" ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X