Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಖಾಸಗಿ ಎಂಜಿನಿಯರಿಂಗ್ ಶುಲ್ಕ ಹೆಚ್ಚಳ...

ಖಾಸಗಿ ಎಂಜಿನಿಯರಿಂಗ್ ಶುಲ್ಕ ಹೆಚ್ಚಳ ಇಲ್ಲ: ಸಚಿವ ಡಾ.ಅಶ್ವತ್ಥನಾರಾಯಣ

ಇನ್ನು ಮುಂದೆ ಎಲ್ಲ ಶುಲ್ಕ ಕೆಇಎಯಲ್ಲೇ ಪಾವತಿ

ವಾರ್ತಾಭಾರತಿವಾರ್ತಾಭಾರತಿ29 Sept 2021 3:32 PM IST
share
ಖಾಸಗಿ ಎಂಜಿನಿಯರಿಂಗ್ ಶುಲ್ಕ ಹೆಚ್ಚಳ ಇಲ್ಲ: ಸಚಿವ ಡಾ.ಅಶ್ವತ್ಥನಾರಾಯಣ

ಬೆಂಗಳೂರು, ಸೆ.29: ಕೋವಿಡ್ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜುಗಳ ಎಂಜಿನಿಯರಿಂಗ್ ಕೋರ್ಸಿನ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡದೇ ಹಿಂದಿನ ದರವನ್ನೇ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಕರ್ನಾಟಕ ಅನುದಾನ ರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸಂಘ (ಕೆಯುಪಿಇಸಿಎ) ಮತ್ತು ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ವೃತ್ತಿ ಪರ ಕಾಲೇಜುಗಳ ಸಂಘದ (ಕೆಆರ್ ಎಲ್ಎಂಪಿಸಿಎ) ಪ್ರತಿನಿಧಿಗಳ ಜತೆ ಬುಧವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.

ಹೀಗಾಗಿ, ಈ ಮುಂಚಿನಂತೆಯೇ ಸರ್ಕಾರಿ ಕೋಟಾದಡಿ ಪ್ರವೇಶಾತಿ ಪಡೆಯುವವರಿಗೆ ರೂ 65,340, ರೂ 58,806 ಈ ಎರಡು ಸ್ಲ್ಯಾಬ್ ಗಳಲ್ಲಿ ಶುಲ್ಕಗಳು ಮುಂದುವರಿಯಲಿವೆ ಎಂದು ಅವರು ಸ್ಪಷ್ಟಪಡಿಸಿದರು.

ಇದೇ ವೇಳೆ, ಖಾಸಗಿ ಕಾಲೇಜುಗಳು ‘ಇತರ ಶುಲ್ಕ’ನೆಪದಲ್ಲಿ ಮಿತಿಮೀರಿ ಪಡೆಯುವುದಕ್ಕೂ ಕಡಿವಾಣ ಹಾಕಿ, ಗರಿಷ್ಠ ಮಿತಿಯನ್ನು 20 ಸಾವಿರ ರೂಪಾಯಿಕ್ಕೆ ನಿಗದಿಪಡಿಸಲಾಗಿದೆ. ಹಲವು ಕಾಲೇಜುಗಳು ಇತರ ಶುಲ್ಕದ ನೆಪದಲ್ಲಿ 70 ಸಾವಿರ ರೂ.ವರೆಗೂ ಶುಲ್ಕ ವಸೂಲಿ ಮಾಡುತ್ತಿವೆ ಎನ್ನುವ ಆರೋಪಗಳ ಹಿನ್ನಲೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಇದಕ್ಕೆ ಕಾಲೇಜು ಸಂಘದ ಪ್ರತಿನಿಧಿಗಳು ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಚಿವರು ವಿವರಿಸಿದರು.

ಇನ್ನು ಮುಂದೆ ಪ್ರವೇಶ ಶುಲ್ಕ, ಇತರೆ ಶುಲ್ಕ, ಕೌಶಲ ಶುಲ್ಕ ಇದ್ಯಾವುದನ್ನೂ ನೇರವಾಗಿ ಕಾಲೇಜಿನಲ್ಲಿ ಪಾವತಿಸುವಂತಿಲ್ಲ. ಇವೆಲ್ಲವನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದಲ್ಲಿಯೇ ಪಾವತಿಸಬೇಕು.

ಟ್ಯೂಷನ್ ಶುಲ್ಕ‌ ಸೇರಿದಂತೆ ಇತರೆ ಶುಲ್ಕವನ್ನು ಕಟ್ಟಿಸಿಕೊಳ್ಳುವ ಮುನ್ನ ಪ್ರತಿಯೊಂದು ಕಾಲೇಜೂ ಯಾವ್ಯಾವ ಉದ್ದೇಶಕ್ಕೆ ಇದು ಎಂಬುದನ್ನು ಕೆಎಇ. ತಾಂತ್ರಿಕ ಶಿಕ್ಷಣ ಇಲಾಖೆ, ವಿಟಿಯು ಗಳಿಗೆ ಮಾಹಿತಿ ಕೊಡಬೇಕು. ಇದನ್ನು ಕಾಲೇಜುಗಳಲ್ಲಿ ಪಾವತಿಸಲು ಅವಕಾಶ ಇರುವುದಿಲ್ಲ. ಕೆಇಎ ಗೇ ಪಾವತಿಸಬೇಕು. ಜೊತೆಗೆ ವೆಬ್ ಸೈಟ್ ನಲ್ಲಿ ಪ್ರಕಟಿಸಬೇಕು ಎಂದು ಅಶ್ವತ್ಥ ನಾರಾಯಣ ಹೇಳಿದರು.

ವಿಶ್ವವಿದ್ಯಾನಿಲಯ ಶುಲ್ಕವನ್ನು ಈ ಮುಂಚೆ ಆಯಾ ಕಾಲೇಜಿನಲ್ಲಿ ಪಾವತಿಸಬಹುದಿತ್ತು. ಆದರೆ, ಇನ್ನು ಮುಂದೆ ಅದನ್ನು ಕೂಡ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲೇ (ಕೆಇಎ) ಪಾವತಿಸಬೇಕು. ಈ ಮುಂಚೆ ಈ ಶುಲ್ಕ ಕಟ್ಟಿಸಿಕೊಳ್ಳುವಲ್ಲಿ ಇದ್ದ ಗೊಂದಲವನ್ನು ನಿವಾರಿಸುವುದಕ್ಕಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಇನ್ನು ಕೆಲವು ಕಾಲೇಜುಗಳು ವಿದ್ಯಾರ್ಥಿಗಳನ್ನು ಉದ್ಯಮಗಳಿಗೆ ಸಜ್ಜುಗೊಳಿಸಿ ಅವರ ನೇಮಕಾತಿ ಸಾಧ್ಯತೆ ಹೆಚ್ಚಿಸುವುದಕ್ಕಾಗಿ ನೀಡುತ್ತಿದ್ದ ಹೆಚ್ಚುವರಿ ತರಬೇತಿಗಾಗಿ ‘ಕೌಶಲ ಶುಲ್ಕ’ (ಸ್ಕಿಲ್ ಫೀಸ್) ಪಡೆಯುತ್ತಿದ್ದವು. ಇದು ಐಚ್ಛಿಕವಾಗಿದ್ದು, ಒಂದೊಂದು ಕಾಲೇಜಿನಲ್ಲಿ ಒಂದೊಂದು ರೀತಿ ಶುಲ್ಕ ಇರುತ್ತಿತ್ತು. ಈಗ ಇದಕ್ಕೆ ಕೂಡ ಗರಿಷ್ಠ ರೂ 20,000 ಮಿತಿ ನಿಗದಿಗೊಳಿಸಲಾಗಿದೆ. ಇದರಲ್ಲಿ 10,000 ರೂ, 15,000 ರೂ ಹಾಗೂ 20,000 ರೂ, ಹೀಗೆ ಮೂರು ಹಂತಗಳಿರುತ್ತವೆ. ವಿ.ಟಿ.ಯು. ತಂಡವು ಕಾಲೇಜುಗಳ ಪರಿಶೀಲನೆ ನಡೆಸಿ ಯಾವ ಕಾಲೇಜಿನಲ್ಲಿ ಎಷ್ಟು ಎಂಬುದನ್ನು ನಿಗದಿಗೊಳಿಸಲಿದೆ. ಅದರಂತೆ ಈ ಶುಲ್ಕವನ್ನು ಕೆಇಎ ಗೆ ಪಾವತಿಸಬೇಕಾಗುತ್ತದೆ ಎಂದು ವಿವರಿಸಿದರು.

ಎಂಜಿನಿಯರಿಂಗ್ ಕೋರ್ಸ್ ಶುಲ್ಕವನ್ನು 30% ಹೆಚ್ಚಿಸಲು ಖಾಸಗಿ ಕಾಲೇಜುಗಳು ಸರ್ಕಾರಕ್ಕೆ ಬೇಡಿಕೆ ಮುಂದಿಟ್ಟಿದ್ದವು. ವಿಟಿಯು ಕುಲಪತಿ ಕರಿಸಿದ್ದಪ್ಪ ನೇತೃತ್ವದ ಸಮಿತಿಯು ಶೇ.15ರಿಂದ ಶೇ 20ರವರೆಗೆ ಹೆಚ್ಚಳ ಮಾಡಬಹುದೆಂದು ವರದಿಯಲ್ಲಿ ಅಭಿಪ್ರಾಯಪಟ್ಟಿತ್ತು. ಆದರೆ, ಕೋವಿಡ್ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ವರ್ಷ ಶುಲ್ಕ ಹೆಚ್ಚಳ ಮಾಡದಿರಲು ಖಾಸಗಿ ಕಾಲೇಜುಗಳ ಒಕ್ಕೂಟಗಳ ಮನವೊಲಿಸಲಾಯಿತು ಎಂದರು.

ಕುಪೇಕಾ ದ ತಾಂತ್ರಿಕ ಸಮಿತಿಯ ಅಧ್ಯಕ್ಷ ಮಂಜುನಾಥ ಭಂಡಾರಿ, ಸದಸ್ಯರಾದ ಚಂದ್ರಶೇಖರ್ ರಾಜು, ರಮೇಶ್ ರಾಜು, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಗಣೇಶ್ ಕಾರ್ಣಿಕ್ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X