Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 2014ರ ಕೋಮು ಗಲಭೆ ಪ್ರಕರಣ; ಬಿಜೆಪಿ ಶಾಸಕ...

2014ರ ಕೋಮು ಗಲಭೆ ಪ್ರಕರಣ; ಬಿಜೆಪಿ ಶಾಸಕ ಯತ್ನಾಳ ಸೇರಿ 134 ಆರೋಪಿಗಳ ಖುಲಾಸೆ

ವಾರ್ತಾಭಾರತಿವಾರ್ತಾಭಾರತಿ29 Sept 2021 6:19 PM IST
share
2014ರ ಕೋಮು ಗಲಭೆ ಪ್ರಕರಣ; ಬಿಜೆಪಿ ಶಾಸಕ ಯತ್ನಾಳ ಸೇರಿ 134 ಆರೋಪಿಗಳ ಖುಲಾಸೆ

ಬೆಂಗಳೂರು, ಸೆ.29: 2014 ಮೇ 26ರಂದು ವಿಜಯಪುರ ಪಟ್ಟಣದಲ್ಲಿ ನಡೆದಿದ್ದ ಕೋಮು ಗಲಭೆ ಪ್ರಕರಣದಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿ 134 ಆರೋಪಿಗಳನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ.

ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ದಿನದ ನಿಮಿತ್ತ ವಿಜಯೋತ್ಸವದ ವೇಳೆ ನಡೆದ ಗಲಾಟೆ ಕೋಮು ಗಲಭೆಯಾಗಿ ತಿರುಗಿತ್ತು. ಗಲಭೆ ವೇಳೆ ಎರಡು ಕೋಮುಗಳ ಮಧ್ಯೆ ಕಲ್ಲು ತೂರಾಟ ನಡೆದು, ಬೈಕ್ ಹಾಗೂ ಇತರೆ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಘಟನೆ ಕುರಿತು ನಗರದ ಗಾಂಧಿಚೌಕ್ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿದ್ದರು. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸೇರಿದಂತೆ ಎರಡು ಕೋಮಿನ 134 ಜನರ ಮೇಲೆ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ಸುದೀರ್ಘ ಏಳು ವರ್ಷಗಳ ಕಾಲ ವಿಚಾರಣೆ ನಡೆಸಿದ್ದು, ಬುಧವಾರ ತೀರ್ಪು ಹೊರಬಿದ್ದಿದೆ. ಕೋವಿಡ್ ಕಾರಣದಿಂದಾಗಿ ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಲಾಯಿತು.

ವಿಜಯಪುರದ ಎಸ್. ಪಿ. ಕಚೇರಿ ಹಿಂಭಾಗದಲ್ಲಿರುವ ಚಿಂತನ್ ಹಾಲ್ ವಿಶೇಷ ನ್ಯಾಯಾಲಯವಾಗಿ ಪರಿವರ್ತನೆ ಮಾಡಲಾಗಿತ್ತು. ಯತ್ನಾಳ ಸೇರಿ ಇತರೆ ಎಲ್ಲ ಆರೋಪಿಗಳು ಹಾಜರಾಗಿದ್ದರು. ನ್ಯಾಯಾಲಯದ ತೀರ್ಪು ಸ್ವಾಗತ ಮಾಡಿರೋ ಯತ್ನಾಳ ಸೇರಿದಂತೆ ಇತರರು, ತೀರ್ಪು ತೃಪ್ತಿ ತಂದಿದೆ. ಭವಿಷ್ಯದಲ್ಲಿ ಎಲ್ಲರೂ ಸಹೋದರತೆಯಿಂದ ಇರುತ್ತೇವೆ ಎಂದರು.

ಕೆಲ ಕಿಡಿಗೇಡಿಗಳಿಂದ ನಡೆದ ಗಲಾಟೆಯಲ್ಲಿ ಅಮಾಯಕರು ಕಷ್ಟ ಅನುಭವಿಸುವಂತಾಗಿತ್ತು. ನ್ಯಾಯಾಲಯದ ತೀರ್ಪಿನಿಂದ ಸಂತಸವಾಗಿದೆ ಎಂದು ಉಭಯತರು ಹೇಳಿದರು. ಅಲ್ಲದೇ ಎರಡೂ ಸಮುದಾಯದವರು ಪರಸ್ಪರ ಸಂತಸ ಹಂಚಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X