Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನೈತಿಕ ಬಿಜೆಪಿ ಸರಕಾರದಲ್ಲಿ ಕಾರಜೋಳ...

ಅನೈತಿಕ ಬಿಜೆಪಿ ಸರಕಾರದಲ್ಲಿ ಕಾರಜೋಳ ಪಾಪದ ಸಚಿವ: ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ29 Sept 2021 9:12 PM IST
share
ಅನೈತಿಕ ಬಿಜೆಪಿ ಸರಕಾರದಲ್ಲಿ ಕಾರಜೋಳ ಪಾಪದ ಸಚಿವ: ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್

ಬೆಂಗಳೂರು, ಸೆ. 29: ‘ಕೃಷ್ಣಾ ಮೇಲ್ದಂಡೆ ಯೋಜನೆ ಕಾಂಗ್ರೆಸ್ ಪಾಪದ ಕೂಸು ಎಂಬ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿಕೆ ಸರಿಯಲ್ಲ. ಅನೈತಿಕ ಬಿಜೆಪಿ ಸರಕಾರದಲ್ಲಿ ಕಾರಜೋಳ ಪಾಪದ ಸಚಿವರಾಗಿದ್ದಾರೆ' ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಂ.ಬಿ.ಪಾಟೀಲ್ ಇಂದಿಲ್ಲಿ ತಿರುಗೇಟು ನೀಡಿದ್ದಾರೆ.

ಬುಧವಾರ ವಿಜಯಪುರ ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೋವಿಂದ ಕಾರಜೋಳ ಅವರು ಬಾಯಿ ಚಪಲಕ್ಕೆ ಅಸಂಬದ್ಧ ಹೇಳಿಕೆ ನೀಡುವುದು ಅವರ ಹಿರಿಯತನಕ್ಕೆ ಶೋಭೆ ತರುವುದಿಲ್ಲ. ಅನುಭವಿ ರಾಜಕಾರಣಿ ಹಾಗೂ ಜವಾಬ್ದಾರಿಯುತ ಸಚಿವರಾಗಿದ್ದುಕೊಂಡು ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಇಂತಹ ಹೇಳಿಕೆ ನೀಡುವುದು ಖಂಡನೀಯ' ಎಂದು ಟೀಕಿಸಿದರು.

‘ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಮಾತನಾಡುವಾಗ ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾಗಾಂಧಿ ಅವರ ಹೆಸರನ್ನು ಕಾರಜೋಳ ಪ್ರಸ್ತಾಪಿಸಿದ್ದಾರೆ. 1964ರಲ್ಲಿ ಶಾಸ್ತ್ರಿ ಅವರು ಆಲಮಟ್ಟಿಗೆ ಅಡಿಗಲ್ಲು ಹಾಕದಿದ್ದರೆ ನಾನಾಗಲಿ, ನೀವಾಗಲಿ ಇಂದು ನೀರಾವರಿ ಸಚಿವರಾಗುವ ಪ್ರಶ್ನೆಯೇ ಬರುತ್ತಿರಲಿಲ್ಲ. ಆಲಮಟ್ಟಿ, ತುಂಗಭದ್ರಾ, ಹಿಡಕಲ್ ಸೇರಿದಂತೆ ಈ ದೇಶದ ಎಲ್ಲ ಜಲಾಶಯಗಳು ಕಾಂಗ್ರೆಸ್ ಕೊಡುಗೆ' ಎಂದು ವಾಗ್ದಾಳಿ ನಡೆಸಿದರು.

'ನೀರಾವರಿ ಸೌಲಭ್ಯಕ್ಕಾಗಿ ಅಖಂಡ ವಿಜಯಪುರ ಜಿಲ್ಲೆಯ ಜನ ಮಾಜಿ ಪ್ರಧಾನಿ ಇಂದಿರಾಗಾಂಧಿ, ಮಾಜಿ ಸಿಎಂ ನಿಜಲಿಂಗಪ್ಪ ಅವರನ್ನು ಬಂಗಾರದಲ್ಲಿ ತೂಗಿದ್ದರು ಎಂದು ಕಾರಜೋಳ ಹೇಳಿದ್ದಾರೆ. ಆದರೆ, ಬಂಗಾರದಲ್ಲಿ ತೂಗಿದ್ದು ನೀರಾವರಿಗಾಗಿ ಅಲ್ಲ, ಯುದ್ಧದ ಸಲುವಾಗಿ ಧನಸಹಾಯ ಮಾಡಿದ್ದರು ಎಂಬ ಇತಿಹಾಸ ಗೊತ್ತಿದ್ದರೂ ತಿರುಚಿ ಹೇಳಿಕೆ ನೀಡುವುದು ತಮ್ಮ ಹಿರಿತನಕ್ಕೆ ಶೋಭೆ ತರುವುದಿಲ್ಲ' ಎಂದು ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.

‘ಮುಧೋಳ ತಾಲೂಕಿನ ಮಾಚಕನೂರು, ಅಳಗುಂಡಿಯಲ್ಲಿ ಆಲಮಟ್ಟಿ ಹಿನ್ನೀರಿನಿಂದ ಮನೆಗಳ ಒಳಗೆ ಹಾವು, ಚೇಳು, ಕಪ್ಪೆ ಬರುತ್ತಿವೆ. ತಕ್ಷಣ ಸ್ಥಳಾಂತರ ಮಾಡಬೇಕೆಂದು ಈ ಹಿಂದೆ ಕಾರಜೋಳ ಆಗ್ರಹಿಸಿದ್ದರು. ಇದೀಗ ಈ ಗ್ರಾಮಗಳ ಮನೆಗಳಿಗೆ ಹಾವು, ಹೇಳು, ಕಪ್ಪೆ ಹೋಗುತ್ತಿಲ್ಲವೇ? ಕನಿಷ್ಠ ಕಾಳಜಿ ಇದ್ದರೆ ಹಾವು, ಚೇಳು ಇರುವ ನಿಮ್ಮ ಕ್ಷೇತ್ರದ ಗ್ರಾಮಗಳನ್ನಾದರೂ ಸ್ಥಳಾಂತರ ಮಾಡಿ ತೋರಿಸಿ' ಎಂದು ಪಾಟೀಲ್ ವ್ಯಂಗ್ಯವಾಡಿದರು.  

‘ನಾನು ಜಲಸಂಪನ್ಮೂಲ ಇಲಾಖೆ ಸಚಿವನಾಗಿದ್ದ ಅವಧಿಯಲ್ಲಿ ಏನು ಮಾಡಬೇಕು ಎಂಬುದನ್ನು ಮಾಡಿ ತೋರಿಸಿದ್ದೇನೆ. ಈಗ ನಿಮಗೆ ಅವಕಾಶ ಸಿಕ್ಕಿದೆ. ಹಿರಿಯರಾಗಿರುವುದರಿಂದ ಮುಂದೆ ಅವಕಾಶ ಸಿಗುವ ಸಾಧ್ಯತೆ ಇಲ್ಲ. ಹೀಗಾಗಿ ಸಿಕ್ಕಿರುವ ಅವಕಾಶವನ್ನು ಆ ಭಾಗದ ಜನರ ಶ್ರೇಯೋಭಿವೃದ್ಧಿಗಾಗಿ ಸದ್ಬಳಕೆ ಮಾಡಿಕೊಳ್ಳಿ'

-ಎಂ.ಬಿ.ಪಾಟೀಲ್, ಮಾಜಿ ಜಲಸಂಪನ್ಮೂಲ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X