Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೋಮಾಳದ ಜಾಗ ಗೋವುಗಳ ಮೇವಿಗೆ ಮಾತ್ರ...

ಗೋಮಾಳದ ಜಾಗ ಗೋವುಗಳ ಮೇವಿಗೆ ಮಾತ್ರ ಮೀಸಲಿರಲಿ : ಪೇಜಾವರ ಶ್ರೀ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ29 Sept 2021 9:38 PM IST
share

ಉಡುಪಿ, ಸೆ.29: ಬಿಟ್ರಿಷ್ ಕಾಲದಿಂದಲೂ ಗ್ರಾಮೀಣ ಪ್ರದೇಶವೂ ಸೇರಿದಂತೆ ಎಲ್ಲಾ ಕಡೆಯಲ್ಲಿರುವ ಗೋಮಾಳದ ಭೂಮಿಯನ್ನು ಜಾನು ವಾರುಗಳ ಮೇವು, ಪಾಲನೆಗೆ ಮೀಸಲಿಡಬೇಕು. ಇದಕ್ಕಾಗಿ ಪ್ರತಿ ಗ್ರಾಮಗಳಲ್ಲಿರುವ ಗೋಮಾಳ ಜಾಗವನ್ನು ಜಿಲ್ಲಾಡಳಿತ ಗುರುತಿಸಿ ಕಾದಿರಿಸಬೇಕು ಎಂದು ಪೇಜಾವರ ಮಠಾಧೀಶರೂ, ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರಾಗಿರುವ ಶ್ರೀವಿಶ್ವಪ್ರಸನ್ನ ತೀರ್ಥರು ತಿಳಿಸಿದ್ದಾರೆ.

ಉಡುಪಿ ರಥಬೀದಿಯಲ್ಲಿರುವ ಪೇಜಾವರ ಮಠದಲ್ಲಿ ಬುಧವಾರ ಕರೆದ ಮಾತನಾಡಿದ ಅವರು, ಗೋಸಂತತಿಯನ್ನು ಉಳಿಸುವ ಮತ್ತು ಬೆಳೆ ಸುವ ಕಾರ್ಯ ಉಡುಪಿಯಿಂದಲೇ ಆರಂಭವಾಗಬೇಕೆಂಬ ಆಶಯದೊಂದಿಗೆ ನಾವೀ ಒತ್ತಾಯ ಮಾಡುತಿದ್ದೇವೆ ಎಂದರು.

ಜಿಲ್ಲೆಯ 233 ಗ್ರಾಮಗಳಲ್ಲಿ 3000 ಎಕರೆಯಷ್ಟು ಗೋಮಾಳದ ಭೂಮಿಗಳಿದ್ದು, ಅವುಗಳ ಗಡಿ ಗುರುತು ಮಾಡಬೇಕು. ಗೋಮಾಳಗಳನ್ನು ಕೇವಲ ಗೋವುಗಳಿಗಾಗಿ ಮೀಸಲಿಟ್ಟು, ಅವುಗಳಿಗೆ ಸೂಕ್ತ ರಕ್ಷಣೆ ನೀಡಬೇಕು. ಗ್ರಾಮಗಳಲ್ಲಿರುವ ಗೋಮಾಳದ ಜಮೀನನ್ನು ಆಯಾ ಗ್ರಾಮದ ಗೋವುಗಳ ಪಾಲನೆ ಗೆ ಮಾತ್ರ ಒದಗಿಸಬೇಕು. ಈ ಬಗ್ಗೆ ಸರಕಾರ ಕೂಡಲೇ ಕಾರ್ಯಪ್ರವೃತ್ತವಾಗಬೇಕು ಎಂದರು.

ಗೋ ಹಿತರಕ್ಷಣಾ ಒಕ್ಕೂಟ ಉಡುಪಿ ಜಿಲ್ಲಾ ಸಂಚಾಲಕ ಗಣೇಶ್ ಕಿಣಿ ಬೆಳ್ವೆ, ಕಾರ್ಯದರ್ಶಿ ವಿಜಯ್ ಪ್ರಕಾಶ್ ಬೈಲಕೆರೆ, ಶ್ರೀನಿವಾಸ್ ಶೆಟ್ಟಿಗಾರ್ ಬಾರ್ಕೂರು, ಡಾ. ಅಣ್ಣಯ್ಯ ಕುಲಾಲ್, ಸೂರ್ಯನಾರಾಯಣ ಗಾಣಿಗ ಮಟಪಾಡಿ, ಕೃಷ್ಣಾನಂದ ಛಾತ್ರ, ದೇವದಾಸ್ ಹೆಬ್ಬಾರ್ ಕಟ್ಟಿಂಗೇರಿ, ಭಾಸ್ಕರ್ ಶೆಟ್ಟಿ ನಾವುಂದ, ಶ್ರೀಧರ ಆಚಾರ್ಯ ಕುಮ್ರಗೋಡು, ಶಶಾಂಕ್ ಶಿವತ್ತಾಯ, ವಿಶ್ವನಾಥ್ ನಾಯ್ಕಾ ನಡೂರು, ಚಂದ್ರಶೇಖರ ಹೆಗ್ಡೆ ಶಾನಾಡಿ, ಶಂಕರ್ ಹೆಗ್ಡೆ ಜನ್ನಾಡಿ ಉಪಸ್ಥಿತರಿದ್ದರು.

ಗೋಕಳ್ಳತನ: ಕಠಿಣ ಕಾನೂನು ಜಾರಿಯಾಗಲಿ

ಜಿಲ್ಲೆಯಾದ್ಯಂತ ಗೋವುಗಳ ಕಳ್ಳತನ ನಡೆಯುತಿತಿದ್ದು, ಈ ಬಗ್ಗೆ ಸರಕಾರ ಕೂಡಲೇ ಕಠಿಣ ಕಾನೂನು ಜಾರಿ ಮಾಡಬೇಕು. ಹಸುಗಳ ಹಾಲು ಮಾರಾಟ ಮಾಡಿ ಬದುಕು ಸಾಗಿಸುವ ರೈತರ ಕೊಟ್ಟಿಗೆಗೆ ನುಗ್ಗಿ, ತಲವಾರು ತೋರಿಸಿ ಹೆದರಿಸಿ ಕೃತ್ಯ ಎಸಗುವ ಕಿಡಿಗೇಡಿಗಳಿಗೆ ಶಿಕ್ಷೆ ವಿಧಿಸಬೇಕು. ಇಂತಹ ಘಟನೆ ಜಿಲ್ಲೆಯಲ್ಲಿ ಮರುಕಳುಹಿಸಬಾರದು ಎಂದು ಶ್ರೀಗಳು ಆಗ್ರಹಿಸಿದರು.

13 ವರ್ಷದ ಮೇಲೆ ಬಾಲಸನ್ಯಾಸವಲ್ಲ

ಶಿರೂರು ಮಠದ ಪೀಠಾಧಿಪತಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿದ ತೀರ್ಪಿನ ಕುರಿತು ಪೇಜಾವರ ಶ್ರೀಗಳನ್ನು ಪ್ರಶ್ನಿಸಿದಾಗ, ಧಾರ್ಮಿಕ ದೃಷ್ಟಿಯಿಂದ 13 ವರ್ಷ ಮೇಲ್ಪಟ್ಟು ಸನ್ಯಾಸಿ ದೀಕ್ಷೆ ತೆಗೆದುಕೊಂಡರೆ ಅದು ಬಾಲ ಸನ್ಯಾಸವಾಗುವುದಿಲ್ಲ. ಈ ಅವಧಿಯಲ್ಲಿ ಸನ್ಯಾಸತ್ವವನ್ನು ಸ್ವೀಕರಿಸಬಹುದು ಎಂದರು.

ಧಾರ್ಮಿಕ ದೃಷ್ಟಿಯಿಂದ ಪ್ರೌಢತೆ ಎನ್ನುವುದು ಆರಂಭದಲ್ಲಿ 8 ವರ್ಷ, ಆ ಬಳಿಕ ಆಣಿಮಾಂಡವ್ಯ ಎಂಬ ಮಹರ್ಷಿಗಳು ಇದನ್ನು 13 ವರ್ಷಕ್ಕೆ ವಿಸ್ತರಿಸಿದ್ದರು. ಈ ಬಗ್ಗೆ ಮಹಾಭಾರತದಲ್ಲೂ ಉಲ್ಲೇಖವಿದೆ. ಆದ್ದರಿಂದ 13 ವರ್ಷದ ಬಳಿಕ ಕೊಟ್ಟ ದೀಕ್ಷೆ ಬಾಲಸನ್ಯಾಸ ಆಗುವುದಿಲ್ಲ. ಹೀಗಾಗಿ ನ್ಯಾಯಾಲಯದ ತೀರ್ಪನ್ನು ತಾವು ಸ್ವಾಗತಿಸುವುದಾಗಿ ಪೇಜಾವರಶ್ರೀ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X