ಚುನಾವಣೆ ಎದುರಿಸಲು ಸಿದ್ಧತೆಗಳನ್ನು ನಡೆಸಿ: ಪ್ರತಾಪ್ ಚಂದ್ರಶೆಟ್ಟಿ
ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ಉಡುಪಿ, ಸೆ.29: ಮುಂಬರುವ ಚುನಾವಣೆಗಳನ್ನು ಎದುರಿಸಲು ಪಕ್ಷ ಈಗಿಂದಲೇ ಸರ್ವಸಿದ್ಧತೆಗಳನ್ನು ನಡೆಸಬೇಕಾಗಿದೆ. ಕ್ಷೇತ್ರ ವಿಂಗಡನೆ, ಕಾಯ್ದಿರಿಸಿದ ಸ್ಥಾನಗಳ ಮೇಲೆ ನಿಗಾ ವಹಿಸಿ ಎಲ್ಲಾ ಕಾರ್ಯಕರ್ತರು ಹುರುಪಿ ನಿಂದ ಭಾಗವಹಿಸುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ ಹೇಳಿದ್ದಾರೆ.
ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಜಿಲ್ಲಾಧ್ಯಕ್ಷ ಅಶೋಕ್ಕುಮಾರ್ ಕೊಡವೂರು ಅಧ್ಯಕ್ಷತೆಯಲ್ಲಿ ನಡೆದ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯಲ್ಲಿ ಅವರು ಮಾತನಾಡುತಿದ್ದರು.
ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಆಡಳಿತ ಪಕ್ಷದ ಎಲ್ಲಾ ರೀತಿಯ ಅಕ್ರಮಗಳನ್ನು ಬಯಲಿಗೆಳೆದು ಪ್ರತಿಭಟಿಸಬೇಕು. ಬೂತ್ ಹಾಗೂ ಗ್ರಾಮೀಣ ಸಮಿತಿಗಳನ್ನು ಬಲಿಷ್ಠಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು. ಮಾಜಿ ಶಾಸಕ ಗೋಪಾಲ ಪೂಜಾರಿ, ಆಡಳಿತ ಪಕ್ಷ ಕ್ಷೇತ್ರ ಬದಲಾಯಿಸುವ ಸಾಧ್ಯತೆ ಇದೆ. ಇದನ್ನು ನಾವು ಗಮನಿಸುತ್ತಿರಬೇಕು ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಬೂತ್ ಸಮಿತಿ ಮತ್ತು ಗ್ರಾಮೀಣ ಸಮಿತಿಗಳನ್ನು ಪೂರ್ಣ ಪ್ರಮಾಣದಲ್ಲಿ ರಚಿಸದಿದ್ದರೆ ಮುಂದೆ ಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳನ್ನು ಎದುರಿಸಲು ಕಷ್ಟಸಾಧ್ಯ ಎಂದರು.
ಪ್ರಧಾನ ಕಾರ್ಯದರ್ಶಿ ವೈ. ಸುಕುಮಾರ್ ಸ್ವಾಗತಿಸಿ, ಉಪಾಧ್ಯಕ್ಷ ರಾಜು ಪೂಜಾರಿ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಕೆ. ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರ್ವಹಿಸಿದರು. ಪಕ್ಷದಲ್ಲಿ ದುಡಿದು ನಿಧನರಾದವರಿಗೆ ಪ್ರಧಾನ ಕಾರ್ಯದರ್ಶಿ ಬಿ. ಕುಶಲ್ ಶೆಟ್ಟಿ ಶ್ರದ್ಧಾಂಜಲಿ ಅರ್ಪಿಸಿದರು.
ಸಭೆಯಲ್ಲಿ ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ರಾಜು ಪೂಜಾರಿ, ನೀರೆ ಕೃಷ್ಣ ಶೆಟ್ಟಿ, ಸುಧಾಕರ ಕೋಟ್ಯಾನ್, ಸಂಪಿಗೆಹಾಡಿ ಸಂಜೀವ ಶೆಟ್ಟಿ, ದಿನೇಶ್ ಪುತ್ರನ್, ಪ್ರಖ್ಯಾತ್ ಶೆಟ್ಟಿ, ಬಿ. ನರಸಿಂಹ ಮೂರ್ತಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ನವೀನ್ಚಂದ್ರ ಜೆ. ಶೆಟ್ಟಿ, ಹೆಚ್. ನಿತ್ಯಾನಂದ ಶೆಟ್ಟಿ, ಅಲೆವೂರು ಹರೀಶ್ ಕಿಣಿ, ಯತೀಶ ಕರ್ಕೇರ, ಬ್ಲಾಕ್ ಅಧ್ಯಕ್ಷರಾದ ಮಂಜುನಾಥ ಪೂಜಾರಿ, ಸದಾಶಿವ ದೇವಾಡಿಗ, ನವೀನ್ಚಂದ್ರ ಸುವರ್ಣ, ದಿನಕರ್ ಹೇರೂರು, ಹರಿಪ್ರಸಾದ್ ಶೆಟ್ಟಿ, ಪ್ರದೀಪ್ ಕುಮಾರ್ ಶೆಟ್ಟಿ, ರಮೇಶ್ ಕಾಂಚನ್ ಮತ್ತು ಮುಂಚೂಣಿ ಘಟಕಗಳ ಅಧ್ಯಕ್ಷರಾದ ಕಿಶೋರ್ ಕುಮಾರ್ ಎರ್ಮಾಳ್, ಗೀತಾ ವಾಗ್ಳೆ, ಸಂಕಪ್ಪ ಎ,, ಶಶಿಧರ ಶೆಟ್ಟಿ ಎಲ್ಲೂರು, ಜಯರಾಮ್ ನಾಯ್ಕಿ, ಡೆರಿಕ್ ಡೆರಿಕ್ ಡಿ’ಸೋಜಾ, ರೋಶನಿ ಒಲಿವರ್, ಹರೀಶ್ ಶೆಟ್ಟಿ ಪಾಂಗಾಳ, ರೋಶನ್ ಶೆಟ್ಟಿ, ಹಾಗೂ ಬಿ. ಭುಜಂಗ ಶೆಟ್ಟಿ, ಶ್ಯಾಮಲ ಭಂಡಾರಿ, ಉದ್ಯಾವರ ನಾಗೇಶ್ ಕುಮಾರ್, ಚಂದ್ರಶೇಖರ್ ಶೆಟ್ಟಿ, ರಾಘವ ದೇವಾಡಿಗ, ಮುಸ್ತಾಖ್ ಅಹ್ಮದ್, ಸತೀಶ್ ಕಿಣಿ, ಕೀರ್ತಿ ಶೆಟ್ಟಿ, ಹಬೀಬ್ ಅಲಿ, ಪ್ರಶಾಂತ್ ಜತ್ತನ್ನ, ಬಿಪಿನ್ಚಂದ್ರ ಪಾಲ್ ನಕ್ರೆ, ವಿಕಾಸ್ ಹೆಗ್ಡೆ, ಪಿ. ಬಾಲಕೃಷ್ಣ ಪೂಜಾರಿ, ಡಾ. ಸುನೀತಾ ಶೆಟ್ಟಿ, ರಾಜೇಶ್ ಶೆಟ್ಟಿ ಬ್ರಹ್ಮಾವರ, ಲೂಯಿಸ್ ಲೋಬೊ, ಸತೀಶ್ ಕೊಡವೂರು, ಅಬ್ದುಲ್ ಅಝೀಝ್ ಹೆಜಮಾಡಿ, ಉಪೇಂದ್ರ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.
ಆಸ್ಕರ್ ಫೆರ್ನಾಂಡೀಸ್ ಪುತ್ಥಳಿ
ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಇತ್ತೀಚೆಗೆ ನಿಧನರಾದ ಆಸ್ಕರ್ ಫೆರ್ನಾಂಡಿಸ್ ಭವನ ಎಂದು ಹೆಸರಿಡುವುದು, ಕಾಂಗ್ರೆಸ್ ಭವನದಲ್ಲಿ ಆಸ್ಕರ್ ಫೆರ್ನಾಂಡಿಸ್ ರ ಪುತ್ಥಳಿ ಪ್ರತಿಷ್ಟಾಪಿಸುವುದು ಮತ್ತು ಯಾವುದಾದರೊಂದು ರಸ್ತೆ ಇಲ್ಲವೆ ವೃತ್ತಕ್ಕೆ ಆಸ್ಕರ್ ಫೆರ್ನಾಂಡಿಸ್ ರಸ್ತೆ ಅಥವಾ ಆಸ್ಕರ್ ಫೆರ್ನಾಂಡಿಸ್ ವೃತ್ತ ಎಂದು ಹೆಸರಿಡಲು ನಗರಸಭೆಯನ್ನು ವಿನಂತಿಸುವ ಪ್ರಸ್ತಾಪವನ್ನು ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಂಡಿಸಿದರು. ಇದಕ್ಕೆ ಸರ್ವಾನುಮತದ ಅನುಮೋದನೆ ದೊರಕಿತು.







