Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ಯಾನಿಟರಿ ನ್ಯಾಪ್‌ಕಿನ್ ವಿಲೇಗೆ...

ಸ್ಯಾನಿಟರಿ ನ್ಯಾಪ್‌ಕಿನ್ ವಿಲೇಗೆ ಕಿಲ್ಪಾಡಿ ಗ್ರಾಪಂನಿಂದ ‘ಪಿಂಕ್ ಬಾಕ್ಸ್’ ಪರಿಕಲ್ಪನೆ

ವಾರ್ತಾಭಾರತಿವಾರ್ತಾಭಾರತಿ29 Sept 2021 10:40 PM IST
share
ಸ್ಯಾನಿಟರಿ ನ್ಯಾಪ್‌ಕಿನ್ ವಿಲೇಗೆ ಕಿಲ್ಪಾಡಿ ಗ್ರಾಪಂನಿಂದ ‘ಪಿಂಕ್ ಬಾಕ್ಸ್’ ಪರಿಕಲ್ಪನೆ

ಮಂಗಳೂರು, ಸೆ.29: ತ್ಯಾಜ್ಯವನ್ನು ಮೂಲದಲ್ಲಿಯೇ ಬೇರ್ಪಡಿಸಿ, ಸಂಗ್ರಹಿಸಿ, ವೈಜ್ಞಾನಿಕವಾಗಿ ಸೂಕ್ತ ರೀತಿಯಲ್ಲಿ ವಿಲೇ ಮಾಡುವುದು ಸದ್ಯದ ಅನಿವಾರ್ಯತೆಯಾಗಿದೆ. ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಯಾಗದೇ ಇದ್ದರೂ ಕಸ ವಿಲೇವಾರಿಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಹಸಿ ಕಸವನ್ನು ಮನೆಯ ಹಂತದಲ್ಲಿಯೇ ಪೈಪ್ ಕಾಂಪೋಸ್ಟ್ ಮೂಲಕ ವಿಲೇಗೊಳಿಸುವ ಹಾಗೂ ಘನ ತ್ಯಾಜ್ಯವನ್ನು ಗ್ರಾಪಂನಿಂದಲೇ ಸಂಗ್ರಹಿಸುವ ವಿನೂತನ ಪ್ರಯತ್ನಕ್ಕೆ ಮಂಗಳೂರು ತಾಲೂಕಿನ ಕಿಲ್ಪಾಡಿ ಗ್ರಾಪಂ ಮುಂದಾಗಿದೆ.

ಸರಕಾರದ ನಿರ್ದೇಶನದಂತೆ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ವಿಲೇಗೊಳಿಸಲು ಈಗಾಗಲೇ ಇನ್ಸಿನರೇಟರ್ ಯಂತ್ರವನ್ನು ಪಂಚಾಯತ್ ಖರೀದಿಸಿದೆ. ಈಗ ನ್ಯಾಪ್‌ಕಿನ್‌ಗಳನ್ನು ಸಂಗ್ರಹಿಸಲು ‘ಋತು’ ಎಂಬ ಶೀರ್ಷಿಕೆಯಡಿ ‘ಪಿಂಕ್ ಬಾಕ್ಸ್’ ಪರಿಕಲ್ಪನೆಯನ್ನು ಜಾರಿಗೆ ತಂದಿದೆ.

ಆರಂಭದಲ್ಲಿ ಸ್ವಲ್ಪ ಕಷ್ಟವೆನಿಸಿದರೂ ನಿಧಾನವಾಗಿ ಸಾರ್ವಜನಿಕರು ಗ್ರಾಪಂನ ಕಾಳಜಿಯನ್ನು ಅರ್ಥ ಮಾಡಿಕೊಂಡು ಪಂಚಾಯತ್‌ನೊಂದಿಗೆ ಕೈ ಜೋಡಿಸುತ್ತಿದ್ದಾರೆ. ಮನೆಯಲ್ಲಿ ಉತ್ಪತ್ತಿಯಾಗುವ ಒಣಕಸವನ್ನು ಗ್ರಾಪಂನಿಂದ ಮನೆ ಮನೆಗೆ ತೆರಳುವ ಕಸ ಸಂಗ್ರಹಣೆ ವಾಹನಕ್ಕೆ ನೀಡುತ್ತಿರುವುದು ಖುಷಿಯ ವಿಚಾರ. ಹಸಿ ಮತ್ತು ಒಣ ಕಸಕ್ಕೊಂದು ದಾರಿ ಹುಡುಕಿದ್ದರು. ಆದರೆ ಮಹಿಳೆಯರು ಬಳಸಿ ಎಲ್ಲೆಂದರಲ್ಲಿ ಬೀಸಾಡುತ್ತಿದ್ದ ಸ್ಯಾನಿಟರಿ ನ್ಯಾಪ್‌ಕಿನ್‌ಗಳ ಸಂಗ್ರಹ ಮಾತ್ರ ಸವಾಲಾಗಿ ಪರಿಣಮಿಸಿತ್ತು.

ಏನಿದು ಪಿಂಕ್ ಬಾಕ್ಸ್?: ಗ್ರಾಪಂ ಕಚೇರಿ ಸೇರಿದಂತೆ ಗ್ರಾಪಂ ವ್ಯಾಪ್ತಿಯ ಪ್ರತಿಯೊಂದು ಶಾಲೆ ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಂದರಂತೆ ಗುಲಾಬಿ ಬಣ್ಣದ ಬುಟ್ಟಿಗಳನ್ನು ಮಕ್ಕಳ ಕೈಗೆ ಸಿಗದಷ್ಟು ಎತ್ತರದಲ್ಲಿರುವಂತೆ ಕೇವಲ ಮಹಿಳೆಯರು ಪ್ರವೇಶಿಸುವಂತಹ ಸ್ಥಳಗಳಲ್ಲಿ ಅಳವಡಿಸಲಾಗುವುದು. ವಿದ್ಯಾರ್ಥಿನಿಯರು ಹಾಗೂ ಗ್ರಾಮದ ಮಹಿಳೆಯರು ತಾವು ಬಳಸಿದ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ಪೇಪರ್‌ನಲ್ಲಿ ಸುತ್ತಿ ತಂದು ಆ ಗುಲಾಬಿ ಬಾಕ್ಸ್‌ನಲ್ಲಿ ತಂದು ಹಾಕುತ್ತಾರೆ. ದಿನಕ್ಕೊಮ್ಮೆ ಪ್ರತಿ ಕೇಂದ್ರಕ್ಕೂ ಭೇಟಿ ನೀಡುವ ಸಿಬ್ಬಂದಿ ಸೂಕ್ತ ಮುಂಜಾಗರೂಕರೆಯೊಂದಿಗೆ ಸಂಗ್ರಹಿಸಿ, ಈಗಾಗಲೇ ಅಳವಡಿಸಿರುವ ಇನ್ಸಿನರೇಟರ್ ಯಂತ್ರದ ಮೂಲಕ ವಿಲೇವಾರಿ ಮಾಡುತ್ತಾರೆ.

ಸುಮಾರು 900 ಡಿಗ್ರಿ ಸೆಲ್ಸಿಯಸ್ ಉಂಷ್ಣಾಂಶದಲ್ಲಿ ಉರಿಯುವ ಈ ಆಧುನಿಕ ಯಂತ್ರವು ಏಕಕಾಲಕ್ಕೆ 50ರಿಂದ 60 ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು 20 ನಿಮಿಷಗಳಲ್ಲಿ ಸುಟ್ಟು ಬೂದಿ ಮಾಡುತ್ತದೆ. ಅಷ್ಟು ಪ್ರಮಾಣದ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ಸುಡುವಾಗಲೂ ಅದರಿಂದ ಹೊರಬರುವ ಅಲ್ಪ ಪ್ರಮಾಣದ ಹೊಗೆಯು ಆರೋಗ್ಯದ ಮೇಲೆ ಯಾವುದೇ ರೀತಿಯ ದುಷ್ಪರಿಣಾಮ ಉಂಟು ಮಾಡಲಾರದು ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ.

ಏಕಕಾಲಕ್ಕೆ 60 ಪ್ಯಾಡ್‌ಗಳನ್ನು ದಹಿಸಿದಾಗಲೂ ಕೇವಲ ಗರಿಷ್ಠ ಶೇ.1ರಷ್ಟು ಮಾತ್ರ ಬೂದಿ ಉಳಿಯುತ್ತದೆ. ಅದನ್ನು ಟಾಯ್ಲೆಟ್‌ಗೆ ಹಾಕಿಬಿಡಬಹುದು. ಇದುವರೆಗೂ ಸ್ವಸ್ಥ ಸಮಾಜಕ್ಕೊಂದು ಸವಾಲಾಗಿದ್ದ, ಬಳಸಿ ಅಲ್ಲಲ್ಲಿ ಬೀಸಾಡುತ್ತಿದ್ದ ಸ್ಯಾನಿಟರಿ ನ್ಯಾಪ್‌ಕಿನ್‌ಗಳಿಂದ ಪರಿಸರಕ್ಕೆ ಹಾಗೂ ಮನುಕುಲಕ್ಕೆ ಉಂಟಾಗಬಹುದಾದ ಹಾನಿಯನ್ನು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಾಗುತ್ತದೆ ಎನ್ನುವುದು ಸಂತಸದ ವಿಷಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X