Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೈರ್ಮಲ್ಯ ಕಾರ್ಮಿಕರ ಸಾವಿಗೆ ಹೊಣೆಗಾರಿಕೆ...

ನೈರ್ಮಲ್ಯ ಕಾರ್ಮಿಕರ ಸಾವಿಗೆ ಹೊಣೆಗಾರಿಕೆ ನಿಗದಿಪಡಿಸಿ: ಕೇಂದ್ರ, ರಾಜ್ಯಗಳಿಗೆ ಎನ್ಎಚ್ಆರ್ಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ29 Sept 2021 10:56 PM IST
share

ಹೊಸದಿಲ್ಲಿ, ಸೆ.29: ಮ್ಯಾನುವಲ್ ಸ್ಕಾವೆಂಜಿಂಗ್ ಸಂದರ್ಭ ನೈರ್ಮಲ್ಯ ಕಾರ್ಮಿಕರು ಸಾವನ್ನಪ್ಪಿದ ಪ್ರಕರಣಗಳು ಸಂಭವಿಸಿದಾಗ ಅವುಗಳಿಗೆ ಹೊಣೆಗಾರಿಕೆಯನ್ನು ನಿಗದಿಪಡಿಸುವಂತೆ ಕರೆ ನೀಡುವ ಸಲಹಾಪತ್ರ (ಅಡ್ವ್ವೈಸರಿ) ವನ್ನು ರಾಷ್ಟ್ರೀಯ ಮಾನವಹಕ್ಕುಗಳ ಆಯೋಗವು ಬುಧವಾರ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಬಿಡುಗಡೆಗೊಳಿಸಿದೆ.‌

ನೈರ್ಮಲ್ಯ ಕಾರ್ಮಿಕರನ್ನು ಮುಂಚೂಣಿಯ ಆರೋಗ್ಯ ಕಾರ್ಯಕರ್ತರೆಂಬುದಾಗಿ ಪರಿಗಣಿಸಬೇಕೆಂದು ಅದು ಸಲಹೆ ನೀಡಿದೆ. ಈ ಅಪಾಯಕಾರಿಯಾದ ಕೆಲಸದಲ್ಲಿ ನಿರತರಾಗಿರುವ ವ್ಯಕ್ತಿಗಳಿಗೆ ಸುರಕ್ಷತೆಯನ್ನು ಹಾಗೂ ಮಾನವಹಕ್ಕುಗಳ ರಕ್ಷಣೆಯನ್ನು ಖಾತರಿಪಡಿಸಬೇಕೆಂದು ಎನ್ಎಚ್ಆರ್ಸಿ ತಿಳಿಸಿದೆ.
 
‘‘ಅಪಾಯಕಾರಿಯಾದ ಸ್ವಚ್ಛತಾಕಾರ್ಯಗಳು ಸೇರಿದಂತೆ ಮ್ಯಾನುವಲ್ ಸ್ಕಾವೆಂಜಿಂಗ್ ಸಂದರ್ಭದಲ್ಲಿ ಸಂಭವಿಸುವ ಯಾವುದೇ ಸಾವಿಗೆ ಸ್ಥಳೀಯ ಆಡಳಿತ ಹಾಗೂ ಗುತ್ತಿಗೆದಾರ/ಉದ್ಯೋಗದಾತ ಇವರ ಮೇಲೆ ಜಂಟಿಯಾಗಿ ಹೊಣೆಗಾರಿಕೆಯನ್ನು ಹೊರಿಸಬೇಕೆಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಎನ್ಎಚ್ಆರ್ಸಿಯು ಸಂಬಂಧಪಟ್ಟ ಕೇಂದ್ರ ಸಚಿವಾಲಯಗಳು ಹಾಗೂ ಇಲಾಖೆಗಳ ಕಳುಹಿಸಿರುವ ಸಲಹಾಪತ್ರದಲ್ಲಿ ತಿಳಿಸಿದೆ ಈ ಕುರಿತ ಕಾರ್ಯಾನುಷ್ಠಾನ ವರದಿಯನ್ನು ಮೂರು ತಿಂಗಳೊಳಗೆ ಸಲ್ಲಿಸುವಂತೆಯೂ ಅದು ಕೋರಿದೆ.

ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಕುರಿತ ಕೇಂದ್ರ ಸಚಿವಾಲಯ, ವಸತಿ ಹಾಗೂ ನಗರ ವ್ಯವಹಾರಗ ಸಚಿವಾಲಯ ಹಾಗೂ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಕ್ಕೂ ಸಲಹಾ ಪತ್ರವನ್ನು ಕಳುಹಿಸಲಾಗಿದೆ. ನೈರ್ಮಲ್ಯ ಕಾರ್ಮಿಕರಿಗೆ ಸೂಕ್ತವಾದ ಸುರಕ್ಷಿತ ಉಡುಪು, ತಂತ್ರಜ್ಞಾನದ ಬಳಕೆ, ಏಜೆನ್ಸಿಗಳು ಅಥವಾ ಉದ್ಯೋಗಿಗಳ ಮೇಲೆ ಹೊಣೆಗಾರಿಕೆಯನ್ನು ಹೊರಿಸುವುದು ಸೇರಿದಂತೆ ವಿಷಯಗಳ ಬಗ್ಗೆ ಸಲಹಾಪತ್ರದಲ್ಲಿ ಗಮನಹರಿಸಲಾಗಿದೆ.

ನೈರ್ಮಲ್ಯ ಸೇವೆಗಳ ಮೂಲ ಸೌಕರ್ಯವನ್ನು ಬಲಪಡಿಸುವಿಕೆ, ನೈರ್ಮಲ್ಯ ಕಾರ್ಮಿಕರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವುದು, ಮ್ಯಾನುವಲ್ ಸ್ಕಾವೆಂಜರ್ಗಳಿಗೆ ನ್ಯಾಯದಾನ ಹಾಗೂ ಪುನರ್ವಸತಿಯನ್ನು ಖಾತರಿಪಡಿಸುವ ಬಗ್ಗೆಯೂ ಸಲಹಾಪತ್ರದಲ್ಲಿ ಪ್ರಸ್ತಾವಿಸಲ ಆಗಿದೆ.

ಶೌಚಗುಂಡಿಗಳು ಅಥವಾ ಒಳಚರಂಡಿಯನ್ನು ಪ್ರವೇಶಿಸುವ ಎಲ್ಲಾ ನೈರ್ಮಲ್ಯ ಕಾರ್ಮಿಕರಿಗೆ ಹೆಲ್ಮೆಟ್ಗಳು, ಸುರಕ್ಷತಾ ಜಾಕೆಟ್ಗಳು, ಕೈಗವಸುಗಳು, ಮಾಸ್ಕ್ಗಳು, ಗಮ್ಬೂಟುಗಳು, ಸುರಕ್ಷತಾ ಕನ್ನಡಕಗಳು, ಟಾರ್ಚ್ಲೈಟ್ಗಳು ಹಾಗೂ ಆಕ್ಸಿಜನ್ ಸಿಲಿಂಡರ್ಗಳನ್ನು ಒದಗಿಸಬೇಕೆಂದು ಶಿಫಾರಸು ಮಾಡಿದೆ. ಮ್ಯಾನುವಲ್ ಸ್ಕಾವೆಂಜರ್ಗಳ ನಿಯೋಜನೆ ನಿಷೇಧ ಹಾಗೂ ಅವರ ಪುನರ್ವಸತಿ ಕಾಯ್ದೆಯ ಅನುಷ್ಠಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತೆಯೂ ಎನ್ಎಚ್ಆರ್ಸಿ ಸಲಹಾಪತ್ರದಲ್ಲಿ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X