Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮುಂದಿನ 10 ದಿನಗಳಲ್ಲಿ ಪ್ರಮುಖ...

ಮುಂದಿನ 10 ದಿನಗಳಲ್ಲಿ ಪ್ರಮುಖ ರಸ್ತೆಯಲ್ಲಿನ ಗುಂಡಿಗಳನ್ನ ಮುಚ್ಚಲಾಗುವುದು: ಕಂದಾಯ ಸಚಿವ ಆರ್. ಅಶೋಕ್

ವಾರ್ತಾಭಾರತಿವಾರ್ತಾಭಾರತಿ30 Sept 2021 11:25 PM IST
share
ಮುಂದಿನ 10 ದಿನಗಳಲ್ಲಿ ಪ್ರಮುಖ ರಸ್ತೆಯಲ್ಲಿನ ಗುಂಡಿಗಳನ್ನ ಮುಚ್ಚಲಾಗುವುದು: ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು, ಸೆ. 30: ‘ನಗರದಲ್ಲಿನ ರಸ್ತೆ ಗುಂಡಿಗಳನ್ನ ಮುಚ್ಚಲು ಬಿಬಿಎಂಪಿ ಅಧಿಕಾರಿಗಳಿಗೆ ಈಗಾಗಲೇ ಗಡುವು ನೀಡಲಾಗಿತ್ತು. ಆದರೆ, ಸತತ ಮಳೆಯಿಂದಾಗಿ ಜಲ್ಲಿ ಮಿಕ್ಸ್ ಪೂರೈಸಲು 12 ದಿನಗಳ ಕಾಲ ಸಾಧ್ಯವಾಗದ ಕಾರಣ ನಿಗದಿತ ಕಾರ್ಯಕ್ಕೆ ಅಡಚಣೆಯುಂಟಾಗಿದೆ. ಹೀಗಾಗಿ ಮುಂದಿನ ಹತ್ತು ದಿನಗಳ ಒಳಗೆ ಎಲ್ಲ್ಲ ರಸ್ತೆಯಲ್ಲಿನ ಗುಂಡಿಗಳನ್ನ ಮುಚ್ಚಲು ಗಡುವು ನೀಡಿದ್ದೇನೆ' ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಗುರುವಾರ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಈಗಾಗಲೇ 246 ಕಿ.ಮೀ ಪ್ರಮುಖ ರಸ್ತೆಯುದ್ದಕ್ಕೂ ಗುಂಡಿಗಳನ್ನ ಮುಚ್ಚಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟಾರೆ 13,874 ಕಿ.ಮೀ ಬರುತ್ತದೆ. ಇದರಲ್ಲಿ 1,344 ಕಿ.ಮೀ. ರಸ್ತೆಯನ್ನು ಪ್ರಮುಖ ಹಾಗೂ ಉಪ ಪ್ರಮುಖ ರಸ್ತೆ ಎಂದು ವಿಂಗಡಿಸಲಾಗಿದೆ.

ಇದರಲ್ಲಿ 865 ಕಿ.ಮೀ ಉದ್ದದ ರಸ್ತೆ ಸುಸ್ಥಿತಿಯಲ್ಲಿದ್ದು, 449 ಕಿ.ಮೀ ನಷ್ಟು ರಸ್ತೆ ಭಾಗಶಃ ಹಾಳಾಗಿದೆ. ಹೀಗಾಗಿ ಮುಂದಿನ 10 ದಿನಗಳಲ್ಲಿ ಇದನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪ್ರತಿ ದಿನ 30 ಲೋಡ್ ಜಲ್ಲಿ ಮಿಕ್ಸ್ ತರಿಸಿಕೊಂಡು ಆದಷ್ಟು ಬೇಗ ಕಾಮಗಾರಿ ಮುಗಿಸುವಂತೆ ತಿಳಿಸಲಾಗಿದೆ. ಬಾಕಿ ರಸ್ತೆಗಳಲ್ಲಿನ ರಸ್ತೆ ಗುಂಡಿಗಳನ್ನ ಸ್ಥಳೀಯ ಗುತ್ತಿಗೆದಾರರ ಮೂಲಕ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.

‘110 ಹಳ್ಳಿಗಳಲ್ಲಿನ ಪೂರ್ಣ ಪ್ರಮಾಣದಲ್ಲಿ ನೀರು ಸರಬರಾಜು ಮತ್ತು ಚರಂಡಿ ವ್ಯಸವಸ್ಥೆಗಾಗಿ ಸರಕಾರ 1 ಸಾವಿರ ಕೋಟಿ ರೂ.ಬಿಡುಗಡೆ ಮಾಡಿದೆ. ಟೆಂಡರ್ ಪ್ರಕ್ರಿಯೆ ಮುಗಿದು ಆದೇಶ ನೀಡಲಾಗುತ್ತಿದೆ. 25 ರಿಂದ 30 ದಿನಗಳಲ್ಲಿ ಪೂರ್ಣ ಡಾಂಬರ್ ರಸ್ತೆ ಮಾಡಲಾಗುವುದು. ಕಳಪೆ ಗುಣಮಟ್ಟ ಕಂಡುಬಂದಲ್ಲಿ ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಅಶೋಕ್ ಎಚ್ಚರಿಕೆ ನೀಡಿದರು.

185 ಕಟ್ಟಡಗಳು ಶಿಥಿಲ: ‘ಈಗಾಗಲೇ 2019ರ ಸರ್ವೇ ಪ್ರಕಾರ 185 ಶಿಥಿಲಗೊಂಡ ಕಟ್ಟಡಗಳು ಎಂದು ಗುರುತಿಸಲಾಗಿದೆ. ಅದರಲ್ಲಿ 10 ಕಟ್ಟಡಗಳನ್ನ ನೆಲಸಮ ಮಾಡಲಾಗಿದ್ದು, ಉಳಿದ 175 ಕಟ್ಟಡಗಳಿಗೆ ಒಂದು ವಾರ ಸಮಯ ನೀಡಿದ್ದು, ಅವರಿಗೆ ಸೂಚನೆ ಕೊಟ್ಟು, ನಂತರದಲ್ಲಿ ಬೆಸ್ಕಾಂ ಮೂಲಕ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿ ಸ್ಥಳೀಯ ಪೆÇಲೀಸ್ ನೆರವಿನೊಂದಿಗೆ ನೆಲಸಮಗೊಳಿಸಬೇಕು. ಬಿಬಿಎಂಪಿ ಹೊಸದಾಗಿ ಮತ್ತೇ ಸರ್ವೆ ಮಾಡಲು ಸೂಚಿಸಿದ್ದೇನೆ. ಹೊಸ ಕಟ್ಟಡ ನಿರ್ಮಾಣದ ವೇಳೆ ಆಳವಾದ ಗುಂಡಿಗಳನ್ನ ತೋಡದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಲಾಗಿದೆ.

ಇದರಿಂದ ಅಕ್ಕಪಕ್ಕದ ಕಟ್ಟಡಗಳು ಅಸ್ಥಿರಗೊಳ್ಳುವ ಸಾಧ್ಯತೆ ಇರುತ್ತದೆ. ಈ ರೀತಿ ಯಾರಿಗೂ ಅನುಮತಿ ನೀಡಕೂಡದು ಎಂದು ಸೂಚನೆ ನೀಡಲಾಗಿದೆ. ಕಟ್ಟಡದ ಮಾಲಕರಿಗೆ ನೆಲಸಮ ಮಾಡಲು ತಿಳಿಸಲಾಗಿದೆ. ಆ ಖರ್ಚನ್ನು ನಿವೇಶನದ ಆಸ್ತಿ ತೆರಿಗೆಗೆ ಜಮಾ ಮಾಡಲು ತಿಳಿಸಲಾಗಿದೆ. ಇಂತಹ ಶಿಥಿಲಗೊಂಡ ಕಟ್ಟಡಗಳು ಸಾರ್ವಜನಿಕರ ಗಮನಕ್ಕೂ ಬಂದಲ್ಲಿ ಮಾಹಿತಿ ನೀಡಬೇಕು ಎಂದರು.

ಕೋವಿಡ್ ಪರಿಹಾರ ನಿಧಿಗೆ ಅರ್ಹರಾದ 15 ಸಾವಿರ ಜನರನ್ನ ಬಿಬಿಎಂಪಿ ವ್ಯಾಪ್ತಿಯಲ್ಲಿ ಗುರುತಿಸಲಾಗಿದೆ. ಅವರಿಗೆ 15 ದಿನಗಳೊಳಗೆ ನಮ್ಮ ವಾರ್ಡ್ ಕಚೇರಿಯಿಂದ ಅರ್ಜಿಗಳನ್ನ ತೆಗೆದುಕೊಂಡು ಬೇಗ ಕಾರ್ಯ ಮುಗಿಸುವಂತೆ ಸೂಚಿಸಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರಕಾರ 1 ಲಕ್ಷ ರೂ. ಮತ್ತು ಕೇಂದ್ರ ಸರಕಾರ 50 ಸಾವಿರ ರೂ. ನೀಡಲಿದೆ. ಮುಖ್ಯಮಂತ್ರಿ ಜೊತೆಗೂ ಈ ವಿಷಯವನ್ನ ಚರ್ಚೆ ಮಾಡಿದ್ದೇನೆ. ಆದಷ್ಟು ಬೇಗ ಪರಿಹಾರ ಹಣ ನೀಡಲಾಗುವುದು ಎಂದು ಸಚಿವ ಅಶೋಕ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X