Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಥಿಯೋಪಿಯಾದ ಟಿಗ್ರೆಯಲ್ಲಿ ಅಸಾಮಾನ್ಯ...

ಇಥಿಯೋಪಿಯಾದ ಟಿಗ್ರೆಯಲ್ಲಿ ಅಸಾಮಾನ್ಯ ಅಪೌಷ್ಟಿಕತೆಯ ಸಮಸ್ಯೆ : ವಿಶ್ವಸಂಸ್ಥೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ1 Oct 2021 10:17 PM IST
share
ಇಥಿಯೋಪಿಯಾದ ಟಿಗ್ರೆಯಲ್ಲಿ ಅಸಾಮಾನ್ಯ ಅಪೌಷ್ಟಿಕತೆಯ ಸಮಸ್ಯೆ : ವಿಶ್ವಸಂಸ್ಥೆ ಎಚ್ಚರಿಕೆ

ವಿಶ್ವಸಂಸ್ಥೆ, ಅ.1: ಯುದ್ಧದಿಂದ ಜರ್ಜರಿತಗೊಂಡಿರುವ ಇಥಿಯೋಪಿಯಾದ ಟಿಗ್ರೆ ಪ್ರಾಂತ್ಯದ ಗರ್ಭಿಣಿ ಹಾಗೂ ಹಾಲೂಡಿಸುವ ಮಹಿಳೆಯರಲ್ಲಿ ಹಿಂದೆಂದೂ ಕಂಡಿರದ ರೀತಿಯ ಅಸಾಮಾನ್ಯ ಅಪೌಷ್ಟಿಕತೆಯ ಸಮಸ್ಯೆಯಿದೆ ಎಂದು ವಿಶ್ವಸಂಸ್ಥೆಯ ವರದಿಯಲ್ಲಿ ಎಚ್ಚರಿಸಲಾಗಿದೆ.

ವಿಶ್ವಸಂಸ್ಥೆಯ ಹಲವು ಹಿರಿಯ ಅಧಿಕಾರಿಗಳನ್ನು ದೇಶದಿಂದ ಹೊರಹೋಗುವಂತೆ ಇಥಿಯೋಪಿಯಾ ಸರಕಾರ ಆದೇಶಿಸಿದ ಕೆಲ ಗಂಟೆಗಳ ಬಳಿಕ ಈ ವರದಿ ಪ್ರಕಟವಾಗಿದೆ. ಇಥಿಯೋಪಿಯಾದ ಉತ್ತರದಲ್ಲಿ ಘರ್ಷಣೆ ಭುಗಿಲೆದ್ದ ಸುಮಾರು 11 ತಿಂಗಳ ಬಳಿಕ ಸಾಮೂಹಿಕ ಉಪವಾಸ ಪ್ರಕರಣ ಹೆಚ್ಚಿರುವ ಜೊತೆಗೆ ಮಕ್ಕಳಲ್ಲಿ ಅಪೌಷ್ಟಿಕತೆಯ ಸಮಸ್ಯೆಯೂ ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿದೆ. 

ಅಧ್ಯಯನದ ಅವಧಿಯಲ್ಲಿ ಸಮೀಕ್ಷೆಗೆ ಒಳಪಡಿಸಲಾದ 15,000 ಗರ್ಭಿಣಿ ಹಾಗೂ ಹಾಲೂಡಿಸುವ ಮಹಿಳೆಯರಲ್ಲಿ 12,000ಕ್ಕೂ ಅಧಿಕ ಮಹಿಳೆಯರು ಅಥವಾ ಸುಮಾರು ಶೇ. 79 ರಷ್ಟು ಮಂದಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದರು. 5 ವರ್ಷದೊಳಗಿನ ಮಕ್ಕಳಲ್ಲಿ ಸಾಧಾರಣ ಅಪೌಷ್ಟಿಕತೆಯ ಪ್ರಮಾಣ ಜಾಗತಿಕ ಅಪಾಯ ಮಟ್ಟವಾದ ಶೇ.15ರಷ್ಟು ಮೀರಿ 18%ಕ್ಕೆ ಏರಿದ್ದರೆ, ತೀವ್ರ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳ ಪ್ರಮಾಣವೂ ಜಾಗತಿಕ ಅಪಾಯ ಮಟ್ಟ ಶೇ.2ರಷ್ಟು ಮೀರಿ 2.4%ಕ್ಕೆ ತಲುಪಿದೆ ಎಂದು ವಿಶ್ವಸಂಸ್ಥೆಯ ಸಮನ್ವಯ ಕಾರ್ಯಾಲಯ(ಒ ಸಿ ಎಚ್ ಎ) ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.
 
ವಿಶ್ವಸಂಸ್ಥೆಯ ಅಧಿಕಾರಿಗಳಿಗೆ ದೇಶದಿಂದ ಹೊರಹೋಗುವಂತೆ ಆದೇಶಿಸಿದ ಇಥಿಯೋಪಿಯಾ ಸರಕಾರದ ಕ್ರಮವನ್ನು ಶುಕ್ರವಾರ ವಿಶ್ವಸಂಸ್ಥೆ ಖಂಡಿಸಿದ್ದು, ಇದರಿಂದ ಟಿಗ್ರೆ ವಲಯದಲ್ಲಿ ತುರ್ತು ಮಾನವೀಯ ನೆರವಿನ ಅಗತ್ಯವಿರುವ ಮಿಲಿಯಾಂತರ ಜನರಿಗೆ ಸಮಸ್ಯೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದೆ. ಮಾನವೀಯ ನೆರವು ಉಪಕ್ರಮ ಮುಂದುವರಿಯುವುದು ಅತ್ಯಗತ್ಯವಾಗಿದೆ ಮತ್ತು ಅದು ಮುಂದುವರಿಯಲಿದೆ . ಇದುವರೆಗೆ ನಮ್ಮ ಕಾರ್ಯನಿರ್ವಹಣೆಯನ್ನು ತಡೆಯುವ ಸೂಚನೆ ಸರಕಾರದಿಂದ ಬಂದಿಲ್ಲ ಎಂದು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಕಾರ್ಯಾಲಯದ ವಕ್ತಾರ ಜೆನ್ಸ್ ಲ್ಯಾರ್ಕೆ ಹೇಳಿದ್ದಾರೆ.
 
ವಿಶ್ವಸಂಸ್ಥೆಯ ಮಾನವೀಯ ನೆರವು ಒದಗಿಸುವ ಕೆಲವು ಸಿಬಂದಿಗಳು ಟಿಗ್ರೇಯ ಸರಕಾರಿ ವಿರೋಧಿ ಪಡೆಗಳ ಪರವಾಗಿದ್ದಾರೆ ಮತ್ತು ಅವರಿಗೆ ಶಸ್ತ್ರಾಸ್ತ್ರಗಳನ್ನೂ ಪೂರೈಸುತ್ತಿದ್ದಾರೆ ಎಂದು ಇಥಿಯೋಪಿಯಾದ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. ದೇಶದಲ್ಲಿ ನಡೆಯುತ್ತಿರುವ ಯುದ್ಧದ ಬಗ್ಗೆ ತಪ್ಪು ಮಾಹಿತಿ ಪ್ರಸಾರ ಮಾಡುತ್ತಿದ್ದ ಆರೋಪದಲ್ಲಿ 2 ಪ್ರಮುಖ ಅಂತರಾಷ್ಟ್ರೀಯ ನೆರವು ಸಂಘಟನೆಗಳಾದ ‘ಡಾಕ್ಟರ್ಸ್ ವಿತೌಟ್ ಬಾರ್ಡರ್’ ಮತ್ತು ನಾರ್ವೆಜಿಯನ್ ರೆಫ್ಯೂಜಿ ಕಮಿಟಿ’ ದೇಶದಲ್ಲಿ ಕಾರ್ಯನಿರ್ವಹಿಸುವುದನ್ನು ನಿಷೇಧಿಸಿ ಸರಕಾರ ಆದೇಶಿಸಿತ್ತು.

ವಿಶ್ವಸಂಸ್ಥೆ ಅಧಿಕಾರಿಗಳ ಉಚ್ಚಾಟನೆ
   
ದೇಶದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ 7 ಹಿರಿಯ ಅಧಿಕಾರಿಗಳನ್ನು ದೇಶ ಬಿಟ್ಟು ತೆರಳುವಂತೆ ಸೂಚಿಸಲಾಗಿದೆ ಎಂದು ಇಥಿಯೋಪಿಯಾ ಸರಕಾರ ಗುರುವಾರ ಘೋಷಿಸಿದೆ. ವಿಶ್ವಸಂಸ್ಥೆಯ ಮಕ್ಕಳ ಸಂಘಟನೆ( ಯುನಿಸೆಫ್) ಮತ್ತು ಮಾನವೀಯ ನೆರವಿನ ಸಮನ್ವಯ ಕಾರ್ಯಾಲಯದ ಸ್ಥಳೀಯ ಮುಖ್ಯಸ್ಥರು ಇದರಲ್ಲಿ ಒಳಗೊಂಡಿದ್ದಾರೆ.
72 ಗಂಟೆಯೊಳಗೆ ದೇಶದಿಂದ ಹೊರತೆರಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸರಕಾರಿ ಮೂಲಗಳು ಹೇಳಿವೆ. ಈ ನಿರ್ಧಾರದಿಂದ ಆಘಾತವಾಗಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆ್ಯಂಟೋನಿಯೊ ಗುಟೆರಸ್ ಹೇಳಿದ್ದು, ಈ ವಿಷಯದ ಬಗ್ಗೆ ಚರ್ಚಿಸಲು ವಿಶ್ವಸಂಸ್ಥೆ ಭದ್ರತಾ ಸಮಿತಿಯ ತುರ್ತು ಸಭೆ ಶುಕ್ರವಾರ ನಡೆಯಲಿದೆ ಎಂದಿದ್ದಾರೆ.
=====

share
ವಾರ್ತಾಭಾರತಿ
ವಾರ್ತಾಭಾರತಿ
Next Story
X