Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. "ದುರ್ಬಲರ ರಕ್ಷಣೆ ನಮ್ಮ...

"ದುರ್ಬಲರ ರಕ್ಷಣೆ ನಮ್ಮ ಕರ್ತವ್ಯವಾಗಿದೆ": ಕಾಶ್ಮೀರ ಹೇಳಿಕೆಗಳಿಗೆ ಭಾರತದ ತಿರಸ್ಕಾರಕ್ಕೆ ವಿಶ್ವಸಂಸ್ಥೆ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ1 Oct 2021 11:00 PM IST
share
ದುರ್ಬಲರ ರಕ್ಷಣೆ ನಮ್ಮ ಕರ್ತವ್ಯವಾಗಿದೆ: ಕಾಶ್ಮೀರ ಹೇಳಿಕೆಗಳಿಗೆ ಭಾರತದ ತಿರಸ್ಕಾರಕ್ಕೆ ವಿಶ್ವಸಂಸ್ಥೆ ಪ್ರತಿಕ್ರಿಯೆ

ಹೊಸದಿಲ್ಲಿ,ಅ.1: ಕಾಶ್ಮೀರದಲ್ಲಿ ನಿರ್ಬಂಧಕ ಕ್ರಮಗಳು ಮಾನವ ಹಕ್ಕುಗಳ ಉಲ್ಲಂಘನೆಯಾಗಿ ಪರಿಣಮಿಸಬಹುದು ಮತ್ತು ಇನ್ನಷ್ಟು ಉದ್ವಿಗ್ನತೆ ಹಾಗೂ ಅತೃಪ್ತಿಯನ್ನುಂಟು ಮಾಡಬಹುದು ಎಂಬ ವಿಶ್ವಸಂಸ್ಥೆ ಮಾನವ ಹಕ್ಕುಗಳ ಮುಖ್ಯಸ್ಥರ ಹೇಳಿಕೆಗೆ ಭಾರತದ ತಿರಸ್ಕಾರಕ್ಕೆ ಪ್ರತಿಕ್ರಿಯಿಸಿರುವ ಅವರ ಕಚೇರಿಯು ದುರ್ಬಲರ ರಕ್ಷಣೆ ತನ್ನ ಕರ್ತವ್ಯವಾಗಿದೆ ಎಂದು ಹೇಳಿದೆ. ಕಾಶ್ಮೀರದಲ್ಲಿ ಅಕ್ರಮ ಚಟುವಟಿಕೆಗಳಿಗೆ ತಡೆ ಕಾಯ್ದೆ (ಯುಎಪಿಎ)ಯ ಬಳಕೆ ಮತ್ತು ಪದೇ ಪದೇ ಸಂವಹನ ಸೇವೆಯ ಸ್ಥಗಿತ ಕಳವಳಕಾರಿಯಾಗಿವೆ ಎಂದು ಮಾನವ ಹಕ್ಕುಗಳಿಗಾಗಿ ವಿಶ್ವಸಂಸ್ಥೆಯ ರಾಯಭಾರಿ ಮಿಷೆಲ್ ಬ್ಯಾಚಲೆಟ್ ಅವರು ಬಣ್ಣಿಸಿದ್ದರು.

ಗುರುವಾರ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಬ್ಯಾಚಲೆಟ್ ಅವರ ನ್ಯೂಯಾರ್ಕ್ ಕಚೇರಿಯ ನಿರ್ದೇಶಕ ಕ್ರೇಗ್ ಮೊಖಿಬೆರ್ ಅವರು,‘ನಾವೆಂದೂ ಕಾಶ್ಮೀರ ಕುರಿತಂತೆ ಭಾರತ ಅಥವಾ ಪಾಕಿಸ್ತಾನವನ್ನು ಬೆಂಬಲಿಸುವುದಿಲ್ಲ. ಆದರೆ ದುರ್ಬಲರ ರಕ್ಷಣೆ ಮತ್ತು ಸಂತ್ರಸ್ತರ ಅಹವಾಲುಗಳನ್ನು ಆಲಿಸುವುದು ನಮ್ಮ ಕರ್ತವ್ಯವಾಗಿದೆ ’ಎಂದು ಹೇಳಿದರು. ಬ್ಯಾಚಲೆಟ್ ಅವರ ಹೇಳಿಕೆಗಳು ಅನಗತ್ಯವಾಗಿದ್ದು,ವಾಸ್ತವ ಸ್ಥಿತಿಯನ್ನು ಪ್ರತಿಫಲಿಸುವುದಿಲ್ಲ ಎಂದು ಭಾರತವು ಇತ್ತೀಚಿಗೆ ಹೇಳಿತ್ತು.
‘ವಿಶ್ವಸಂಸ್ಥೆಯ ವಿಕಾಸದೊಂದಿಗೆ ಸ್ಥಾನ ಕಳೆದುಕೊಂಡಿರುವ ಸಾರ್ವಭೌಮತೆಯ ಹಳೆಯ ಕಲ್ಪನೆಯೊಂದಿದೆ. ನಮ್ಮ ಗಡಿಗಳಲ್ಲಿ ಸಂಭವಿಸುವ ಏನೇ ಆದರೂ ಅದು ನಮ್ಮ ಸರಕಾರಕ್ಕೆ ಬಿಟ್ಟಿದ್ದು ಮತ್ತು ಅದರಲ್ಲಿ ಬೇರೆ ಯಾರೂ ಮೂಗು ತೂರಿಸುವಂತಿಲ್ಲ ಎನ್ನುವುದು ಈ ಹಳೆಯ ಕಲ್ಪನೆಯಾಗಿದೆ. ವಿಶ್ವಸಂಸ್ಥೆಯ ಸನದು ಅದರ ಸದಸ್ಯತ್ವ ಹೊಂದಿರುವ ಪ್ರತಿಯೊಂದೂ ದೇಶವನ್ನು ಬದ್ಧ ಒಪ್ಪಂದ,ಬದ್ಧ ಕಾನೂನಿಗೆ ಒಳಪಡಿಸಿದೆ. ಅದು ಎಲ್ಲ ಸದಸ್ಯರಾಷ್ಟ್ರಗಳಿಗೆ ಮಾನವ ಹಕ್ಕುಗಳನ್ನು ಅಂತರರಾಷ್ಟ್ರೀಯಗೊಳಿಸಿದೆ ಎಂದು ಹೇಳಿದ ಮೊಖಿಬೆರ್,ಅದು ಸರಕಾರದ ಹೊಣೆಗಾರಿಕೆಯಾಗಿದೆ. ಸಾರ್ವಭೌಮತೆಯನ್ನು ಪ್ರತಿಪಾದಿಸಲು ದೇಶಾದ್ಯಂತ ನಿಮ್ಮ ಜನರಿಗೆ ಸ್ವಾತಂತ್ರ್ಯ ದೊರಕಿರುವುದನ್ನು ನೀವು ಖಚಿತಪಡಿಸಿಕೊಳ್ಳಬೇಕಾಗುತ್ತದೆ’ ಎಂದರು.
ಭಾರತ ಮತ್ತು ಪಾಕಿಸ್ತಾನಗಳ ನಡುವಿನ ಉದ್ವಿಗ್ನತೆಗಳು ಮತ್ತು ಅಂತರರಾಷ್ಟ್ರೀಯ ಸಮುದಾಯದಲ್ಲಿ ಪ್ರತಿಯೊಂದೂ ರಾಷ್ಟ್ರವು ಪಾತ್ರವನ್ನು ಹೊಂದಿರುವುದರಿಂದ ಕಾಶ್ಮೀರವು ಕಠಿಣ ವಿಷಯವಾಗಿದೆ ಎಂದು ಅವರು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X