Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅ.4ರಂದು ಬಂಟ್ವಾಳದಲ್ಲಿ ರಾಜ್ಯ ಮಟ್ಟದ...

ಅ.4ರಂದು ಬಂಟ್ವಾಳದಲ್ಲಿ ರಾಜ್ಯ ಮಟ್ಟದ 'ಅಂತ್ಯೋದಯ' ಮಾಹಿತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ2 Oct 2021 7:06 PM IST
share
ಅ.4ರಂದು ಬಂಟ್ವಾಳದಲ್ಲಿ ರಾಜ್ಯ ಮಟ್ಟದ ಅಂತ್ಯೋದಯ ಮಾಹಿತಿ ಕಾರ್ಯಾಗಾರ

ಬಂಟ್ವಾಳ, ಅ.2: ದ.ಕ. ಜಿಲ್ಲಾಡಳಿತ, ದ.ಕ. ಜಿ.ಪಂ., ಸಮಾಜ ಕಲ್ಯಾಣ, ಹಿ.ವರ್ಗಗಳ ಕಲ್ಯಾಣ ಹಾಗೂ ಪ.ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅ.4ರಂದು ಬ್ರಹ್ಮರಕೊಟ್ಲುವಿನಲ್ಲಿರುವ ಬಂಟವಾಳದ ಬಂಟರ ಭವನದಲ್ಲಿ ನಡೆಯಲಿರುವ 'ಅಂತ್ಯೋದಯ' ಇಲಾಖೆಗಳ ವಿವಿಧ ಯೋಜನೆಗಳ ರಾಜ್ಯಮಟ್ಟದ ಮಾಹಿತಿ ಕಾರ್ಯಾಗಾರದ ವ್ಯವಸ್ಥೆಯ ಹಿನ್ನೆಲೆಯಲ್ಲಿ ಸಮಾಜಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಶನಿವಾರ ಪೂರ್ವ ಸಿದ್ದತೆಯನ್ನು ಪರಿಶೀಲಿಸಿದರು. 

ಬಳಿಕ ವಿವಿಧ ಇಲಾಖೆಯ ಅಧಿಕಾರಗಳೊಂದಿಗೆ ಕಾರ್ಯಕ್ರಮದ ಕುರಿತಂತೆ ಸಮಾಲೋಚನೆ ನಡೆಸಿದ ಸಚಿವರು ಕೆಲವೊಂದು ಸಲಹೆ, ಸೂಚನೆಗಳನ್ನಿತ್ತರು. 

ನಮ್ಮ ಇಲಾಖೆಯ ಯೋಜನೆಗಳನ್ನು ಸಾರ್ವಜನಿಕವಾಗಿ ಸದಸ್ಯರಿಗೆ ಅರಿವು ಮೂಡಿಸುವ ಮೂಲಕ ಗ್ರಾಮದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಲು ಸಾಧ್ಯವಾಗುತ್ತಿದ್ದು, ಈ ನಿಟ್ಡಿನಲ್ಲಿ ಇಲಾಖಾ ಅಧಿಕಾರಿಗಳ ಸಹಿತ ಸಿಬ್ಬಂದಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವಂತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೂಚಿಸಿದರು. 

ರಾಜ್ಯದ ಎಲ್ಲಾ ಜಿಲ್ಲೆಯಲ್ಲು ಗ್ರಾ.ಪಂ., ನಗರಸ್ಥಳೀಯಾಡಳಿತ ಸದಸ್ಯರಿಗೆ ಅಂತ್ಯೋದಯ ಮಾಹಿತಿ ಕಾರ್ಯಾಗಾರ ನಡೆಸಲು ಚಿಂತಿಸಲಾಗಿದ್ದು, ಈ ತಿಂಗಳ ಅಂತ್ಯದೊಳಗೆ ಶಿವಮೊಗ್ಗ, ಮಡಿಕೇರಿ, ಚಿಕ್ಕಮಗಳೂರು ಸಹಿತ 10 ಜಿಲ್ಲೆಗಳಲ್ಲಿ‌ ಕಾರ್ಯಾಗಾರ ನಡೆಸಲುದ್ದೇಶಿಸಲಾಗಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು. 

ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಅವರಿಂದ ಉದ್ಘಾಟನೆಯಾದ ಬಳಿಕ ಎಂಟು ಮಂದಿ ಫಲಾನುಭವಿಗಳಿಗೆ ಗೌರವಾರ್ಪಣೆ, ಇಲಾಖೆಯ ಯೋಜನೆಗಳ ಬಗ್ಗೆ ಹಿರಿಯ ಅಧಿಕಾರಿಗಳಿಂದ ಮಾಹಿತಿ ಕಾರ್ಯಾಗಾರ ನಡೆಯಲಿದ್ದು, ಮಧ್ಯಾಹ್ನದ ನಂತರ ಸಂವಾದ ಕಾರ್ಯಕ್ರಮ ನಡೆಯುವುದು. ಈ ದೆಸೆಯಲ್ಲಿ ಮಾಡಿಕೊಳ್ಳಲಾದ ಸಿದ್ದತೆಯ ಬಗ್ಗೆ ದ.ಕ. ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ. ಯೋಗೀಶ್ ಎಸ್.ಬಿ.ಅವರು ಮಾಹಿತಿ ನೀಡಿದರು. 

ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಶ್ರೀರಾಮಲು, ಎಸ್.ಅಂಗಾರ, ಜಿಲ್ಲೆಯ ಶಾಸಕರು, ವಿ.ಪ.ಸದಸ್ಯರು, ವಿವಿಧ ನಿಗಮ ಮಂಡಳಿ ಅಧ್ಯಕ್ಷರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಇಡೀ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ. ಜಿಲ್ಲೆಯ ವಿವಿಧ ತಾಲೂಕಿನಿಂದ ಸುಮಾರು 2,500ಕ್ಕೂ ಅಧಿಕ ಮಂದಿ ಗ್ರಾ.ಪಂ., ನಗರ ಸ್ಥಳೀಯಾಡಳಿತ ಸಂಸ್ಥೆಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಕೋವಿಡ್ ನಿಯಮಾವಳಿಯನ್ನು ಪಾಲಿಸಿಕೊಂಡು ಕಾರ್ಯಾಗಾರವನ್ನು ರೂಪಿಸಲಾಗಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. 

ಈ ಸಂದರ್ಭ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ  ದೇವದಾಸ ಶೆಟ್ಟಿ ಅವರು ಮಾತನಾಡಿ, ಬಂಟ್ವಾಳವನ್ನು ಕೇಂದ್ರೀಕರಿಸಿ ಕಾರ್ಯಾಗಾರ ಆಯೋಜಿಸಿರುವುದಕ್ಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆ ಸಲ್ಲಿಸಿದರಲ್ಲದೆ, ಕಾರ್ಯಕ್ರಮದ ಯಶಸ್ವಿಗೆ ಕಾರ್ಯಕರ್ತರು ಕೂಡ ಪೂರ್ಣವಾಗಿ ಸಹಕರಿಸಲಿದ್ದಾರೆ. ಹಾಗೆಯೇ ಆರೋಗ್ಯ ತಪಾಸಣೆ ದೃಷ್ಟಿಯಿಂದ ಸಕಲ ವ್ಯವಸ್ಥೆಯನ್ನೊಳಗೊಂಡ ಸಂಚಾರಿ ಸಾರಿಗೆ ಐಸಿಯು ಬಸ್ ವ್ಯವಸ್ಥೆಯನ್ನು ಸಭಾಂಗಣದ ಮುಂಭಾಗದಲ್ಲಿ ಕಲ್ಪಿಸಲಾಗುವುದು ಎಂದರು. 

ಮಾಜಿ ಜಿಪಂ ಉಪಾಧ್ಯಕ್ಷ ಸತೀಶ್ ಕುಂಪಲ, ನಿಕಟಪೂರ್ವ ಜಿಪಂ ಸದಸ್ಯ ರವೀಂದ್ರಕಂಬಳಿ, ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ನೋಡಲ್ ಅಧಿಕಾರಿ ಚಂದ್ರನಾಯ್ಕ್, ಹಿ.ವರ್ಗಗಳ ಜಿಲ್ಲಾಧಿಕಾರಿ ಸಚಿನ್ ಕುಮಾರ್, ವಿವಿಧ ಇಲಾಖೆಯ ತಾಲೂಕುಮಟ್ಟದ ಅಧಿಕಾರಿಗಳು‌ ಹಾಜರಿದ್ದರು. 

ತಾಪಂ ಮಾಜಿ ಸದಸ್ಯರಾದ ಸೋಮಪ್ಪ ಕೋಟ್ಯಾನ್, ಗಣೇಶ್ ಸುವರ್ಣ, ದಿನೇಶ್ ಅಮ್ಟೂರು, ಬಿಜೆಪಿ ಮಂಡಲ ಪ್ರ.ಕಾರ್ಯದರ್ಶಿಗಳಾದ ಡೊಂಬಯ‌ ಅರಳ, ರವೀಶ್ ಶೆಟ್ಟಿ ಕರ್ಕಳ, ಪ್ರಮುಖರಾದ ಪ್ರದೀಪ್ ಅಜ್ಜಿಬೆಟ್ಟು, ಸೀತಾರಾಮ ಪೂಜಾರಿ, ಪವನ್ ಶೆಟ್ಟಿ ಮೊದಲಾದವರಿದ್ದರು. 

ಸಾಮರಸ್ಯ ಅಭಿಯಾನ

ಕೊಪ್ಪಳದಲ್ಲಿ ಈಚೆಗೆ ನಡೆದ ಘಟನೆ ಮತ್ತೆ ಮರಕಳಿಸದಂತೆ ಮತ್ತು ಅಸ್ಪ್ರಶ್ಯತೆಯ ನಿವಾರಣೆಯ ಹಿನ್ನೆಲೆಯಲ್ಲಿ ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ‌ ಸಾಧುಸಂತರನ್ನು ಸೇರಿಸಿಕೊಂಡು ಸಾಮರಸ್ಯ ಅಭಿಯಾನವನ್ನು ಇಲಾಖೆಯ ಮೂಲಕ ಹಮ್ಮಿಕೊಳ್ಳುವ ಚಿಂತನೆ ಇದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X