Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ...

ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಅಧಿಕೃತವಾಗಿ ಅಸ್ತಿತ್ವಕ್ಕೆ

ವಾರ್ತಾಭಾರತಿವಾರ್ತಾಭಾರತಿ2 Oct 2021 8:38 PM IST
share
ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ  ಅಧಿಕೃತವಾಗಿ ಅಸ್ತಿತ್ವಕ್ಕೆ

ಬಳ್ಳಾರಿ:ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಯನ್ನು ಇಲ್ಲಿನ ಹೊಸಪೇಟೆಯ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. 

ಬಳ್ಳಾರಿ ಜಿಲ್ಲೆಯಲ್ಲಿ 11 ತಾಲೂಕುಗಳು ಮತ್ತು ಮೂರು ಕಂದಾಯ ಉಪವಿಭಾಗಳಿದ್ದವು. ಸದ್ಯ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ರಚಿಸಿರುವ ಕಾರಣ ಆರು ತಾಲೂಕುಗಳು ಹೊಸಪೇಟೆ, ಕೂಡ್ಲಿಗಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ ಮತ್ತು ಹರಪನಹಳ್ಳಿ ಹೊಸ ಜಿಲ್ಲೆಗೆ ಸೇರ್ಪಡೆಯಾಗಿದೆ. ವಿಜಯನಗರ ಜಿಲ್ಲೆಗೆ ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದೆ.

ಹೀಗಾಗಿ ಬಳ್ಳಾರಿ ಜಿಲ್ಲೆಯಲ್ಲಿ ಸದ್ಯ ಐದು ತಾಲೂಕುಗಳು ಉಳಿದಿವೆ. ಬಳ್ಳಾರಿ, ಸಿರಗುಪ್ಪ, ಸಂಡೂರು, ಕಂಪ್ಲಿ ಮತ್ತು ಕುರಗೋಡು ತಾಲೂಕುಗಳು ಬಳ್ಳಾರಿ ಜಿಲ್ಲೆಯಯಲ್ಲಿ ಮುಂದುವರಿಯಲಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರು, ಶಾಸಕರು, ಮಠಾಧೀಶರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ವಿಜಯನಗರ ಜಿಲ್ಲೆಯ ವಿಜಯಸ್ತಂಭವನ್ನು ಅನಾವರಣಗೊಳಿಸಲಾಗಿದೆ.

ಮರುಕಳಿಸಿದ ವಿಜಯನಗರ ವೈಭವ; ನಾಡಿನ 80ಕ್ಕೂ ಹೆಚ್ಚು ಕಲಾತಂಡಗಳು ಭಾಗಿ
► ನಾಡಿನ ವೈವಿಧ್ಯಮಯ ಕಲೆ ಅನಾವರಣ

ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭದ ನಿಮಿತ್ತ ವಡಕರಾಯ ದೇವಸ್ಥಾನದಿಂದ ರಥಬೀದಿಯಲ್ಲಿ ನಡೆದ ವಿಜಯನಗರ ವೈಭವ ಮೆರವಣಿಗೆಯು ನಾಡಿನ ವೈವಿಧ್ಯಮಯ ಕಲೆಯನ್ನು ಅನಾವರಣಗೊಳಿಸಿತು;ಇದರ ಜೊತೆಗೆ ವಿಜಯನಗರ ಅರಸರ ದರ್ಬಾರ್ ಕೂಡ ನೆನಪಿಸಿತು.

ವಡಕರಾಯ ದೇವಸ್ಥಾನದಿಂದ ಆರಂಭವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ವಿಜಯನಗರ ವೈಭವ ಕಾರ್ಯಕ್ರಮ ನಡೆಯಿತು. ಸ್ಥಳೀಯ ಕಲಾವಿದರು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ 80 ಕಲಾತಂಡಗಳ ಕಲಾವಿದರು ಈ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಪೂಜಾಕುಣಿತ, ಪಟಕುಣಿತ, ಗೊಂಬೆಕುಣಿತ, ಚಿಟ್ಟೆ ಮೇಳ, ಚಂಡಿವಾದ್ಯ, ಮಹಿಳಾ ಕಾಳಿ ಕುಣಿತ, ಮಹಿಳಾ ವೀರಗಾಸೆ, ನಗಾರಿ ವಾದ್ಯ, ಕಂಸಾಳೆ, ಜಗ್ಗಲಗಿ ಕುಣಿತ, ಡೊಳ್ಳು ಕುಣಿತ, ಕರಡಿ ಮಜಲು, ಹುಲಿವೇಷ, ಝಾಂಜ್ ಮೇಳ, ನವಿಲು ಕುಣಿತ, ತಾಷರಂಡೋಲ್, ಹಲಗೆ ವಾದನ, ವೀರಗಾಸೆ, ನಾದಸ್ವರ ವಾದನ, ಕಹಳೆ ವಾದನ, ಹಗಲುವೇಷಗಾರಿಕೆ, ಬೇಡರ ವೇಷ, ಉರುಮೆ ವಾದ್ಯ, ಕೋಲಾಟ, ಗೊರವರಕುಣಿತ ಸೇರಿದಂತೆ ವಿವಿಧ ಕಲಾ ಪ್ರಕಾರಗಳನ್ನು ಕಲಾವಿದರು ಪ್ರದರ್ಶಿಸಿದರು.

ಈ ಕಲಾತಂಡಗಳ ಜೊತೆಗೆ ಆಳ್ವಾಸ್ ಸಂಸ್ಥೆಯ 25 ಜನಕಲಾವಿದರು ಭಾಗವಹಿಸಿ ತಮ್ಮ ಕಲಾ ಪ್ರತಿಭೆಯನ್ನು ಮೆರವಣಿಗೆಯಲ್ಲಿ ಪ್ರದರ್ಶಿಸಿದರು.

ಈ ಮೆರವಣಿಗೆಯಲ್ಲಿ ತೆರೆದ ವಾಹನದಲ್ಲಿ ಸಿಂಗರಿಸಿದ ನಾಡದೇವತೆ ಭುವನೇಶ್ವರಿ ಮೂರ್ತಿ ಗಮನಸೆಳೆಯಿತು. ಇನ್ನೊಂದು ತೆರೆದ ವಾಹನದಲ್ಲಿ ವಿಜಯನಗರ ಸಾಮ್ರಾಜ್ಯದ ಶ್ರೇಷ್ಠ ಅರಸ ಶ್ರೀಕೃಷ್ಣದೇವರಾಯ ಮತ್ತು ಅವರ ದರ್ಬಾರ್(ಆಸ್ಥಾನ ಕವಿಗಳು),ವಿದ್ಯಾರಣ್ಯ ಶ್ರೀಗಳು ಹಾಗೂ ಇನ್ನೀತರ ಪ್ರಮುಖರ ವೇಷಧಾರಿಗಳು ಗಮನಸೆಳದರು.

ವಿಜಯನಗರ ಜಿಲ್ಲೆ ರಚನೆ ಯಶಸ್ವಿ: ಬೃಹತ್ ಕುಂಡದಲ್ಲಿ ವಿವಿಧ ತಾಲೂಕುಗಳ ಜ್ಯೋತಿ ಪ್ರಜ್ವಲನ

ವಿಜಯನಗರ ಜಿಲ್ಲಾ ಉತ್ಸವ ಮತ್ತು ವಿಜಯನಗರ ಜಿಲ್ಲಾ ಉದ್ಘಾಟನಾ ಅಂಗವಾಗಿ ವಿಜಯನಗರ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಹೊತ್ತುತಂದ ಜ್ಯೋತಿಗಳನ್ನು ಹಕ್ಕಬುಕ್ಕ ಮಹಾದ್ವಾರದ ಬಳಿ ಪ್ರತಿಷ್ಠಾಪಿಸಲಾಗಿರುವ ಶ್ರೀಕೃಷ್ಣದೇವರಾಯ ಪ್ರತಿಮೆ ಬಳಿಯ ಕುಂಡದಲ್ಲಿ ಜ್ಯೋತಿ ಪ್ರಜ್ವಲಿಸಲಾಯಿತು.

ವಿಜಯನಗರ ಜಿಲ್ಲೆಯ ಹೊಸಪೇಟೆ,ಕೂಡ್ಲಿಗಿ,ಹಗರಿಬೊಮ್ಮನಹಳ್ಳಿ,ಹಡಗಲಿ,ಹರಪನಹಳ್ಳಿ, ಕೊಟ್ಟೂರು ತಾಲೂಕುಗಳಿಂದ ತಾಲೂಕಾಡಳಿತ ಹಾಗೂ ತಾಲೂಕು ಹೋರಾಟಗಾರರು ಜೊತೆಗೂಡಿ ಹೊತ್ತು ತಂದ ಜ್ಯೋತಿಗಳನ್ನು ಶ್ರೀಕೃಷ್ಣದೇವರಾಯ ಪ್ರತಿಮೆ ಬಳಿಯ ಕುಂಡದಲ್ಲಿ ಜ್ಯೋತಿ ಪ್ರಜ್ವಲಿಸಲಾಯಿತು. ಪ್ರವಾಸೋದ್ಯಮ,ಪರಿಸರ ಹಾಗೂ ಜೀವಿಶಾಸ್ತ್ರ ಹಾಗೂ ಅವಳಿ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ವಿವಿಧ ತಾಲೂಕುಗಳ ಜ್ಯೋತಿಗಳನ್ನು ಬೃಹತ್ ಕುಂಡದಲ್ಲಿ ಪ್ರಜ್ವಲಿಸಿ ಹೋರಾಟಗಾರರೊಂದಿಗೆ ಖುಷಿ ಹಂಚಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X