ಉಡುಪಿ: ಜಿಲ್ಲಾ ಕಾಂಗ್ರೆಸ್ನಿಂದ ಗಾಂಧಿ, ಶಾಸ್ತ್ರಿ ಜನ್ಮದಿನಾಚರಣೆ

ಉಡುಪಿ, ಅ.2: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯು ಇಂದು ಕಾಂಗ್ರೆಸ್ ಭವನದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಮತ್ತು ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ವತಿಯಿಂದ ಜರಗಿತು.
ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ಕುಮಾರ್ ಕೊಡವೂರು, ಮಹಾತ್ಮಾ ಗಾಂಧಿ ಅವರ ತತ್ವಾದರ್ಶಗಳನ್ನು ಓರ್ವ ವ್ಯಕ್ತಿ, ಒಂದು ಸಂಸ್ಥೆ, ಒಂದು ಪಕ್ಷ ಪಾಲಿಸಿಕೊಂಡು ಬಂದರೆ ಅದೊಂದು ದೊಡ್ಡ ಸಾಧನೆ ಎಂದರು.
ವಾಗ್ಮಿ, ಚಿಂತಕ, ಬರಹಗಾರ ಕೆಂಚನೂರು ಪ್ರದೀಪ್ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೈ ಜವಾನ್ ಜೈ ಕಿಸಾನ್ ಘೋಷಣೆಯಂತೆ ಮಾಜಿ ಯೋಧ ಬಾಲಕೃಷ್ಣ ಭಂಡಾರಿ ಎಲ್ಲೂರು ಹಾಗೂ ಪ್ರಗತಿಶೀಲ ಮಾದರಿ ಕೃಷಿಕ ಸತೀಶ್ ಶೆಟ್ಟೆ ಯಡ್ತಾಡಿ ಇವನ್ನು ಸನ್ಮಾನಿಸಿ, ಗೌರವಿಸಲಾಯಿತು.
ಹೊಸದಾಗಿ ಆಯ್ಕೆಯಾದ ಕಿಸಾನ್ ಕಾಂಗ್ರೆಸ್ ಪದಾಧಿಕಾರಿಗಳಿಗೆ ಪದಗ್ರಹಣ ನಡೆಯಿತು. ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಶೆಟ್ಟಿ ಎಲ್ಲೂರು ಸ್ವಾಗತಿಸಿ, ಉಪಾಧ್ಯಕ್ಷ ಶೇಖರ್ ಕೆ. ಕೋಟ್ಯಾನ್ ವಂದಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಅಣ್ಣಯ್ಯ ಸೇರಿಗಾರ್ ಮತ್ತು ಜ್ಯೋತಿ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ದಿನೇಶ್ ಪುತ್ರನ್, ನವೀನ್ಚಂದ್ರ ಜೆ. ಶೆಟ್ಟಿ, ಹರೀಶ್ ಕಿಣಿ, ಬಿ. ನರಸಿಂಹ ಮೂರ್ತಿ, ನೀರೆ ಕೃಷ್ಣ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಕುಶಲ್ ಶೆಟ್ಟಿ ಇಂದ್ರಾಳಿ, ಪ್ರಶಾಂತ್ ಜತ್ತನ್ನ, ಕೇಶವ ಕೋಟ್ಯಾನ್, ಹಬೀಬ್ ಆಲಿ, ಬಿಪಿನ್ ಚಂದ್ರಪಾಲ್, ಡಾ. ಸುನೀತಾ ಶೆಟ್ಟಿ, ಭುಜಂಗ ಶೆಟ್ಟಿ, ಇಸ್ಮಾಯಿಲ್ ಆತ್ರಾಡಿ, ಉದ್ಯಾವರ ನಾಗೇಶ್ ಕುಮಾರ್, ವಂ.ವಿಲಿಯಂ ಮಾರ್ಟಿಸ್, ದಿನಕರ್ ಹೇರೂರು, ನವೀನ್ಚಂದ್ರ ಸುವರ್ಣ, ರಮೇಶ್ ಕಾಂಚನ್, ಪ್ರವೀಣ್ ಶೆಟ್ಟಿ, ಕಿಶೋರ್ ಎರ್ಮಾಳ್, ಯತೀಶ್ ಕರ್ಕೇರ, ಚಂದ್ರಿಕಾ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ ಮೊದಲಾದವರು ಉಪಸ್ಥಿತರಿದ್ದರು.







