Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯುವ ಸಮೂಹಕ್ಕೆ ಗಾಂಧಿ ತತ್ವಗಳು...

ಯುವ ಸಮೂಹಕ್ಕೆ ಗಾಂಧಿ ತತ್ವಗಳು ತಲುಪಬೇಕು: ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ

‘500 ಅಡಿ ಉದ್ದದ ತಿರಂಗಾ ಯಾತ್ರೆ ಮೂಲಕ ಗಾಂಧೀಜಿಗೆ ಗೌರವ ಸಮರ್ಪಣೆ’

ವಾರ್ತಾಭಾರತಿವಾರ್ತಾಭಾರತಿ2 Oct 2021 10:11 PM IST
share
ಯುವ ಸಮೂಹಕ್ಕೆ ಗಾಂಧಿ ತತ್ವಗಳು ತಲುಪಬೇಕು: ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ

ಬೆಂಗಳೂರು, ಅ.2: ಗಾಂಧಿ ಜಯಂತಿ ಅಂಗವಾಗಿ ಶನಿವಾರ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ವತಿಯಿಂದ 500 ಅಡಿ ಉದ್ದದ ರಾಷ್ಟ್ರಧ್ವಜದ ಮೂಲಕ ಬೃಹತ್ ತಿರಂಗಾ ಯಾತ್ರೆ ಆಯೋಜಿಸಲಾಗಿತ್ತು.

ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ, ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್.ರಕ್ಷಾ ರಾಮಯ್ಯ ನೇತೃತ್ವದಲ್ಲಿ ನಗರದ ಕಮ್ಮನಹಳ್ಳಿಯ ಜ್ಯೋತಿ ಶಾಲೆಯಿಂದ ಸುಮಾರು ಒಂದು ಕಿಲೋಮೀಟರ್‍ಗೂ ಹೆಚ್ಚು ದೂರ ಶಿಸ್ತುಬದ್ಧವಾಗಿ ತಿರಂಗಾ ಯಾತ್ರೆ ಸಾಗಿತು. ತ್ರಿವರ್ಣ ಧ್ವಜ ಹೊತ್ತ ಯುವ ಕಾಂಗ್ರೆಸ್ ಕಾರ್ಯಕರ್ತರು ದೇಶ ಭಕ್ತಿ ಗೀತೆಯೊಂದಿಗೆ ಹೆಜ್ಜೆ ಹಾಕಿದರು.

ಜವಾಹರ್ ಬಾಲ್ ಮಂಚ್‍ನ ಕಾರ್ಯಕರ್ತರು ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಮಹಾತ್ಮಾಗಾಂಧೀಜಿ ಮತ್ತಿತರ ನಾಯಕರ ಪೋಷಾಕುತೊಟ್ಟ ಶಾಲಾ ವಿದ್ಯಾರ್ಥಿಗಳು ಯುವ ಕಾಂಗ್ರೆಸ್ ಕಾರ್ಯಕರ್ತರ ಜತೆ ಹೆಜ್ಜೆ ಹಾಕಿದರು.

ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧೀಜಿ ಅವರು ತ್ಯಾಗ ಬಲಿದಾನದ ಸಂಕೇತವಾಗಿದ್ದಾರೆ. ಕಾಂಗ್ರೆಸ್‍ನ ಹಲವು ನಾಯಕರು ದೇಶಕ್ಕೆ ಪ್ರಾಣಾರ್ಪಣೆ ಮಾಡಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಒಗ್ಗಟ್ಟಿನಿಂದ ಇರುವ ದೇಶವನ್ನು ವಿಭಜಿಸುವ ಪ್ರಯತ್ನ ಮಾಡುತ್ತಿವೆ. ಇಂತಹ ವಿಭಜಕ ಶಕ್ತಿಗಳಿಗೆ ಕಾಂಗ್ರೆಸ್ ಎಂದೆಂದಿಗೂ ಅವಕಾಶ ನೀಡುವುದಿಲ್ಲ ಎಂದರು.

ಕೋಮು ಶಕ್ತಿಗಳು ಅನಗತ್ಯ ವಿಚಾರಗಳ ಮೂಲಕ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದು, ಗಾಂಧಿ ಜಯಂತಿ ಸಂದರ್ಭದಲ್ಲಿ ಪರಿವಾರದವರ ಮನಸ್ಸಿನಲ್ಲಿರುವ ಕೋಮು ಎಂಬ ಕಲ್ಮಷವನ್ನು ತೊಡೆದು ಹಾಕುವ ಅಗತ್ಯವಿದೆ. ಯುವ ಕಾಂಗ್ರೆಸ್ ಶಾಂತಿಯ ಸಂದೇಶ ಸಾರಲು ಈ ಯಾತ್ರೆ ಹಮ್ಮಿಕೊಂಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೋರಾಟ ಮಾಡುವಾಗ ಹೆದರಬಾರದು ಎಂದು ಸೂಚನೆಯ ನೀಡಿದ್ದಾರೆ. ಇದೇ ತಳಹದಿ ಮೇಲೆ ದೇಶ ಕಟ್ಟುವ ಕೆಲಸ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.

ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್.ರಕ್ಷಾ ರಾಮಯ್ಯ ಮಾತನಾಡಿ, ಇಂದಿನ ಯುವ ಸಮೂಹಕ್ಕೆ ಮಹಾತ್ಮಾ ಗಾಂಧೀಜಿ ಅವರ ತತ್ವ, ಸಿದ್ಧಾಂತ, ಶಾಂತಿ–ಮಂತ್ರಗಳನ್ನು ತಲುಪಿಸುವ ಉದ್ದೇಶದಿಂದ ಈ ಯಾತ್ರೆ ಹಮ್ಮಿಕೊಂಡಿದ್ದೇವೆ. ಯುವ ಸಮೂಹ ಹೆಚ್ಚಿನ ಪ್ರಮಾಣದಲ್ಲಿ ಗಾಂಧೀಜಿ ಅವರ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ತಿರಂಗಾ ಯಾತ್ರೆಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್‍ನ ಜಂಟಿ ಕಾರ್ಯದರ್ಶಿ ಕೃಷ್ಣ ಅಲ್ಲಾವರು, ಕಾರ್ಯದರ್ಶಿ ಸುರಭಿ ದ್ವಿವೇದಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X