Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ ಎಕ್ಸ್‌ಪೋ ತಾಣ ನಿರ್ಮಾಣ ವೇಳೆ 3...

ದುಬೈ ಎಕ್ಸ್‌ಪೋ ತಾಣ ನಿರ್ಮಾಣ ವೇಳೆ 3 ಕಾರ್ಮಿಕರು ಮೃತ್ಯು, 70 ಮಂದಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ3 Oct 2021 9:30 AM IST
share
ದುಬೈ ಎಕ್ಸ್‌ಪೋ ತಾಣ ನಿರ್ಮಾಣ ವೇಳೆ 3 ಕಾರ್ಮಿಕರು ಮೃತ್ಯು, 70 ಮಂದಿಗೆ ಗಾಯ

ದುಬೈ: ದುಬೈ ಎಕ್ಸ್‌ಪೋ-2020 ತಾಣದ ನಿರ್ಮಾಣ ಕಾರ್ಯದಲ್ಲಿ ಮೂವರು ಕಾರ್ಮಿಕರು ಮೃತಪಟ್ಟು 70ಕ್ಕೂ ಅಧಿಕ ಮಂದಿ  ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಪ್ರಕಟಿಸಿದ್ದಾರೆ. ಆದರೆ ಸುರಕ್ಷಾ ಗುಣಮಟ್ಟ ವಿಶ್ವದರ್ಜೆಯದ್ದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಯುನೈಟೆಡ್ ಅರಬ್ ಎಮಿರೇಟ್ಸ್‌ನ ಮಾನವ ಹಕ್ಕು ದಾಖಲೆಗಳು ಮತ್ತು ವಲಸೆ ಕಾರ್ಮಿಕರ ಬಗೆಗಿನ ಅಮಾನವೀಯ ನಡವಳಿಕೆ ಹಿನ್ನೆಲೆಯಲ್ಲಿ ಆರು ತಿಂಗಳ ವಿಶ್ವ ವಸ್ತುಪ್ರದರ್ಶನವನ್ನು ಬಹಿಷ್ಕರಿಸಲು ಯೂರೋಪಿಯನ್ ಸಂಸತ್ತು ಕರೆ ನೀಡಿದ ಬೆನ್ನಲ್ಲೇ ದುರಂತದ ವಿವಗಳನ್ನು ಬಿಡುಗಡೆ ಮಾಡಲಾಗಿದೆ.

ದುಬೈ ನಗರದ ಹೊರವಲಯದಲ್ಲಿ 20 ಸಾವಿರಕ್ಕೂ ಅಧಿಕ ಕಾರ್ಮಿಕರು ಬೃಹತ್ ವಸ್ತುಪ್ರದರ್ಶನ ತಾಣವನ್ನು ನಿರ್ಮಿಸಿದ್ದಾರೆ. ಮೊನಾಕೊ ಗಾತ್ರದ ಎರಡರಷ್ಟಿರುವ ವಸ್ತುಪ್ರದರ್ಶನ ಆವರಣದಲ್ಲಿ ನೂರಾರು ಪೆವಿಲಿಯನ್‌ಗಳು ಮತ್ತು ಸೌಲಭ್ಯಗಳಿವೆ.
ಯುಎಇ ಹಾಗೂ ಮುಂದಿನ ವರ್ಷದ ವಿಶ್ವಕಪ್ ಆತಿಥ್ಯ ವಹಿಸಲಿರುವ ಕತರ್ ಮೇಲೆ ಹಲವು ಚಳವಳಿಕಾರರ ಗುಂಪುಗಳು ಕೆಂಗಣ್ಣು ಬೀರಿದ್ದು, ಬಹುತೇಕ ದಕ್ಷಿಣ ಏಷ್ಯಾದಿಂದ ಆಗಮಿಸಿದ ಕಾರ್ಮಿಕರನ್ನು ನಡೆಸಿಕೊಳ್ಳುತ್ತಿರುವ ಬಗ್ಗೆ ಆಕ್ಷೇಪಗಳು ಕೇಳಿ ಬಂದಿದ್ದವು.

"ದುರಾದೃಷ್ಟವಶಾತ್ ಕಾಮಗಾರಿಯ ವೇಳೆ ಮೂವರು ಕಾರ್ಮಿಕರು ಮೃತಪಟ್ಟಿದ್ದು, 72 ಮಂದಿ ಗಾಯಗೊಂಡಿದ್ದಾರೆ" ಎಂದು ಸಂಯೋಜಕರು ಪ್ರಕಟಿಸಿದ್ದಾರೆ. ಆದರೆ ಕಾರ್ಮಿಕರ ಕಲ್ಯಾಣಕ್ಕೆ ಆದ್ಯತೆ ನೀಡಿರುವುದಾಗಿ ಸಮರ್ಥಿಸಿಕೊಂಡಿದ್ದಾರೆ. 247 ದಶಲಕ್ಷ ಮಾನವ ದಿನಗಳ ಕೆಲಸ ಇಲ್ಲಿ ನಡೆದಿದೆ. ಆದರೆ ಅವಘಡಗಳ ಪ್ರಮಾಣ ಬ್ರಿಟನ್‌ಗಿಂತ ಕಡಿಮೆ ಎಂದು ಹೇಳಿದ್ದಾರೆ.

ದುಬೈ ಎಕ್ಸ್‌ಪೋ- 2020ರಲ್ಲಿ ಸಂಬಂಧ ಪಟ್ಟ ಎಲ್ಲರ ಆರೋಗ್ಯ, ಸುರಕ್ಷತೆ ಮತ್ತು ಕಲ್ಯಾಣದ ದೃಷ್ಟಿಯಿಂದ ವಿಶ್ವದರ್ಜೆಯ ನೀತಿಗಳನ್ನು, ಮಾನದಂಡಗಳನ್ನು ಮತ್ತು ಪ್ರಕ್ರಿಯೆಗಳನ್ನು ಅನುಸರಿಸುತ್ತಿದ್ದೇವೆ ಎಂದು ಹೇಳಿಕೆಯಲ್ಲಿ ವಿವರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X