ಮಡಿಕೇರಿ: ಪ್ರವಾಸಿತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

ರಾಜಾಸೀಟ್ ಉದ್ಯಾನವನ (ಫೈಲ್ ಚಿತ್ರ)
ಮಡಿಕೇರಿ ಅ.3 : ಮಡಿಕೇರಿ ನಗರದ ಪ್ರವಾಸಿತಾಣಗಳಾದ ರಾಜಾಸೀಟ್ ಉದ್ಯಾನವನ, ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯ, ಕೋಟೆ, ಗದ್ದಿಗೆ ಮತ್ತು ನೆಹರು ಮಂಟಪಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಅ.7 ರಿಂದ 17 ರವರೆಗೆ ಪ್ರವಾಸಿಗರು ಈ ಪ್ರವಾಸಿತಾಣಗಳಿಗೆ ಪ್ರವೇಶ ಮಾಡುವಂತ್ತಿಲ್ಲವೆಂದು ಕೊಡಗು ಜಿಲ್ಲಾಡಳಿತ ತಿಳಿಸಿದೆ. ಜಿಲ್ಲೆಯ ಉಳಿದ ಪ್ರವಾಸಿತಾಣಗಳಲ್ಲಿ ಕೋವಿಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮನವಿ ಮಾಡಿದ್ದಾರೆ.
Next Story





