Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುಎಇಗಿಂತ ಮೊದಲು ಭಾರತದಲ್ಲಿ ಹೈಪರ್ ಲೂಪ್...

ಯುಎಇಗಿಂತ ಮೊದಲು ಭಾರತದಲ್ಲಿ ಹೈಪರ್ ಲೂಪ್ ಸಾರಿಗೆ ವ್ಯವಸ್ಥೆ ಆರಂಭದ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ3 Oct 2021 11:05 PM IST
share
ಯುಎಇಗಿಂತ ಮೊದಲು ಭಾರತದಲ್ಲಿ ಹೈಪರ್ ಲೂಪ್ ಸಾರಿಗೆ ವ್ಯವಸ್ಥೆ ಆರಂಭದ ಸಾಧ್ಯತೆ

ದುಬಾ, ಅ.3: ಪ್ರಯಾಣಿಕರು ಮತ್ತು ಸರಕುಗಳಿಗಾಗಿ ಅತೀ ವೇಗದ ನೆಲದ ಮೇಲಿನ ಸಾರಿಗೆ ವ್ಯವಸ್ಥೆಯಾಗಿರುವ ಹೈಪರ್ಲೂಪ್ ಯುಎಇಗಿಂತ ಭಾರತ ಅಥವಾ ಸೌದಿ ಅರೆಬಿಯಾದಲ್ಲಿ ಮೊದಲು ಜಾರಿಗೆ ಬರುವ ಸಾಧ್ಯತೆಯಿದೆ ಎಂದು ಎಮಿರೇಟ್ಸ್ ನ ಬಹುರಾಷ್ಟ್ರೀಯ ಸಾರಿಗೆ ಸಂಸ್ಥೆ ಡಿಪಿ ವರ್ಲ್ಡ್ ಸಿಇಒ ಸುಲ್ತಾನ್ ಅಹ್ಮದ್ ಬಿನ್ ಸುಲೇಮಾನ್ ರವಿವಾರ ಹೇಳಿದ್ದಾರೆ.

ದುಬೈಯಲ್ಲಿ ನಡೆಯುತ್ತಿರುವ 6 ತಿಂಗಳಾವಧಿಯ ಎಕ್ಸ್ಪೋ 2020ರ ನೇಪಥ್ಯದಲ್ಲಿ ಮಾತನಾಡಿದ ಅವರು, ಈ ದಶಕದ ಅಂತ್ಯದೊಳಗೆ ವಿಶ್ವದ ಹಲವೆಡೆ ಅತೀ ವೇಗದ ಸಾರಿಗೆ ವ್ಯವಸ್ಥೆ ವಾಸ್ತವ ರೂಪಕ್ಕೆ ಬರಲಿದೆ . ಇದಕ್ಕೆ ದಶಕಗಳವರೆಗೆ ಕಾಯಬೇಕಿಲ್ಲ, ಕೆಲ ವರ್ಷಗಳಷ್ಟೇ ಉಳಿದಿದೆ ಎಂದರು.
 
ಈಗಿನ ಸಂದರ್ಭಕ್ಕೆ ಅನ್ವಯಿಸಿ ಹೇಳುವುದಾದರೆ ಹೈಪರ್ಲೂಪ್ ಭಾರತ ಅಥವಾ ಸೌದಿ ಅರೆಬಿಯದಲ್ಲಿ ಮೊದಲು ಆರಂಭವಾಗಬಹುದು. ಆರ್ಥಿಕ ಅಭಿವೃದ್ಧಿಯ ಗುರಿ ಇಟ್ಟುಕೊಂಡಿರುವಾಗ , ದೀರ್ಘ ದೂರದವರೆಗೆ ಸರಕು ಸಾಗಿಸಬೇಕಿರುವ ಸಂದರ್ಭ, ವಿಮಾನ ಪ್ರಯಾಣದ ದರದಲ್ಲಿ ಲಾರಿಯ ಸೇವೆ ಬಳಕೆಗೆ ಲಭ್ಯವಾಗುವುದು ಉತ್ತಮ ವ್ಯವಸ್ಥೆಯಾಗಿದೆ ಎಂದರು.

ವರ್ಜಿನ್ ಹೈಪರ್ಲೂಪ್ ಸೇರಿದಂತೆ ಈ ವ್ಯವಸ್ಥೆಯನ್ನು ಹಲವು ಸಂಸ್ಥೆಗಳು ಅಭಿವೃದ್ಧಿಗೊಳಿಸಿವೆ.
  
ಕಡಿಮೆ ಗಾಳಿಯ ಒತ್ತಡವಿರುವ ಟ್ಯೂಬ್ಗಳ ಮೂಲಕ ವಾಹನಗಳು ಗಾಳಿಯ ಪ್ರತಿರೋಧ ಶಕ್ತಿಯಿಂದ ಅಥವಾ ಘರ್ಷಣೆಯಿಂದ ಮುಕ್ತವಾಗಿ ಸಂಚರಿಸುವ ವ್ಯವಸ್ಥೆಯಾಗಿರುವ ಹೈಪರ್ಲೂಪ್ನಲ್ಲಿ ಮನುಷ್ಯನ ಪ್ರಯಾಣವನ್ನು ಕಳೆದ ವರ್ಷದ ನವೆಂಬರ್ನಲ್ಲಿ ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ. ಸರಕು ಅಥವಾ ಮಾನವರ ಪ್ರಯಾಣದ ಅವಧಿಯನ್ನು ಗಣಣೀಯ ಪ್ರಮಾಣದಲ್ಲಿ ಕಡಿಮೆಗೊಳಿಸುವ ಮೂಲಕ ಹೈಪರ್ಲೂಪ್ ಪ್ರಯಾಣ ವ್ಯವಸ್ಥೆಯು ಸಂಸ್ಥೆಗಳ ವೆಚ್ಚವನ್ನು 25% ದಷ್ಟು ಕಡಿಮೆಗೊಳಿಸಲಿದೆ ಎಂದು ಡಿಪಿ ವರ್ಲ್ಡ್ ಸಂಸ್ಥೆ ಹೇಳಿದೆ. ಮಹಾರಾಷ್ಟ್ರದ ಪುಣೆ ಮತ್ತು ನವಿ ಮುಂಬೈ ನಡುವಿನ ಹೈಪರ್ಲೂಪ್ ವ್ಯವಸ್ಥೆ ಶೀಘ್ರ ಆರಂಭವಾಗಲಿದೆ ಎಂದು ವರ್ಜಿನ್ ಹೈಪರ್ಲೂಪ್ ಸಂಸ್ಥೆಯ ರಿಚರ್ಡ್ ಬ್ರಾನ್ಸನ್ ಘೋಷಿಸಿದ್ದರು. ಆದರೆ ಕೊರೋನ ಸೋಂಕಿನ ಸಮಸ್ಯೆ ಈ ಯೋಜನೆಗೆ ಅಡ್ಡಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X