Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಲ್ಪೆ: ಬಲೆಗೆ ಬಿದ್ದ 84 ಕೆ.ಜಿ. ತೂಗುವ...

ಮಲ್ಪೆ: ಬಲೆಗೆ ಬಿದ್ದ 84 ಕೆ.ಜಿ. ತೂಗುವ ಅಪರೂಪದ ಗಿಟಾರ್ ಶಾರ್ಕ್ !

ವಾರ್ತಾಭಾರತಿವಾರ್ತಾಭಾರತಿ4 Oct 2021 7:17 PM IST
share
ಮಲ್ಪೆ: ಬಲೆಗೆ ಬಿದ್ದ 84 ಕೆ.ಜಿ. ತೂಗುವ ಅಪರೂಪದ ಗಿಟಾರ್ ಶಾರ್ಕ್ !

ಮಲ್ಪೆ, ಅ.4: ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಬೋಟಿಗೆ ಅಪರೂಪದ ಹಾಗೂ ಭಾರೀ ಗಾತ್ರದ ಗಿಟಾರ್ ಶಾರ್ಕ್ ಮೀನು ದೊರೆತಿದೆ. ಅಕ್ಕಪಕ್ಕ ಬೆನ್ನ ಮೇಲೆ ಅಗಲ ರೆಕ್ಕೆಯಿರುವ ಈ ಮೀನು ಎಲ್ಲರನ್ನು ನಿಬ್ಬೆರೆಗುಗೊಳಿಸಿದೆ.

ಮಲ್ಪೆ ಬಂದರಿನಿಂದ ಸುಮಾರು 20 ನಾಟೇಕಲ್ ದೂರದಲ್ಲಿರುವ ಸಮುದ್ರ ದಲ್ಲಿ ಲುಕ್ಮನ್ ಎಂಬವರಿಗೆ ಸೇರಿದ ಮೀನುಗಾರಿಕಾ ಬೋಟಿನಲ್ಲಿನ ಮೀನುಗಾರರು ಬೀಸಿದ ಬಲೆಗೆ, ಅಂಜಲ್, ಬಂಗುಡೆ ಮೀನಿನ ಜೊತೆಗೆ ಈ ಮೀನು ಬಿದ್ದಿದೆ. ಸ್ಥಳೀಯವಾಗಿ ಇದಕ್ಕೆ ನೆಮ್ಮೀನ್ ಹಾಗೂ ಹೆಲಿಕಾಪ್ಟರ್ ಫಿಶ್ ಎಂಬುದಾಗಿ ಕರೆಯುತ್ತಾರೆ. ಈ ಮೀನು ಸುಮಾರು 84 ಕೆ.ಜಿ. ತೂಗುತ್ತಿತ್ತು.

ಕರ್ನಾಟಕದಲ್ಲಿ ಈ ಮೀನು ಹೆಚ್ಚಾಗಿ ತಿನ್ನುವುದಿಲ್ಲ. ಕೇರಳಿಗರು ಕೆಜಿಗೆ ಐವತ್ತು ರೂಪಾಯಿ ಕೊಟ್ಟು ಈ ಮೀನಿನ ಮಾಂಸವನ್ನು ಖರೀದಿ ಮಾಡುತ್ತಾರೆ. ಈ ಮೀನನ್ನು ಮಲ್ಪೆಯಿಂದ ಮಂಗಳೂರು ಮೂಲಕ ಕೇರಳಕ್ಕೆ ರವಾನೆ ಮಾಡ ಲಾಯಿತು ಎಂದು ಸ್ಥಳೀಯ ಮೀನುಗಾರರು ತಿಳಿಸಿದರು.

'ಅತ್ಯಂತ ಅಪರೂಪವಾಗಿರುವ ಈ ಮೀನು ಅಳಿವಿನಂಚಿನಲ್ಲಿರುವ ಪ್ರಬೇಧಕ್ಕೆ ಸೇರಿದೆ. ಸಮುದ್ರದಲ್ಲಿ ಎಲ್ಲ ಕಡೆ ಹರಡುಕೊಂಡಿರುವ ಈ ಮೀನು ಮೀನುಗಾರರ ಬಲೆಗೆ ಸಿಗುವುದು ಅಪರೂಪ. ಹವಳ ಬಂಡೆಗಳ ಮಧ್ಯೆ ಇವು ವಾಸಿಸುತ್ತದೆ. 90 ಮೀಟರ್ ಆಳದವರೆಗಿನ ಸಮುದ್ರದಲ್ಲಿ ಇದು ಬದುಕುತ್ತದೆ. ಕೆಲವೊಂದು ಬಾರಿ ತೀರಕ್ಕೂ ಬರುತ್ತದೆ. 2.5 ಮೀಟರ್ಗೂ ಅಧಿಕ ಉದ್ದ ಇರುತ್ತದೆ. ಸುಮಾರು 135 ಕೆ.ಜಿ.ವರೆಗೆ ತೂಗುತ್ತದೆ. ಈ ಮೀನನ್ನು ಭಾರತದಲ್ಲಿ ತಿನ್ನುತ್ತಾರೆ’ ಎಂದು ಕಾರವಾರ ಕರ್ನಾಟಕ ವಿವಿ ಕಡಲ ಜೀವಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಿವಕುಮಾರ್ ಹರಗಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X