Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡ್ರಗ್ಸ್‌ ಪ್ರಕರಣ: ಆರ್ಯನ್‌ ಖಾನ್‌ ಗೆ...

ಡ್ರಗ್ಸ್‌ ಪ್ರಕರಣ: ಆರ್ಯನ್‌ ಖಾನ್‌ ಗೆ ಜಾಮೀನು ನಿರಾಕರಣೆ, ಕಸ್ಟಡಿ ವಿಸ್ತರಣೆ

ವಾರ್ತಾಭಾರತಿವಾರ್ತಾಭಾರತಿ4 Oct 2021 7:33 PM IST
share
ಡ್ರಗ್ಸ್‌ ಪ್ರಕರಣ: ಆರ್ಯನ್‌ ಖಾನ್‌ ಗೆ ಜಾಮೀನು ನಿರಾಕರಣೆ, ಕಸ್ಟಡಿ ವಿಸ್ತರಣೆ

ಮುಂಬೈ,ಅ.4: ವಿಹಾರ ನೌಕೆಯಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಬಂಧಿತ,ನಟ ಶಾರೂಕ್ ಖಾನ್ ಅವರ ಪುತ್ರ ಆರ್ಯನ್ ಖಾನ್(23)ಗೆ ಸೋಮವಾರ ಜಾಮೀನು ನಿರಾಕರಿಸಿರುವ ಇಲ್ಲಿಯ ನ್ಯಾಯಾಲಯವು ಅವರನ್ನು ಗುರುವಾರದವರೆಗೆ ಮಾದಕ ದ್ರವ್ಯ ನಿಯಂತ್ರಣ ಘಟಕ (ಎನ್‌ಸಿಬಿ)ದ ಕಸ್ಟಡಿಗೆ ನೀಡಿದೆ. ಜಾಮೀನು ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಶಾರೂಕ್ ಖಾನ್ ಮತ್ತು ಅವರ ಪತ್ನಿ ಗೌರಿ ಖಾನ್ ಉಪಸ್ಥಿತರಿರಲಿಲ್ಲ.

 ನ್ಯಾಯಾಧೀಶರು ನಿರ್ಧಾರವನ್ನು ಪ್ರಕಟಿಸಿದಾಗ ಆರ್ಯನ್ ಶಾಂತವಾಗಿದ್ದರೆ ಅವರ ಸ್ನೇಹಿತರಾದ ಅರ್ಬಾಜ್ ಮರ್ಚಂಟ್ ಮತ್ತು ಮೂನ್‌ಮೂನ್ ಧಮೇಚಾ ಗದ್ಗದಿತರಾಗಿದ್ದರು.

ಶನಿವಾರ ಸಂಜೆ ಮುಂಬೈನಿಂದ ಗೋವಾಕ್ಕೆ ಸಂಚರಿಸುತ್ತಿದ್ದ ಕೊರ್ಡೆಲಿಯಾ ಕ್ರೂಸ್ ವಿಹಾರ ನೌಕೆಯಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಯ ಮೇಲೆ ದಾಳಿ ನಡೆಸಿ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡು ಆರ್ಯನ್ ಸೇರಿದಂತೆ ಎಂಟು ಜನರನ್ನು ವಶಕ್ಕೆ ತೆಗೆದುಕೊಂಡಿದ್ದ ಎನ್‌ಸಿಬಿ ಅಧಿಕಾರಿಗಳು ರವಿವಾರ ಅವರನ್ನು ಬಂಧಿಸಿದ್ದರು.

ಈ ಪ್ರಕರಣದಲ್ಲಿ ಅಂತರರಾಷ್ಟ್ರೀಯ ಮಾದಕ ದ್ರವ್ಯ ಕೂಟವೊಂದು ಭಾಗಿಯಾಗಿದೆ ಎಂದು ಸೋಮವಾರ ನ್ಯಾಯಾಲಯದಲ್ಲಿ ವಾದಿಸಿದ ಎನ್‌ಸಿಬಿ,ಆರ್ಯನ್‌ರನ್ನು ಪ್ರಶ್ನಿಸಲು ಅ.11ರವರೆಗೆ ಕಸ್ಟಡಿ ಅಗತ್ಯವಾಗಿದೆ ಎಂದು ಹೇಳಿತು.

 ಬಳಕೆದಾರನ ತನಿಖೆ ನಡೆಸದಿದ್ದರೆ ಮಾದಕ ದ್ರವ್ಯಗಳ ಪೂರೈಕೆದಾರರು ಯಾರು,ಅದಕ್ಕೆ ಹಣಕಾಸನ್ನು ಯಾರು ಒದಗಿಸುತ್ತಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳಲು ಸಾಧ್ಯವಾಗುವುದಿಲ್ಲ ಎಂದೂ ಅದು ತಿಳಿಸಿತು.

 ಚಾಟ್ ಇತ್ಯಾದಿ ರೂಪಗಳಲ್ಲಿರುವ ಸಂಪರ್ಕಗಳು ಅಂತರರಾಷ್ಟ್ರೀಯ ಕೂಟವು ಭಾಗಿಯಾಗಿರುವುದನ್ನು ತೋರಿಸುತ್ತಿವೆ. ಅದು ಗ್ಯಾಂಗ್‌ನಂತೆ ವ್ಯಕ್ತಿಗಳ ಗುಂಪಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ ಎನ್‌ಸಿಬಿ ಪರ ವಕೀಲರು,ಆರ್ಯನ್‌ರ ಚಾಟ್‌ಗಳಲ್ಲಿ ಪತ್ತೆಯಾಗಿರುವ ಕೋಡ್ ಹೆಸರುಗಳು ಹಾಗೂ ಬ್ಯಾಂಕ್ ಮತ್ತು ನಗದು ವರ್ಗಾವಣೆಯ ಕೊಂಡಿಗಳನ್ನು ಪರಿಶೀಲಿಸಬೇಕಿದೆ ಎಂದು ಹೇಳಿದರು.

ಆರ್ಯನ್ ಪರ ಹಿರಿಯ ನ್ಯಾಯವಾದಿ ಸತೀಶ ಮಾನಶಿಂಧೆ ಅವರು,ತನ್ನ ಕಕ್ಷಿದಾರರು ವಿಹಾರ ನೌಕೆಯಲ್ಲಿ ಅತಿಥಿಯಾಗಿದ್ದರು ಮತ್ತು ಪ್ರಕರಣದಲ್ಲಿ ವಶಪಡಿಸಿಕೊಳ್ಳಲಾಗಿರುವ ಅಷ್ಟೂ ಮಾದಕ ದ್ರವ್ಯಗಳಿಗೂ ಅವರಿಗೂ ತಳುಕು ಹಾಕುವಂತಿಲ್ಲ. ತನಿಖಾ ತಂಡಕ್ಕೆ ಅವರ ಬ್ಯಾಗಿನಲ್ಲಿ ಹೇಳಿಕೊಳ್ಳುವಂತಹ ಮಾದಕದ್ರವ್ಯ ಸಿಕ್ಕಿಲ್ಲ,ಕೇವಲ ಆರು ಗ್ರಾಂ ಡ್ರಗ್ಸ್ ಪತ್ತೆಯಾಗಿದ್ದು ಇದು ಅತ್ಯಲ್ಪ ಪ್ರಮಾಣವಾಗಿದೆ. ಅಧಿಕಾರಿಗಳು ಅವರ ಪೋನ್‌ನಲ್ಲಿ ವಾಟ್ಸ್‌ಆ್ಯಪ್ ಚಾಟ್‌ಗಳನ್ನು ಮಾತ್ರ ಪತ್ತೆ ಮಾಡಿದ್ದು,ಅವು ಅಂತಹ ಮಹತ್ವವನ್ನು ಹೊಂದಿಲ್ಲ ಎಂದು ವಾದಿಸಿದರು.

ತನ್ನ ಕಕ್ಷಿದಾರರು ತನ್ನ ವಿದೇಶಿ ವಾಸದ ಇಡೀ ಅವಧಿಯಲ್ಲಿ ಎಂದೂ ಮಾದಕ ದ್ರವ್ಯವನ್ನು ಬಳಸಿಲ್ಲ ಎಂದು ತಿಳಿಸಿದ ಮಾನಶಿಂಧೆ,ಇತರ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿರುವ ವಾಣಿಜ್ಯಿಕ ಪ್ರಮಾಣದ ಮಾದಕ ದ್ರವ್ಯ ತನ್ನ ಕಕ್ಷಿದಾರರ ಕಸ್ಟಡಿಯನ್ನು ಕೋರಲು ಒಂದು ಕಾರಣವಾಗಿದೆ. ಇತರರಿಂದ ವಶಪಡಿಸಿಕೊಳ್ಳಲಾದ ವಾಣಿಜ್ಯಿಕ ಪ್ರಮಾಣದ ಮಾದಕ ದ್ರವ್ಯಗಳನ್ನು ತನ್ನ ಕಕ್ಷಿದಾರರ ಮೇಲೆ ಹೇರುವಂತಿಲ್ಲ. ಅವರು(ಎನ್‌ಸಿಬಿ) ಅಂತರರಾಷ್ಟ್ರೀಯ ಮಾದಕ ದ್ರವ್ಯ ಕಳ್ಳ ಸಾಗಣೆಯ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಅತ್ಯಂತ ಗಂಭೀರ ಆರೋಪವಾಗಿದ್ದು,ಇದಕ್ಕೆ ಸಾಕ್ಷಾಧಾರಗಳ ಬೆಂಬಲ ಅಗತ್ಯವಾಗಿದೆ ಎಂದು ವಾದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X