Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈತರ ಮೇಲೆ ಹರಿದ ಕಾರಿನಲ್ಲಿ...

ರೈತರ ಮೇಲೆ ಹರಿದ ಕಾರಿನಲ್ಲಿ ನಾನಿರಲಿಲ್ಲ: ಆಶೀಶ್ ಮಿಶ್ರಾ

ವಾರ್ತಾಭಾರತಿವಾರ್ತಾಭಾರತಿ4 Oct 2021 11:41 PM IST
share
ರೈತರ ಮೇಲೆ ಹರಿದ ಕಾರಿನಲ್ಲಿ ನಾನಿರಲಿಲ್ಲ: ಆಶೀಶ್ ಮಿಶ್ರಾ

ಉತ್ತರಪ್ರದೇಶದ ಲಖೀಂಪುರ ಖೇರಿ ಜಿಲ್ಲೆಯಲ್ಲಿ ಪ್ರತಿಭಟನನಿರತ ರೈತರ ಮೇಲೆ ಹರಿದ ಕಾರೊಂದರಲ್ಲಿ ತಾನು ಇದ್ದೆನೆಂಬ ಆರೋಪಗಳನ್ನು ಕೇಂದ್ರ ಸಹಾಯಕ ಗೃಹ ಸಚಿವ ಅಜಯ್‌ಕುಮಾರ್ ಮಿಶ್ರಾ ಅವರ ಪುತ್ರ ಆಶೀಶ್ ಮಿಶ್ರಾ ನಿರಾಕರಿಸಿದ್ದಾರೆ.

ಬನ್ವಾರಿಪುರ ಗ್ರಾಮದಲ್ಲಿ ತನ್ನ ಪೂರ್ವಿಕರ ಮನೆಯಲ್ಲಿ ಕುಸ್ತಿಪಂದ್ಯವನ್ನು ಆಯೋಜಿಸಲಾಗಿತ್ತು. ರವಿವಾರ ಬೆಳಗ್ಗಿನಿಂದ ಸಂಜೆಯವರೆಗೆ ತಾನು ಅಲ್ಲಿಯೇ ಇದ್ದೆನೆಂದು ಅವರು ಹೇಳಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸಿದ ಆತಿಥಿಗಳನ್ನು ಸ್ವಾಗತಿಸಲು ತಾವು ಎರಡು ಮೂರು ವಾಹನಗಳನ್ನು ಕಳುಹಿಸಿದ್ದು, ಅದರಲ್ಲಿ ತನ್ನ ಮಹೀಂದ್ರಾ ವಾಹನವೂ ಇದ್ದುದಾಗಿ ಅವರು ಹೇಳಿದ್ದಾರೆ.

‘‘ಬೆಂಗಾವಲು ವಾಹನದಲ್ಲಿದ್ದ ಫೋರ್ಚುನರ್ ವಾಹನವು ರೈತರನ್ನು ಕೆಡವಿಹಾಕಿದೆಯೆಂಬುದು ಸರಿಯಲ್ಲ. ನಮ್ಮ ಕಾರ್ಯಕರ್ತರಲ್ಲೊಬ್ಬರು ಉಪಮುಖ್ಯಮಂತ್ರಿಯವರನ್ನು ಸ್ವಾಗತಿಸಲು ತೆರಳಿದ್ದರು. ಮುಂಚೂಣಿಯಲ್ಲಿದ್ದ ಥಾರ್ ಎಸ್‌ಯುವಿ ವಾಹನದ ಮೇಲೆ ದೊಣ್ಣೆಗಳು ಹಾಗೂ ಕಲ್ಲುಗಳಿಂದ ದಾಳಿ ನಡೆಸಲಾಯಿ ಆಗ ಕಾರು ತನ್ನ ಸಮತೋಲನ ಕಳೆದುಕೊಂಡು,ಪಲ್ಟಿ ಹೊಡೆಯಿತು’’ ಎಂದು ಮಿಶ್ರಾ ತಿಳಿಸಿದ್ದಾರೆ.

‘‘ಇಂತಹ ಕೆಲಸಗಳನ್ನು ಮಾಡುವವರನ್ನು ರೈತರು ಎಂದು ಕರೆಯಲು ಸಾಧ್ಯವಿಲ್ಲ. ಭಾರತೀಯ ರೈತರು ಅಷ್ಟೊಂದು ಹೃದಯಹೀನರಲ್ಲ ಹಾಗೂ ಕ್ರೂರಿಗಳಲ್ಲ. ರೈತರ ಸಂಘಟನೆಯ ನಾಯಕತ್ವ ವಹಿಸಿರುವರಲ್ಲಿ ತಪ್ಪಿದೆ. ಇದು ಪ್ರಜಾಸತ್ತಾತ್ಮಕ ದೇಶವಾಗಿದೆ. ಪ್ರತಿಯೊಬ್ಬರಿಗೂ ಶಾಂತಿಯವಾಗಿ ಪ್ರತಿಭಟನೆ ನಡೆಸುವ ಹಕ್ಕಿದೆ ಎಂದು ಅವರು ಹೇಳಿದ್ದಾರೆ.

ಪ್ರತಿಭಟನನಿರತ ರೈತರ ಮೇಲೆ ಮೂರು ಕಾರುಗಳ ಪೈಕಿ ಒಂದನ್ನು ಆಶೀಷ್ ಮಿಶ್ರಾ ಚಲಾಯಿಸುತ್ತಿದ್ದರೆಂದು ರೈತ ನಾಯಕರು ಆರೋಪಿಸಿದ್ದಾರೆ. ಅಶೀಷ್ ಮಿಶ್ರಾ ವಿರುದ್ಧ ಕೊಲೆ ಆರೋಪವನ್ನು ಕೂಡಾ ಹೊರಿಸಲಾಗಿದೆ.

ಲಖೀಂಪುರ ಖೇರಿಗೆ ಕೇಂದ್ರ ಸಚಿವ ಅಜಯ್‌ಕುಮಾರ್ ಮಿಶ್ರಾ ಹಾಗೂ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಭೇಟಿಯನ್ನು ಪ್ರತಿಭಟನಕಾರ ರೈತರು ತಡೆಯಲು ಯತ್ನಿಸಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X