Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮೂವರು ವಿಜ್ಞಾನಿಗಳಿಗೆ ಭೌತಶಾಸ್ತ್ರ...

ಮೂವರು ವಿಜ್ಞಾನಿಗಳಿಗೆ ಭೌತಶಾಸ್ತ್ರ ನೋಬೆಲ್ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ5 Oct 2021 6:59 PM IST
share
ಮೂವರು ವಿಜ್ಞಾನಿಗಳಿಗೆ ಭೌತಶಾಸ್ತ್ರ ನೋಬೆಲ್ ಪ್ರಶಸ್ತಿ

ಸ್ಟಾಕ್ಹೋಂ, ಸೆ. 25: 2021ನೇ ಸಾಲಿನ ಭೌತಶಾಸ್ತ್ರದ ನೊಬೆಲ್ ಪುರಸ್ಕಾರಗಳನ್ನು ಮಂಗಳವಾರ ಘೋಷಿಸಲಾಗಿದ್ದು, ವಿಜ್ಞಾನಿಗಳಾದ ಸಿಯುಕುರೊ ಮನಾಬೆ, ಕ್ಲಾವುಸ್ ಹ್ಯಾಸೆಲ್ಮ್ಯಾನ್ ಹಾಗೂ ಗಿಯೊರ್ಗಿಯೊ ಪಾರ್ಸಿ ಅವರು ಹಂಚಿಕೊಂಡಿದ್ದಾರೆ. ಸಂಕೀರ್ಣವಾದ ಭೌತ ವ್ಯವಸ್ಥೆಗಳ ಕುರಿತ ನಮ್ಮ ತಿಳುವಳಿಕೆಗೆ ಈ ಮೂವರು ನೀಡಿದ ಅಭೂತಪೂರ್ವ ಕೊಡುಗೆಗಾಗಿ ಅವರಿಗೆ ಪುರಸ್ಕಾರ ಸಂದಿದೆ.

ಭೌತ ನೊಬೆಲ್ ಪುರಸ್ಕೃತರಾದ ಸಿಯುಕುರೊ ಮನಾಬೆ ಜಪಾನ್ ಮೂಲದ ಅಮೆರಿಕನ್ ಪ್ರಜೆ. ಕ್ಲಾವುಸ್ ಹ್ಯಾಸೆಲ್ ಮಾನ್ನ್ ಅವರು ಜರ್ಮನಿ ಹಾಗೂ ಗಿಯೊರ್ಗಿಯೊ ಪಾರಿಸಿ ಇಟಲಿಯವರಾಗಿದ್ದಾರೆ.

ಮನಾಬೆ ಅವರ ಸಂಶೋಧನೆಯು ಹಾಲಿ ಹವಾಮಾನ ಮಾದರಿಗಳ ಅಭಿವೃದ್ಧಿಗೆ ಬುನಾದಿ ಹಾಕಿಕೊಟ್ಟಿದೆಯೆಂದು ನೊಬೆಲ್ ಪುರಸ್ಕಾರ ಸಮಿತಿಯು ಹೇಳಿಕೆಯೊಂದರಲ್ಲಿ ತಿಳಿಸಿದೆ. ವಾತಾವರಣದಲ್ಲಿ ಇಂಗಾಲದ ಡಯಾಕ್ಸೈಡ್ ನ ಮಟ್ಟದಲ್ಲಿ ಉಂಟಾಗಿರುವ ಹೆಚ್ಚಳವು ಭೂಮಿಯ ಮೇಲ್ಮೈಯ ತಾಪಮಾನವನ್ನು ಹೇಗೆ ಹೆಚ್ಚಿಸಿದೆಯೆಂಬುದನ್ನು ಮನಾಬೆ ತೋರಿಸಿಕೊಟ್ಟಿದ್ದಾರೆಂದು ಅದು ತಿಳಿಸಿದೆ.

ಇನ್ನೋರ್ವ ನೊಬೆಲ್ ಪುರಸ್ಕೃತ ಹ್ಯಾಸೆಲ್ ಮ್ಯಾನ್ನ್ ಅವರಿಗೆ ಹವಾಮಾನ ಹಾಗೂ ವಾಯುಗುಣದ ನಡುವೆ ಪರಸ್ಪರ ನಂಟಿರುವುದನ್ನು ನಿರೂಪಿಸುವ ಮಾದರಿಯನ್ನು ರೂಪಿಸಿದ್ದಕ್ಕಾಗಿ ಪ್ರಶಸ್ತಿ ದೊರೆತಿದೆ. ವಾತಾವರಣದಲ್ಲಿ ತಾಪಮಾನದ ಹೆಚ್ಚಳಕ್ಕೆ, ಮಾನ ಚಟುವಟಿಕೆಗಳಿಂದ ಇಂಗಾಲದ ಡೈಆಕ್ಸೈಡ್ ಹೊರಸೂಸುತ್ತಿರುವುದೇ ಕಾರಣವೆಂಬುದನ್ನು ಸಾಬೀತುಪಡಿಸಲು ಅವರ ವಿಧಾನಗಳನ್ನು ಬಳಸಿಕೊಳ್ಳಲಾಗಿದೆ’’ ಎಂದು ಸಮಿತಿ ತಿಳಿಸಿದೆ.

ಇನ್ನೋರ್ವ ವಿಜ್ಞಾನಿ ಪಾರಿಸಿ ಅವರಿಗೆ ಅವ್ಯವಸ್ಥಿತವಾದ ಸಂಕೀರ್ಣ ವಸ್ತುಗಳಲ್ಲಿರುವ ಗುಪ್ತವಾದ ನಮೂನೆಗಳನ್ನು ಪತ್ತೆಹಚ್ಚಿದ್ದಕ್ಕಾಗಿ ನೊಬೆಲ್ ಪುರಸ್ಕಾರ ದೊರೆತಿದೆ. ಸಂಕೀರ್ಣ ವ್ಯವಸ್ಥೆಗಳ ಸಿದ್ದಾಂತದಲ್ಲಿ ಅವರ ಸಂಶೋಧನೆಗಳು ಅತ್ಯಂತ ಮಹತ್ವಪೂರ್ಣವಾದ ಕೊಡುಗೆಯನ್ನು ನೀಡಿವೆ’’ ಎಂದು ನೊಎಲ್ ಪುರಸ್ಕಾರ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಶಸ್ತಿ ಮೊತ್ತವು 10 ದಶಲಕ್ಷ ಸ್ವೀಡಿಶ್ ಕ್ರೋನ್ ಆಗಿದ್ದು (1.15 ದಶಲಕ್ಷ ಡಾಲರ್) ಅದರಲ್ಲಿ ಅರ್ಧಪಾಲನ್ನು ಮನಾಬೆ ಹಾಗೂ ಹ್ಯಾಸೆಲ್ ಮ್ಯಾನ್ ಅವರಿಗೆ ಸಮಾನವಾಗಿ ಹಂಚಲಾಗುವುದು. ಉಳಿದ ಅರ್ಧಪಾಲು ಪ್ರಶಸ್ತಿಯ ಹಣವನ್ನು ಪ್ಯಾರಿಸಿ ಅವರಿಗೆ ನೀಡಲಾಗುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X