Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೈನಿಕರನ್ನು ಅವಮಾನಿಸುವವರಿಂದ...

ಸೈನಿಕರನ್ನು ಅವಮಾನಿಸುವವರಿಂದ ಯುಪಿಎಸ್‍ಸಿ ವಿಚಾರದಲ್ಲಿ ಅನುಮಾನ: ಎಚ್ ಡಿಕೆಗೆ ಸಿ.ಟಿ.ರವಿ ತಿರುಗೇಟು

''ಸಂಘದ ಶಾಖೆಗೆ ಬಂದು ಅಧ್ಯಯನ ಮಾಡಿ''

ವಾರ್ತಾಭಾರತಿವಾರ್ತಾಭಾರತಿ5 Oct 2021 4:41 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸೈನಿಕರನ್ನು ಅವಮಾನಿಸುವವರಿಂದ ಯುಪಿಎಸ್‍ಸಿ ವಿಚಾರದಲ್ಲಿ ಅನುಮಾನ: ಎಚ್ ಡಿಕೆಗೆ ಸಿ.ಟಿ.ರವಿ ತಿರುಗೇಟು

ಬೆಂಗಳೂರು: ‘ಕೆಲವರು ಸೈನ್ಯಕ್ಕೆ ಸೇರುವವರು ಹೊಟ್ಟೆ ಪಾಡಿಗಾಗಿ ಸೇರುತ್ತಾರೆʼ ಎಂದು ಮಾಜಿ ಮುಖ್ಯಮಂತ್ರಿಗಳು  ಸೈನಿಕರನ್ನೇ ಅವಮಾನಿಸಿದ್ದರು. ಈ ದೇಶದ ಸೈನಿಕ ಕಷ್ಟಗಳ ಬಗ್ಗೆ ಅವರಿಗೆ ಅರಿವಿಲ್ಲ. ಸೈನಿಕರಲ್ಲಿ ದೇಶ ಭಕ್ತಿಯಿರುತ್ತದೆ ಎಂಬ ಸಾಮಾನ್ಯ ಜ್ಞಾನವೂ ಇಲ್ಲದ ವ್ಯಕ್ತಿಗಳಿಗೆ  ಸವಾಲು ಹಾಕಿ ಕೇಳುತ್ತೇನೆ .ಒಂದು ಕೋಟಿ ರೂಪಾಯಿ ಸಂಬಳ ಕೊಟ್ಟರೂ ಇವರ ಮಕ್ಕಳನ್ನು ಸೇನೆಗೆ ಸೇರಿಸಲಾರರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅವರು ತಿಳಿಸಿದ್ದಾರೆ.

ಆರೆಸ್ಸೆಸ್ ಗೆ ದೇಶ ಶಕ್ತಿಶಾಲಿಯಾಗಬೇಕೆಂಬುದೇ ಅಜೆಂಡ. ಭಾರತ ವಿಶ್ವಗುರುವಾಗಬೇಕು ಎಂಬುದು ಅಜೆಂಡ. ಆರೆಸ್ಸೆಸ್‍ನಲ್ಲಿ ಸ್ವಯಂಸೇವಕರಾದವರು ಜೀವನವನ್ನು ಸಮರ್ಪಣೆ ಮಾಡಿಕೊಂಡು ಕೆಲಸ ಮಾಡುತ್ತಾರೆ. ಯಾರೂ ಸ್ವಾರ್ಥಿಗಳಲ್ಲ. ʼನಾನು ನನ್ನ ಮಕ್ಕಳು, ಮರಿಮಕ್ಕಳುʼ ಈ ರಾಜ್ಯ ದೇಶ ಆಳ್ವಿಕೆ ಮಾಡಬೇಕು ಎಂಬ ಸ್ವಾರ್ಥವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಆರೆಸ್ಸೆಸ್ ನ ಕನಸು ಭಾರತ ಬಲವಾಗಬೇಕು. ಸಮಾಜದಲ್ಲಿರುವ ದೋಷಗಳಾದ ಅಸಮಾನತೆ, ಜಾತೀಯತೆ, ಅಸ್ಪøಶ್ಯತೆ, ಸ್ವಜನಪಕ್ಷಪಾತ ಇದು ದೂರವಾಗಬೇಕು ಎಂದು ಆರೆಸ್ಸೆಸ್ ಬಯಸುತ್ತದೆ. ಕೆಲವರು ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತ, ಭ್ರಷ್ಟಾ ಚಾರವನ್ನು ಹಾಸಿಗೆ ಮಾಡಿಕೊಂಡು ಹೊದ್ದು ಮಲಗಿದವರು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಅನುಮಾನಿಸುತ್ತಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಯಾವ ಆರೆಸ್ಸೆಸ್ ನಾಯಕರಾಗಲಿ, ಕಾರ್ಯಕರ್ತರಾಗಲಿ ಸ್ವಾರ್ಥದ ಬಗ್ಗೆ ಯೋಚನೆ ಮಾಡಿದ್ದಾರೆ ಹೇಳಲಿ? ಅನಾಥಾಶ್ರಮ, ಗುರುಕುಲ, ವಿಶೇಷ ಚೇತನ ಮಕ್ಕಳಿಗೆ ಶಾಲೆಗಳನ್ನೂ ನಡೆಸುವ ಪರಿವಾರ ಸಂಸ್ಥೆಗಳು ಯಾವುದನ್ನೂ ಸ್ವಾರ್ಥಕ್ಕಾಗಿ ಮಾಡುತ್ತಿಲ್ಲ. ನೆರೆ ಹಾವಳಿ,  ಕೊರೊನಾ ಸಮಯದಲ್ಲಿ, ಮಲೆನಾಡಿನಲ್ಲಿ ನಕ್ಸಲರ ಹಾವಳಿ ಇದ್ದಾಗ ಅಲ್ಲಿಯ ಜನರಿಗೆ ನಿಸ್ವಾರ್ಥ ಸೇವೆ ಮಾಡಿ ದೇಶ ಸೇವೆಯ ಬಗ್ಗೆ ಅರಿವು ಮೂಡಿಸಿದ್ದಾರೆ. ಸ್ವಯಂಸೇವಕರಿಗೆ ದೇಶದ ಅಭಿವೃದ್ಧಿಯ ಬಗ್ಗೆ ಚಿಂತೆ ಬಿಟ್ಟರೆ ಅವರಿಗೆ ಬೇರೆ ಯೋಚನೆಗಳೇ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಆರೆಸ್ಸೆಸ್ ಕಾರ್ಯಕರ್ತರಿಗೆ ನಮ್ಮ ಕುಟುಂಬ ಬಲವಾಗಬೇಕು ಎಂಬ ಅಜೆಂಡವಿದೆಯೇ? ಖಂಡಿತ ಇಲ್ಲ. ಅವರು ಸಮರ್ಪಿತ ಬದುಕು ನಡೆಸುತ್ತಿದ್ದಾರೆ. ಪಿಎಚ್‍ಡಿ ಮಾಡಿರುವವರು, ಡಾಕ್ಟರ್‍ಗಳು ಎಂಜಿನಿಯರ್‍ಗಳು ಆರೆಸ್ಸೆಸ್ ಸೇರಿ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಆರೆಸ್ಸೆಸ್ ನೂರಾರು ಶಾಖೆಗಳಿª. ಕ್ರೀಡಾಭಾರತಿ, ವಿದ್ಯಾಭಾರತಿ ಸೇರಿದಂತೆ ನೂರಾರು ಕ್ಷೇತ್ರಗಳಲ್ಲಿ ಕಾರ್ಯಕರ್ತರು ನಿಸ್ವಾರ್ಥತೆಯಿಂದ ಕೆಲಸ ಮಾಡುತ್ತಿದ್ದಾರೆ. ಸ್ವಾರ್ಥಿಗಳಿಗೆ ಇದು ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ತಮ್ಮ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ. 

ʼಆರೆಸ್ಸೆಸ್ ಬಗ್ಗೆ ಅಧ್ಯಯನ ಮಾಡಿದ್ದೇನೆ. ಸಂಘದ ಐಡಿಯಾಲಜಿಗಳ ಬಗ್ಗೆ ನಿರಂತರವಾಗಿ ಓದುತ್ತಿದ್ದೇನೆʼ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರಿಗೆ ಸಂಘದ ಬಗ್ಗೆ ಸಂಪೂರ್ಣ ಜ್ಞಾನ ಕರಗತ ಮಾಡಿಕೊಳ್ಳಬೇಕಾದರೆ ನಿಮ್ಮ ಮನೆಯಲ್ಲಿ ಕುಳಿತು ಸಂಘದ ಬಗ್ಗೆ ಅದರ ಕಾರ್ಯಗಳ ಬಗ್ಗೆ ಓದಿದರೆ ಸಾಲದು. ಆರೆಸ್ಸೆಸ್ ಶಾಖೆಗೆ ಬಂದು ಅಧ್ಯಯನ ಮಾಡಿ ಸಂಶೋಧನೆ ಮಾಡಿ ಆಗ ಸಂಘದ ಧೋರಣೆಗಳು ಏನು ಎಂದು ತಿಳಿಯುತ್ತದೆ ಎಂದು ಸವಾಲೆಸೆದಿದ್ದಾರೆ.

ಆರೆಸ್ಸೆಸ್ ನನಲ್ಲಿ ಯಾವುದೇ ಐಡಿಯಾಲಾಜಿಗಳಿಲ್ಲ. ʼನಾವು  ಸಹ ಹಿಂದೂಗಳೇʼ ಎಂದು ಹೇಳಿರುವ ಕುಮಾರಸ್ವಾಮಿ ಅವರಿಗೆ ಆರೆಸ್ಸೆಸ್ ಹಿಂದುತ್ವದ ಮೇಲೆ ಏಕೆ ಅನುಮಾನ. ಆರೆಸ್ಸೆಸ್ ದೇಶ ಭಕ್ತ ಸಂಘಟನೆಯೇ ವಿನಾ ದೇಶವನ್ನು ಒಡೆಯುವ ಕೆಲಸ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಅಧಿಕಾರಕ್ಕಾಗಿ ಜೋತು ಬೀಳುವ ಪಕ್ಷ ನಮ್ಮದಲ್ಲ. ದೇಶ ಸೇವೆಗಾಗಿ ಸದಾ ಸಿದ್ಧರಿದ್ದೇವೆ.  ಕೆಲವರ ಕೃಪಾಕಟಾಕ್ಷದಿಂದ 1989ರಲ್ಲಿ ಕೆಎಎಸ್‍ನಿಂದ ಐಎಎಸ್‍ಗೆ ಬಡ್ತಿ ಪಡೆದಿದ್ದ ಅಧಿಕಾರಿಯನ್ನು ಕರ್ನಾಟಕ ಲೋಕಸೇವಾ ಆಯೋಗಕ್ಕೆ 2007ರಲ್ಲಿ ನೇಮಿಸಿ  ಕೈಗೊಂಬೆಯನ್ನಾಗಿ ಮಾಡಿಕೊಂಡು ಮಾಡಬಾರದ ಅಕ್ರಮಗಳನ್ನು ಮಾಡಿದ್ದು ನಿಮಗೆ ನೆನಪಿಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

2016ರಲ್ಲಿ ಆರೆಸ್ಸೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರಿಗೆ ತರಬೇತಿ ಕೊಟ್ಟು 676 ಅಭ್ಯರ್ಥಿಗಳು ಐಎಎಸ್, ಐಪಿಎಸ್ ಅಧಿಕಾರಿಗಳಾಗಿದ್ದಾರೆ ಎಂದು ಹೇಳುತ್ತಿದ್ದೀರಲ್ಲ. ಹಾಗಾದರೆ ನೀವು ಸಿಎಂ ಆಗಿದ್ದಾಗ ಕೆಪಿಎಸ್‍ಸಿ ಮೂಲಕ ನೇಮಕವಾಗಿದ್ದ ಎಲ್ಲರೂ ಜೆಡಿಎಸ್ ಕಾರ್ಯಕರ್ತರು ಎಂದು ಒಪ್ಪಿಕೊಳ್ಳುವಿರಾ? ಎಂದು ಕೇಳಿದ್ದಾರೆ. ಭ್ರಷ್ಟರನ್ನು ತಮ್ಮ ಮನೆಯ ಸುತ್ತ ಬೆಳೆಸಿಕೊಂಡು ಬೇರೆಯವರ ಬಗ್ಗೆ ಮಾತನಾಡುವುದು ನಿಮಗೆ ಶೋಭೆ ತರುತ್ತದೆಯೇ ಎಂದು ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.

ರಾಜಕೀಯ ಕಾರಣಕ್ಕಾಗಿ ನೀವು ಆರೆಸ್ಸೆಸ್ ಅನ್ನು ದೂಷಿಸಬೇಡಿ. ಆರೆಸ್ಸೆಸ್ ಬದ್ಧತೆಯ ಬಗ್ಗೆ ಮಾತನಾಡುವ ಮೊದಲು ಸಂಘದ ಶಾಖೆಗೆ ಬಂದು ಇಲ್ಲಿಯ ಸಿದ್ದಾಂತಗಳ ಅಧ್ಯಯನ ಮಾಡಿ. ಆಗ ನಿಮಗೆ ಆರೆಸ್ಸೆಸ್ ಅಂದರೇನು. ಅದರ ಮಹತ್ವ ಏನು ಎಂಬುದು ಅರ್ಥವಾಗಬಹುದು ಎಂದು ತಿಳಿಸಿದ್ದಾರೆ.

ಚುನಾವಣೆ ಬಂದಾಗ ಜನರ ಸಂಕಷ್ಟಗಳು ನಿಮಗೆ ನೆನಪಾಗುವುದು ಹೊಸದೇನಲ್ಲ. ಆರೆಸ್ಸೆಸ್ ಕಾರ್ಯಕರ್ತರು ಸಂಕಷ್ಟದಲ್ಲಿರುವ ಜನರ ಮಧ್ಯೆಯೇ ಬೆಳೆದು ಬಂದವರು. ಹೀಗಾಗಿ ಜನರ ಕಷ್ಟಗಳು, ನೋವುಗಳು ಏನೆಂದು ಅರಿವಿದೆ. ಸೈನಿಕರ ಬಗ್ಗೆ, ಆರೆಸ್ಸೆಸ್ ಕಾರ್ಯಕರ್ತರ ಬಗ್ಗೆ ಮಾತನಾಡುವ ನೈತಿಕತೆಯನ್ನು ಕಳೆದುಕೊಂಡಿರುವ ಅವರಿಗೆ ಮುಂದಿನ ದಿನಗಳಲ್ಲಿ ಜನರೇ ತಕ್ಕ ಉತ್ತರ ಕೊಡಲಿದ್ದಾರೆ ಎಂದು ಸಿ.ಟಿ.ರವಿ ಅವರು ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X