Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಅಪ್ಪಾ,ದಯವಿಟ್ಟು ಬೇಗ ಬನ್ನಿ’:...

‘ಅಪ್ಪಾ,ದಯವಿಟ್ಟು ಬೇಗ ಬನ್ನಿ’: ಆಸ್ಪತ್ರೆಯಲ್ಲಿ ಸಾಯುವ ಸ್ಥಿತಿಯಲ್ಲಿದ್ದ ಉ.ಪ್ರದೇಶದ ಯುವರೈತನ ಮೊರೆ

ವಾರ್ತಾಭಾರತಿವಾರ್ತಾಭಾರತಿ5 Oct 2021 11:25 PM IST
share
‘ಅಪ್ಪಾ,ದಯವಿಟ್ಟು ಬೇಗ ಬನ್ನಿ’: ಆಸ್ಪತ್ರೆಯಲ್ಲಿ ಸಾಯುವ ಸ್ಥಿತಿಯಲ್ಲಿದ್ದ ಉ.ಪ್ರದೇಶದ ಯುವರೈತನ ಮೊರೆ

ಲಖಿಂಪುರ ಖೇರಿ,ಅ.5: ರವಿವಾರ ಉ.ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ತಿಕುನಿಯಾದಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಬಲಿಯಾದ ಲವಪ್ರೀತ್ ಸಿಂಗ್ (19) ತನ್ನ ಕೊನೆಯ ಕ್ಷಣಗಳಲ್ಲಿ ಆಸ್ಪತ್ರೆಯಿಂದ ತನ್ನ ತಂದೆಗೆ ಕರೆ ಮಾಡಿ,ತಕ್ಷಣ ಬರುವಂತೆ ಅವರನ್ನು ಬೇಡಿಕೊಂಡಿದ್ದ.

 ‘ಅವರು ಆತನನ್ನು ಆಸ್ಪತ್ರೆಗೆ ಒಯ್ದಿದ್ದಾಗ ಆತ ನನಗೆ ಕರೆ ಮಾಡಿದ್ದ. ಮಗು,ಹೇಗಿದ್ದಿಯಾ ಎಂದು ನಾನು ಪ್ರಶ್ನಿಸಿದಾಗ,ತಾನು ಚೆನ್ನಾಗಿದ್ದೇನೆ,ಬೇಗ ಬರುತ್ತೇನೆ ಎಂದು ತಿಳಿಸಿದ್ದ. ನಾವು ಮಾರ್ಗಮಧ್ಯದಲ್ಲಿದ್ದೇವೆ ಎಂದು ನಾನು ಆತನಿಗೆ ಹೇಳಿದ್ದೆ. ಆದರೆ ನಾವು ಲಖಿಂಪುರ ಖೇರಿಯನ್ನು ತಲುಪಿದಾಗ ಆತ ಕೊನೆಯುಸಿರೆಳೆದಿದ್ದ’ ಎಂದು ಲವಪ್ರೀತ್ ತಂದೆ ಸತ್ನಾಮ್ ಸಿಂಗ್ ಬಿಕ್ಕುತ್ತಲೇ ತಿಳಿಸಿದರು.

ಕೇಂದ್ರ ಸಹಾಯಕ ಗೃಹಸಚಿವ ಅಜಯ್ ಕುಮಾರ ಮಿಶ್ರಾರ ಭೇಟಿಯ ವಿರುದ್ಧ ಪ್ರತಿಭಟನೆ ಸಂದರ್ಭ ಸಂಭವಿಸಿದ್ದ ಹಿಂಸಾಚಾರದಲ್ಲಿ ಮೃತಪಟ್ಟ ಎಂಟು ಜನರ ಪೈಕಿ ಲವಪ್ರೀತ್ ಮತ್ತು ಇತರ ಮೂವರು ರೈತರು ಸೇರಿದ್ದಾರೆ. ಮಿಶ್ರಾರ ಪುತ್ರ ಆಶಿಷ್ ಮಿಶ್ರಾ ಪ್ರತಿಭಟನಾನಿರತರ ಗುಂಪಿನ ಮೇಲೆ ಕಾರನ್ನು ನುಗ್ಗಿಸಿದ್ದ ಎಂದು ರೈತರು ಆರೋಪಿಸಿದ್ದಾರೆ.

ಮಂಗಳವಾರ ತಮ್ಮ ಪುತ್ರನ ಶವಪೆಟ್ಟಿಗೆಯ ಬಳಿ ರೋದಿಸುತ್ತಿದ್ದ ಲವಪ್ರೀತ್ ನ ಕುಟುಂಬ ಸದಸ್ಯರು ಮರಣೋತ್ತರ ಪರೀಕ್ಷೆ ವರದಿ ಮತ್ತು ಆಶಿಷ್ ಮಿಶ್ರಾ ವಿರುದ್ಧ ಎಫ್ಐಆರ್ನ ಪ್ರತಿಯನ್ನು ತಮಗೆ ನೀಡುವವರೆಗೆ ಶವಸಂಸ್ಕಾರವನ್ನು ನಡೆಸಲು ನಿರಾಕರಿಸಿದರು.

ಭಾರೀ ಸಂಖ್ಯೆಯಲ್ಲಿ ಬಂಧುಗಳು ಮತ್ತು ನೆರೆಕರೆಯವರು ಶವದ ಬಳಿ ಕಾಯುತ್ತ ಕುಳಿತಿದ್ದರು.
‘ನನ್ನ ಮಗನನ್ನು ನಿರ್ದಯವಾಗಿ ಕಾರು ಹರಿಸಿ ಕೊಲ್ಲಲಾಗಿದೆ. ಅವರು ಅದಕ್ಕೆ ಹೊಣೆಗಾರ ವ್ಯಕ್ತಿಯ ವಿರುದ್ಧ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಆಡಳಿತ ಗಟ್ಟಿಧ್ವನಿಯಲ್ಲಿ ಉತ್ತರಿಸುತ್ತಿಲ್ಲ ಎಂದು ಸತ್ನಾಮ್ ಹೇಳಿದರು.


ಲವಪ್ರೀತ್ನ ಶವ ರವಿವಾರದಿಂದ ಗಾಜಿನ ಪೆಟ್ಟಿಗೆಯಲ್ಲಿದ್ದು,ಆತನ ಇಬ್ಬರು ಸೋದರಿಯರು ತಮ್ಮನ ಸಾವಿಗಾಗಿ ನಿರಂತರವಾಗಿ ಶೋಕಿಸುತ್ತಿದ್ದರು.

‘ತಾನು ರೈತರ ಪ್ರತಿಭಟನೆಗೆ ತೆರಳುತ್ತಿರುವುದಾಗಿ ಮಗ ನನಗೆ ತಿಳಿಸಿದ್ದ. ಸಚಿವರಿಗೆ ಕಪ್ಪು ಬಾವುಟಗಳನ್ನು ತೋರಿಸಲಿದ್ದೇವೆ ಎಂದೂ ಹೇಳಿದ್ದ. ಅವರನ್ನು ಹಿಂದಿನಿಂದ ಕಾರನ್ನು ನುಗ್ಗಿಸಿ ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಬಹುಶಃ ಮಿಶ್ರಾರ ಪುತ್ರ ಕಾರನ್ನು ಚಲಾಯಿಸುತ್ತಿದ್ದ ’ಎಂದು ಸಿಂಗ್ ಹೇಳಿದರು.
ರೈತರು ಮತ್ತು ಪೊಲೀಸರ ನಡುವೆ ಗಂಟೆಗಟ್ಟಲೆ ಮಾತುಕತೆಗಳ ಬಳಿಕ ಕೊನೆಗೂ ಮಂಗಳವಾರ ಅಪರಾಹ್ನ ಮೂರು ಗಂಟೆಗೆ ಲವಪ್ರೀತ್ ಅಂತ್ಯಸಂಸ್ಕಾರ ನಡೆದಿದೆ. ಶವವನ್ನು ಗಾಜಿನ ಪೆಟ್ಟಿಗೆಯಿಂದ ಹೊರತೆಗೆದು ಸುಮಾರು 100 ಮೀ.ದೂರದ ಹೊಲದಲ್ಲಿ ಸಿದ್ಧಗೊಳಿಸಿದ್ದ ಚಿತೆಯ ಬಳಿ ಸಾಗಿಸಲಾಗಿತ್ತು.
ತಮ್ಮ ಮನೆಯಿಂದ ಸಮೀಪವೇ ಇದ್ದ ಚಿತೆಗೆ ಸಾಗುವಷ್ಟರಲ್ಲಿ ದುಃಖತಪ್ತರಾಗಿದ್ದ ಲವಪ್ರೀತ್ ತಾಯಿ ಹಲವಾರು ಸಲ ಕುಸಿದು ಬಿದ್ದಿದ್ದರು.

ರೈತರೊಂದಿಗೆ ಮಾತುಕತೆಗಳ ಬಳಿಕ ಗುಂಡೇಟಿನಿಂದ ಸಾವನ್ನಪ್ಪಿದ್ದಾನೆ ಎನ್ನಲಾಗಿರುವ ರೈತನ ಶವವನ್ನು ಎರಡನೇ ಮರಣೋತ್ತರ ಪರೀಕ್ಷೆಗೆ ಕಳುಹಿಸಲು ಪೊಲೀಸರು ಒಪ್ಪಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X