ಅಪಘಾತ: ಗಾಯಾಳು ಯುವಕ ಮೃತ್ಯು
ಮಣಿಪಾಲ, ಅ.6: ಮಣಿಪಾಲ ಮಾಧವ ಕೃಪಾ ಶಾಲೆಯ ಎದುರು ರಾಷ್ಟ್ರೀಯ ಹೆದ್ದಾರಿ 169(ಎ)ರಲ್ಲಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯ ಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಸಂಗಮೇಶ (23) ಎಂದು ಗುರುತಿಸಲಾಗಿದೆ. ಇವರು ಅ.4ರಂದು ಬೆಳಗ್ಗೆ ನಡೆದುಕೊಂಡು ಹೋಗುವಾಗ ಅಪರಿಚಿತ ವಾಹನ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡ ಇವರು, ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





