Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಗಲಭೆ ಪ್ರಕರಣದ ಆರೋಪಿಗಳ...

ದಿಲ್ಲಿ ಗಲಭೆ ಪ್ರಕರಣದ ಆರೋಪಿಗಳ ಗುರುತಿಗೆ ಸಂಬಂಧಿಸಿ ಇಬ್ಬರು ಪೊಲೀಸ್ ಸಿಬ್ಬಂದಿಯ ವ್ಯತಿರಿಕ್ತ ಹೇಳಿಕೆ

ಓರ್ವ ಪೊಲೀಸ್ ಸಾಕ್ಷಿದಾರ ಸುಳ್ಳು ಹೇಳುತ್ತಿದ್ದಾರೆ ಎಂದ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ6 Oct 2021 10:04 PM IST
share
ದಿಲ್ಲಿ ಗಲಭೆ ಪ್ರಕರಣದ ಆರೋಪಿಗಳ ಗುರುತಿಗೆ ಸಂಬಂಧಿಸಿ ಇಬ್ಬರು ಪೊಲೀಸ್ ಸಿಬ್ಬಂದಿಯ ವ್ಯತಿರಿಕ್ತ ಹೇಳಿಕೆ

ಹೊಸದಿಲ್ಲಿ,ಅ.6: ಈಶಾನ್ಯ ದಿಲ್ಲಿ ಗಲಭೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭ ಓರ್ವ ಪೊಲೀಸ್ ತಾನು  ಆರೋಪಿ ಗಲಭೆಕೋರರನ್ನು  ಗುರುತಿಸಿರುವುದಾಗಿ ಹೇಳಿದರೆ, ಇನ್ನೋರ್ವ ಪೊಲೀಸ್ ಅಧಿಕಾರಿ, ಅವರನ್ನು ತನಗೆ ಗುರುತಿಸಲು ಸಾಧ್ಯವಾಗಿಲ್ಲವೆಂದು ಹೇಳಿಕೆ ನೀಡಿರುವುದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯವು ಇವರಿಬ್ಬರಲ್ಲಿ ಒಬ್ಬಾತ ಸುಳ್ಳು ಹೇಳುತ್ತಿದ್ದಾನೆಂದು ಆಕ್ಷೇಪ ವ್ಯಕ್ತಪಡಿಸಿದೆ.

‘ಇದು ನಮ್ಮ ವ್ಯವಸ್ಥೆಯ ಶೋಚನೀಯ ಪರಿಸ್ಥಿತಿಯಾಗಿದೆ’ ಎಂದು ಹೆಚ್ಚುವರಿ ಸೆಶನ್ಸ್ ನ್ಯಾಯಾಧೀಶ ವಿನೋದ್ ಯಾದವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಅವರು ಈಶಾನ್ಯ ದಿಲ್ಲಿ ಯ ಪೊಲೀಸ್ ಉಪ ಆಯುಕ್ತರಿಂದ ವರದಿಯನ್ನು ಕೋರಿದ್ದಾರೆ.


2020ರ ಫೆಬ್ರವರಿಯಲ್ಲಿ ನಡೆದ ಈಶಾನ್ಯ ದಿಲ್ಲಿ ಗಲಭೆ ಪ್ರಕರಣದ ವಿಚಾರಣೆ ಸಂದರ್ಭ ನಾಲ್ಕು ಮಂದಿ ಪ್ರಾಸಿಕ್ಯೂಶನ್ ಸಾಕ್ಷಿದಾರರ ಪರಿಶೀಲನೆಯ ಸಂದರ್ಭ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಗಲಭೆಯಲ್ಲಿ ಕನಿಷ್ಠ 53 ಮಂದಿ ಸಾವನ್ನಪ್ಪಿದ್ದು, 700ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದ ಹೆಡ್ ಕಾನ್ ಸ್ಟೇಬಲ್ ಒಬ್ಬರು ಆರೋಪಿ ಗಲಭೆಕೋರರಾದ ವಿಕಾಸ್ ಕಶ್ಯಪ್, ಗೋಲು ಕಶ್ಯಪ್, ಹಾಗೂ ರಿಂಕು ಸಬ್ಝಿವಾಲಾ ಅವರನ್ನು ಗುರುತಿಸಿರುವುದಾಗಿ ಹೇಳಿದ್ದಾರೆ. ಅವರನ್ನು ಪ್ರಾಸಿಕ್ಯೂಶನ್ ಸಾಕ್ಷಿಗಳಲ್ಲಿ ಒಬ್ಬರೆಂದು ಗುರುತಿಸಲಾಗಿದೆ.
‘‘ನಾನು 2019ರವರೆಗೆ ಸಂಬಂಧಿತ ಪ್ರದೇಶದಲ್ಲಿ ಪಹರೆ ಅಧಿಕಾರಿ (ಬೀಟ್ ಆಫೀಸರ್)ಯಾಗಿ ಕಾರ್ಯನಿರ್ವಹಿಸುತ್ತಿದ್ದೆ. ಆರೋಪಿಗಳಾದ ವಿಕಾಸ್ ಕಶ್ಯಪ್, ಗೋಲು ಕಶ್ಯಪ್ ಹಾಗೂ ರಿಂಕು ಸಬ್ಜಿವಾಲಾ ಈ ನಾಲ್ವರ ಮುಖ ಪರಿಚಯ ದಿಲ್ಲಿ ಗಲಭೆಗೆ ಮುನ್ನವೇ ನನಗೆ ಇತ್ತೆಂದು ಕಾನ್ಸ್ಟೇಬಲ್ ನ್ಯಾಯಾಲಯಕ್ಕೆ ತಿಳಿಸಿದರು.

ಗಲಭೆ ನಡೆದ ಸ್ಥಳದಲ್ಲಿ ಆರೋಪಿಗಳು ಸ್ಥಳದಲ್ಲಿ ಇದ್ದುದನ್ನು ಹಾಗೂ ಅವರನ್ನು ಅವರವರ ಹೆಸರು ಮತ್ತು ಉದ್ಯೋಗಗಳಿಂದ ಪೊಲೀಸ್ ಕಾನ್ಸ್ಟೇಬಲ್ ಗುರುತಿಸಿದ್ದನ್ನು ಹೆಚ್ಚುವರಿ ಸೆಶನ್ಸ್ ನ್ಯಾಯಾಧೀಶ ವಿನೋದ್ ಯಾದವ್ ಗಮನಕ್ಕೆ ತೆಗೆದುಕೊಂಡರು.
ಇದಕ್ಕೆ ವ್ಯತಿರಿಕ್ತವಾಗಿ ಇನ್ನೋರ್ವ ಪ್ರಾಸಿಕ್ಯೂಶನ್ ಸಾಕ್ಷಿದಾರರಾದ, ಸಹಾಯಕ ಸಬ್ ಇನ್ಸ್ಪೆಕ್ಟರ್ ಹೆಡ್ ಕಾನ್ ಸ್ಟೇಬಲ್ ಹೆಸರಿಸಿದ್ದ ಆರೋಪಿಗಳ ಪೈಕಿ ಮೂವರನ್ನು ತನಗೆ ಗುರುತಿಸಲು ಸಾಧ್ಯವಾಗಿಲ್ಲವೆಂದು ನ್ಯಾಯಾಲಯಕ್ಕೆ ತಿಳಿಸಿದರು.


‘ಪ್ರಕರಣದ ಉಳಿದ ಮೂವರು ಆರೋಪಿಗಳಿಗಾಗಿ ನಾನು ಹುಡುಕಾಡಿದ್ದೆ. ಆದರೆ ಅವರನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ’’ ಎಂದು ಎಎಸ್ಐ ಅವರು ನ್ಯಾಯಾಲಯಕ್ಕೆ ತಿಳಿಸಿದರು. ಈ ಮಧ್ಯೆ ಪ್ರಕರಣದ ತನಿಖಾಧಿಕಾರಿ (ಐಓ) ಅವರು ಹೇಳಿಕೆ ನೀಡಿ,ಈ ಮೂವರು ಆರೋಪಿಗಳ ಹೆಸರು ದಾಖಲೆಗಳಲ್ಲಿ ಇದ್ದರೂ ಅವರು ಗಲಭೆಯಲ್ಲಿ ಶಾಮೀಲಾಗಿದ್ದಾರೆಂಬುದನ್ನು ದೃಢಪಡಿಸುವ ಯಾವುದೇ ಪುರಾವೆಗಳು ಇಲ್ಲವೆಂದು ತಿಳಿಸಿದರು.

ಇದನ್ನು ಗಮನಕ್ಕೆ ತೆಗೆದುಕೊಂಡ ನ್ಯಾಯಾಧೀಶರು ‘‘ಆರೋಪಿ ವ್ಯಕ್ತಿಗಳ ಗುರುತುಗಳನ್ನು ತನಿಖೆಯ ಸಂದರ್ಭ ದೃಢಪಡಿಸಲು ಸಾಧ್ಯವಾಗಿಲ್ಲವೆಂದು ತನಿಖಾಧಿಕಾರಿ ಹೇಳಿದ್ದಾರೆ. ಆರೋಪಿ ವ್ಯಕ್ತಿಗಳನ್ನು ಬಂಧಿಸಲು ತನಿಖಾಧಿಕಾರಿ ಯಾವುದೇ ಪ್ರಯತ್ನಗಳನ್ನು ಮಾಡಿರುವ ಬಗ್ಗೆ ಯಾವುದೇ ಪ್ರಯತ್ನಗಳು ನಡೆದಿದೆಯೆಂಬುದಕ್ಕೆ ಯಾವುದೇ ದಾಖಲೆಗಳು ದೊರೆತಿಲ್ಲ. ಇಬ್ಬರಲ್ಲಿ ಓರ್ವ ಪೊಲೀಸ್ ಸಾಕ್ಷಿದಾರನು ಸುಳ್ಳು ಹೇಳುತ್ತಿರುವುದಾಗಿ ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ಇದು ಭಾರತೀಯ ದಂಡಸಂಹಿತೆಯ 193ನೇ ಸೆಕ್ಷನ್ ಅಡಿ ದಂಡನೀಯ ಅಪರಾಧವಾಗಿದೆ ಎಂದರು.

ಈ ಮೂವರು ಆರೋಪಿಗಳನ್ನು ದಿಲ್ಲಿ ಗಲಭೆಗೆ ಸಂಬಂಧಿಸಿದ ಇನ್ನೊಂದು ಪ್ರಕರಣದ ಎಫ್ಐಆರ್ನಲ್ಲಿಯೂ ಹೆಸರಿಸಲಾಗಿದೆ. ಅದರಲ್ಲೂ ಅವರನ್ನು ತನಿಖೆಗೊಳಪಡಿಸಿಲ್ಲವೆಂದು  ಪ್ರತಿವಾದಿ ವಕೀಲರು ನಾಯಾಲದ ಗಮನಕ್ಕೆ ತಂದರು. ಪ್ರಾಸಿಕ್ಯೂಶನ್ ಪುರಾವೆಯನ್ನು ದಾಖಲಿಸುವ ಕಾರ್ಯವನ್ನು ನ್ಯಾಯಾಲಯ ಪೂರ್ಣಗೊಳಿಸಿದ್ದು, ಆರೋಪಿಗಳ ಹೇಳಿಕೆಯನ್ನು ಅಕ್ಟೋಬರ್ 30ರಂದು ದಾಖಲಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X